AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಎಲ್ಲೆಲ್ಲೂ ‘ವಾರ್ 2’, ‘ಕೂಲಿ’ ಅಬ್ಬರ: ಸಿನಿಪ್ರಿಯರಿಗೆ ಡಬಲ್ ಮನರಂಜನೆ

ಜೂನಿಯರ್ ಎನ್​ಟಿಆರ್ ಮತ್ತು ಹೃತಿಕ್ ರೋಷನ್ ಅಭಿಮಾನಿಗಳು ‘ವಾರ್ 2’ ನೋಡಿ ಎಂಜಾಯ್ ಮಾಡಲಿದ್ದಾರೆ. ‘ಕೂಲಿ’ ಸಿನಿಮಾ ನೋಡಿ ರಜನಿಕಾಂತ್, ನಾಗಾರ್ಜುನ, ಆಮಿರ್ ಖಾನ್ ಫ್ಯಾನ್ಸ್ ಮನರಂಜನೆ ಪಡೆಯಲಿದ್ದಾರೆ. ಈ ಎರಡು ಹೈವೋಲ್ಟೇಜ್ ಸಿನಿಮಾಗಳು ಒಂದೇ ದಿನ ತೆರೆಕಾಣುತ್ತಿದ್ದು, ಪೈಪೋಟಿ ಜೋರಾಗಿದೆ.

ಈ ವಾರ ಎಲ್ಲೆಲ್ಲೂ ‘ವಾರ್ 2’, ‘ಕೂಲಿ’ ಅಬ್ಬರ: ಸಿನಿಪ್ರಿಯರಿಗೆ ಡಬಲ್ ಮನರಂಜನೆ
War 2, Coolie
ಮದನ್​ ಕುಮಾರ್​
|

Updated on: Aug 13, 2025 | 7:19 PM

Share

ಸರ್ಕಾರಿ ರಜೆಯ ದಿನವೇ ಸಿನಿಮಾ ಬಿಡುಗಡೆ ಆದರೆ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತದೆ. ಈ ವರ್ಷ ಸ್ವಾತಂತ್ರ್ಯೋತ್ಸವ ದಿನಾಚರಣೆ (ಆಗಸ್ಟ್ 15) ಶುಕ್ರವಾರ ಒಂದಿದೆ. ಅದಕ್ಕೂ ಒಂದು ದಿನ ಮುನ್ನವೇ ಬಹುನಿರೀಕ್ಷಿತ ಸಿನಿಮಾಗಳನ್ನು ಬಿಡುಗಡೆ ಮಾಡಿದರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಬಹುದು. ಅಲ್ಲದೇ, ಲಾಂಗ್ ವೀಕೆಂಡ್​​ನ ಲಾಭವನ್ನು ಪಡೆಯಬಹುದು ಎಂಬ ಲೆಕ್ಕಾಚಾರ ಇದೆ. ಹಾಗಾಗಿ ಆಗಸ್ಟ್ 14ರಂದು ‘ವಾರ್ 2’ (War 2) ಮತ್ತು ‘ಕೂಲಿ’ (Coolie) ಸಿನಿಮಾಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​, ರಜನಿಕಾಂತ್ (Rajinikanth) ಅವರ ಅಭಿಮಾನಿಗಳಿಗೆ ಮನರಂಜನೆಯ ಹಬ್ಬ ಆಗಲಿದೆ.

‘ಕೂಲಿ’ ಸಿನಿಮಾದಲ್ಲಿ ರಜನಿಕಾಂತ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಆಮಿರ್ ಖಾನ್, ನಾಗಾರ್ಜುನ, ಉಪೇಂದ್ರ, ರಚಿತಾ ರಾಮ್, ಶ್ರುತಿ ಹಾಸನ್, ಸತ್ಯರಾಜ್ ಮುಂತಾದವರು ಅಭಿನಯಿಸಿದ್ದಾರೆ. ಹಾಗಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಸದ್ದು ಮಾಡಲು ಸಜ್ಜಾಗಿದೆ. ಸ್ಟಾರ್ ಡೈರೆಕ್ಟರ್ ಲೋಕೇಶ್ ಕನಗರಾಜ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.

ಇನ್ನು, ‘ವಾರ್ 2’ ಸಿನಿಮಾದ ಹವಾ ಕೂಡ ಕಮ್ಮಿ ಏನಿಲ್ಲ. ‘ಕೂಲಿ’ ರೀತಿಯೇ ‘ವಾರ್ 2’ ಸಿನಿಮಾ ಕೂಡ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ. ಜೂನಿಯರ್​ ಎನ್​ಟಿಆರ್​ ಮತ್ತು ಹೃತಿಕ್ ರೋಷನ್ ಅವರು ಈ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಕಿಯಾರಾ ಅಡ್ವಾಣಿ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ‘ಯಶ್ ರಾಜ್ ಫಿಲ್ಮ್ಸ್’ ನಿರ್ಮಾಣದ ಈ ಚಿತ್ರಕ್ಕೆ ಅಯಾನ್ ಮುಖರ್ಜಿ ಅವರ ನಿರ್ದೇಶನವಿದೆ.

ಇದನ್ನೂ ಓದಿ
Image
ರಜನಿಕಾಂತ್ ತಾಯಿ, ಸಹೋದರಿ ಮತ್ತು ಗೆಳತಿಯಾಗಿ ನಟಿಸಿದ ಏಕೈಕ ನಾಯಕಿ ಇವರು
Image
ಕೇರಳಕ್ಕೆ ಬಂದ ರಜನಿಕಾಂತ್: ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್

ಜೂನಿಯರ್ ಎನ್​​ಟಿಆರ್ ಅವರ ಅಭಿಮಾನಿಗಳಿಗೆ ಈ ಸಿನಿಮಾ ತುಂಬಾ ಸ್ಪೆಷಲ್. ಯಾಕೆಂದರೆ, ಇದು ಅವರು ನಟಿಸಿರುವ ಮೊದಲ ಬಾಲಿವುಡ್ ಸಿನಿಮಾ. ಟ್ರೇಲರ್​ನಲ್ಲಿ ಅವರು ಮಿಂಚಿದ್ದಾರೆ. ಇಬ್ಬರು ಹೀರೋಗಳು ಇರುವುದರಿಂದ ಹೋಲಿಕೆ ಸಹಜ. ಫೈಟ್ ಮತ್ತು ಡ್ಯಾನ್ ವಿಚಾರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್​ ಅವರು ಪರಸ್ಪರ ಪೈಪೋಟಿ ನೀಡುವವರಂತೆ ನಟಿಸಿದ್ದಾರೆ.

ಇದನ್ನೂ ಓದಿ: ಸಿಂಗಪುರದಲ್ಲೂ ರಜನೀ ಹವಾ, ‘ಕೂಲಿ’ ಸಿನಿಮಾ ನೋಡಲು ರಜೆ ಘೋಷಣೆ

ಅಡ್ವಾನ್ಸ್ ಟಿಕೆಟ್ ಬುಕಿಂಗ್​​ನಲ್ಲಿ ‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾ ಮುಂದಿದೆ. ಮೊದಲ ದಿನ ಯಾವ ಸಿನಿಮಾಗೆ ಹೆಚ್ಚು ಕಲೆಕ್ಷನ್ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ. ಕರ್ನಾಟಕದಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ‘ಕೂಲಿ’, ‘ವಾರ್ 2’ ಸಿನಿಮಾಗಳು ಅಬ್ಬರದಿಂದ ‘ಸು ಫ್ರಮ್ ಸೋ’ ಕಲೆಕ್ಷನ್ ಮೇಲೆ ಪರಿಣಾಮ ಬೀರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು