ಮೌನಿ ರಾಯ್-ಸೂರಜ್ ದಾಂಪತ್ಯಕ್ಕೆ ಮುಳುವಾಯ್ತು ನಟಿಯ ಜನಪ್ರಿಯತೆ

ಖ್ಯಾತ ನಟಿ ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ವಿಚ್ಛೇದನ ವದಂತಿಗಳು ಬಲವಾಗಿವೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿ, ಮದುವೆ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಸೂರಜ್ ಅವರ ಕೀಳರಿಮೆ, ಮೌನಿ ಜನಪ್ರಿಯತೆಯ ಬಗ್ಗೆ ಅಸೂಯೆ ಮತ್ತು ಹಣಕಾಸಿನ ಮೋಸವೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಮೌನಿ ರಾಯ್ ಸುಳ್ಳು ಸುದ್ದಿ ಹಬ್ಬಿಸದಂತೆ ಕೇಳಿಕೊಂಡಿದ್ದರೂ, ವಿಚ್ಛೇದನವನ್ನು ಸ್ಪಷ್ಟವಾಗಿ ನಿರಾಕರಿಸಿಲ್ಲ.

ಮೌನಿ ರಾಯ್-ಸೂರಜ್ ದಾಂಪತ್ಯಕ್ಕೆ ಮುಳುವಾಯ್ತು ನಟಿಯ ಜನಪ್ರಿಯತೆ
ಮೌನಿ ದಂಪತಿ

Updated on: May 14, 2026 | 12:12 PM

ಖ್ಯಾತ ನಟಿ ಮೌನಿ ರಾಯ್ (Mouni Roy) ಮತ್ತು ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ 2022ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ಜೋಡಿ ಡಿವೋರ್ಸ್ ಪಡೆಯುತ್ತಿದೆ ಎಂಬ ವದಂತಿಗಳು ಬಲವಾಗಿ ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಲ್ಲದೆ, ಮದುವೆಯ ಫೋಟೋಗಳನ್ನೂ ಡಿಲೀಟ್ ಮಾಡಿದ್ದಾರೆ. ಈ ಮಧ್ಯೆ ಇವರ ವಿಚ್ಛೇದನಕ್ಕೆ ಅಸಲಿ ಕಾರಣವೇನು ಎಂಬ ಬಗ್ಗೆ ಒಂದು ಮಾಹಿತಿ ಹರಿದಾಡುತ್ತಿದೆ.

ವರದಿಗಳ ಪ್ರಕಾರ, ಸೂರಜ್ ನಂಬಿಯಾರ್ ಅವರಿಗೆ ಪತ್ನಿ ಮೌನಿ ರಾಯ್ ಅವರ ಜನಪ್ರಿಯತೆಯೇ ಮುಳ್ಳಾಗಿದೆ ಎನ್ನಲಾಗುತ್ತಿದೆ. ಖ್ಯಾತ ಪತ್ರಕರ್ತ ವಿಕ್ಕಿ ಲಾಲ್ವಾನಿ ಅವರ ವರದಿಯ ಪ್ರಕಾರ, ‘ಅಭಿಮಾನ್ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಅವರು ಪತ್ನಿ ಜಯಾ ಬಚ್ಚನ್ ಅವರ ಯಶಸ್ಸನ್ನು ಕಂಡು ಹೇಗೆ ಕೀಳರಿಮೆ ಅನುಭವಿಸಿದ್ದರೋ, ಸೂರಜ್ ಕೂಡ ಭಾರತಕ್ಕೆ ಬಂದಾಗ ಅದೇ ರೀತಿ ಅನುಭವಿಸುತ್ತಿದ್ದರಂತೆ. ಸೂರಜ್ ಕೋಟ್ಯಧಿಪತಿಯಾಗಿದ್ದರೂ, ಮುಂಬೈನಲ್ಲಿ ಅವರನ್ನು ಯಾರೂ ಗುರುತಿಸುತ್ತಿರಲಿಲ್ಲ. ಆದರೆ ಮೌನಿ ಹೋದ ಕಡೆಯಲ್ಲೆಲ್ಲಾ ಜನ ಮುತ್ತಿಕೊಳ್ಳುತ್ತಿದ್ದರು. ಅವರಿಗೆ ಇದರಿಂದ ತಾವು ನಿರ್ಲಕ್ಷ್ಯ ಭಾವನೆ ಮೂಡಿತು ಎನ್ನಲಾಗಿದೆ.

ಮತ್ತೊಂದು ಆಘಾತಕಾರಿ ಆರೋಪ:

ಕೇವಲ ಕೀಳರಿಮೆ ಮಾತ್ರವಲ್ಲದೆ, ಸೂರಜ್ ಅವರು ಮೌನಿ ರಾಯ್ ಅವರಿಗೆ ಮೋಸ ಮಾಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಪ್ರಚಾರಕ್ಕಾಗಿ ಮೌನಿಯನ್ನು ಬಳಸಿಕೊಂಡ ಸೂರಜ್, ಪತ್ನಿಯ ಹಣವನ್ನೂ ವೈಯಕ್ತಿಕವಾಗಿ ಉಪಯೋಗಿಸಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಸೂರಜ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು

ಈ ಎಲ್ಲಾ ವದಂತಿಗಳ ನಡುವೆ ಮೌನಿ ರಾಯ್ ಅವರು ಮೌನ ಮುರಿದಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ಅವರು, ‘ದಯವಿಟ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ. ನಮಗೆ ಸ್ವಲ್ಪ ಖಾಸಗಿತನ ನೀಡಿ’ ಎಂದು ಮನವಿ ಮಾಡಿದ್ದಾರೆ. ಆದರೆ ಅವರು ವಿಚ್ಛೇದನದ ಸುದ್ದಿಯನ್ನು ಎಲ್ಲಿಯೂ ಸ್ಪಷ್ಟವಾಗಿ ನಿರಾಕರಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us