AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?

ತೆಲುಗು ನಟಿ ಹೇಮಾ ಅವರನ್ನು ಸಿನಿಮಾ ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಸಂಘದ ಮುಖ್ಯಸ್ಥರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿ.ಆರ್​. ಫಾರ್ಮ್​ ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪ ಹೇಮಾ ಅವರ ಮೇಲಿದೆ.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?
ಹೇಮಾ
ಮದನ್​ ಕುಮಾರ್​
|

Updated on: Jun 05, 2024 | 9:24 PM

Share

ಟಾಲಿವುಡ್​ ನಟಿ ಹೇಮಾ (Hema) ಅವರು ಬೆಂಗಳೂರಿನಲ್ಲಿ ರೇವ್​ ಪಾರ್ಟಿ (Rave Party) ಮಾಡಿ ಈಗ ಪೊಲೀಸರ ಅತಿಥಿ ಆಗಿದ್ದಾರೆ. ಸಿಸಿಬಿ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜೂನ್​ 14ರ ತನಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ, ಇಂದು (ಜೂನ್​ 5) ಅವರನ್ನು 24 ಗಂಟೆಗಳ ಕಾಲ ಸಿಸಿಬಿ (CCB) ಕಸ್ಟಡಿಗೆ ನೀಡುವಂತೆ ಆನೇಕಲ್​ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ಇಷ್ಟೆಲ್ಲ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ಹೇಮಾ ಅವರಿಗೆ ಬುದ್ಧಿ ಕಲಿಸಲು ತೆಲುಗು ಚಿತ್ರರಂಗದ ಕಲಾವಿದರು ಕೂಡ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಆರಂಭದಲ್ಲಿ ಹೇಮಾ ಮೇಲೆ ರೇವ್​ ಪಾರ್ಟಿ ಆರೋಪ ಕೇಳಿಬಂದಾಗ ಅದನ್ನು ಅವರು ತಳ್ಳಿ ಹಾಕಿದ್ದರು. ತಾವು ಬೆಂಗಳೂರಿಗೆ ಹೋಗಿಲ್ಲ, ಹೈದರಾಬಾದ್​ನಲ್ಲೇ ಇರುವುದಾಗಿ ವಿಡಿಯೋ ಮೂಲಕ ಜನರನ್ನು ಮತ್ತು ಮಾಧ್ಯಮದವರನ್ನು ಯಾಮಾರಿಸಲು ಅವರು ಪ್ರಯತ್ನಿಸಿದ್ದರು. ಆದರೆ ಟಾಲಿವುಡ್​ನ ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಅವರು ಹೇಮಾ ಪರ ಹೇಳಿಕೆ ನೀಡಿದ್ದರು. ಆದರೆ ಈಗ ಸಂಘದಿಂದ ಹೇಮಾ ಅವರನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಈ ಮೊದಲು ಮಾತನಾಡಿದ್ದ ಮಂಚು ವಿಷ್ಣು ಅವರು, ‘ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದರು. ಸದ್ಯದ ಮಾಹಿತಿ ಪ್ರಕಾರ ಹೇಮಾ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಗ್ಸ್​ ಸೇವನೆ ಸಾಬೀತಾಗಿದೆ. ಆ ಕಾರಣದಿಂದಲೇ ಹೇಮಾ ಅವರನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೇಮಾರನ್ನು ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಸಿನಿಮಾ ಕಲಾವಿದರ ಸಂಘದಿಂದ ಹೇಮಾ ಅವರನ್ನು ಅಮಾನತು ಮಾಡುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಂದು (ಜೂನ್​ 5) ಹೇಮಾರನ್ನು ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಈ ಹಂತದಲ್ಲೂ ಕೂಡ ತಾವು ನಿರಪರಾಧಿ ಎಂದೇ ಅವರು ವಾದಿಸುತ್ತಿದ್ದಾರೆ. ಸದ್ಯ ತನಿಖೆ ಚುರುಕುಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ