AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?

ತೆಲುಗು ನಟಿ ಹೇಮಾ ಅವರನ್ನು ಸಿನಿಮಾ ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಸಂಘದ ಮುಖ್ಯಸ್ಥರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿ.ಆರ್​. ಫಾರ್ಮ್​ ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪ ಹೇಮಾ ಅವರ ಮೇಲಿದೆ.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?
ಹೇಮಾ
ಮದನ್​ ಕುಮಾರ್​
|

Updated on: Jun 05, 2024 | 9:24 PM

Share

ಟಾಲಿವುಡ್​ ನಟಿ ಹೇಮಾ (Hema) ಅವರು ಬೆಂಗಳೂರಿನಲ್ಲಿ ರೇವ್​ ಪಾರ್ಟಿ (Rave Party) ಮಾಡಿ ಈಗ ಪೊಲೀಸರ ಅತಿಥಿ ಆಗಿದ್ದಾರೆ. ಸಿಸಿಬಿ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜೂನ್​ 14ರ ತನಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ, ಇಂದು (ಜೂನ್​ 5) ಅವರನ್ನು 24 ಗಂಟೆಗಳ ಕಾಲ ಸಿಸಿಬಿ (CCB) ಕಸ್ಟಡಿಗೆ ನೀಡುವಂತೆ ಆನೇಕಲ್​ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ಇಷ್ಟೆಲ್ಲ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ಹೇಮಾ ಅವರಿಗೆ ಬುದ್ಧಿ ಕಲಿಸಲು ತೆಲುಗು ಚಿತ್ರರಂಗದ ಕಲಾವಿದರು ಕೂಡ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಆರಂಭದಲ್ಲಿ ಹೇಮಾ ಮೇಲೆ ರೇವ್​ ಪಾರ್ಟಿ ಆರೋಪ ಕೇಳಿಬಂದಾಗ ಅದನ್ನು ಅವರು ತಳ್ಳಿ ಹಾಕಿದ್ದರು. ತಾವು ಬೆಂಗಳೂರಿಗೆ ಹೋಗಿಲ್ಲ, ಹೈದರಾಬಾದ್​ನಲ್ಲೇ ಇರುವುದಾಗಿ ವಿಡಿಯೋ ಮೂಲಕ ಜನರನ್ನು ಮತ್ತು ಮಾಧ್ಯಮದವರನ್ನು ಯಾಮಾರಿಸಲು ಅವರು ಪ್ರಯತ್ನಿಸಿದ್ದರು. ಆದರೆ ಟಾಲಿವುಡ್​ನ ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಅವರು ಹೇಮಾ ಪರ ಹೇಳಿಕೆ ನೀಡಿದ್ದರು. ಆದರೆ ಈಗ ಸಂಘದಿಂದ ಹೇಮಾ ಅವರನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಈ ಮೊದಲು ಮಾತನಾಡಿದ್ದ ಮಂಚು ವಿಷ್ಣು ಅವರು, ‘ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದರು. ಸದ್ಯದ ಮಾಹಿತಿ ಪ್ರಕಾರ ಹೇಮಾ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಗ್ಸ್​ ಸೇವನೆ ಸಾಬೀತಾಗಿದೆ. ಆ ಕಾರಣದಿಂದಲೇ ಹೇಮಾ ಅವರನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೇಮಾರನ್ನು ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಸಿನಿಮಾ ಕಲಾವಿದರ ಸಂಘದಿಂದ ಹೇಮಾ ಅವರನ್ನು ಅಮಾನತು ಮಾಡುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಂದು (ಜೂನ್​ 5) ಹೇಮಾರನ್ನು ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಈ ಹಂತದಲ್ಲೂ ಕೂಡ ತಾವು ನಿರಪರಾಧಿ ಎಂದೇ ಅವರು ವಾದಿಸುತ್ತಿದ್ದಾರೆ. ಸದ್ಯ ತನಿಖೆ ಚುರುಕುಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ