AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?

ತೆಲುಗು ನಟಿ ಹೇಮಾ ಅವರನ್ನು ಸಿನಿಮಾ ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಸಂಘದ ಮುಖ್ಯಸ್ಥರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿ.ಆರ್​. ಫಾರ್ಮ್​ ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪ ಹೇಮಾ ಅವರ ಮೇಲಿದೆ.

ಡ್ರಗ್ಸ್​ ಪಾರ್ಟಿ ಮಾಡಿದ ನಟಿ ಹೇಮಾಗೆ ಬುದ್ಧಿ ಕಲಿಸಲು ಮುಂದಾದ ತೆಲುಗು ಸಿನಿಮಂದಿ?
ಹೇಮಾ
ಮದನ್​ ಕುಮಾರ್​
|

Updated on: Jun 05, 2024 | 9:24 PM

Share

ಟಾಲಿವುಡ್​ ನಟಿ ಹೇಮಾ (Hema) ಅವರು ಬೆಂಗಳೂರಿನಲ್ಲಿ ರೇವ್​ ಪಾರ್ಟಿ (Rave Party) ಮಾಡಿ ಈಗ ಪೊಲೀಸರ ಅತಿಥಿ ಆಗಿದ್ದಾರೆ. ಸಿಸಿಬಿ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಜೂನ್​ 14ರ ತನಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ, ಇಂದು (ಜೂನ್​ 5) ಅವರನ್ನು 24 ಗಂಟೆಗಳ ಕಾಲ ಸಿಸಿಬಿ (CCB) ಕಸ್ಟಡಿಗೆ ನೀಡುವಂತೆ ಆನೇಕಲ್​ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ಇಷ್ಟೆಲ್ಲ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ಹೇಮಾ ಅವರಿಗೆ ಬುದ್ಧಿ ಕಲಿಸಲು ತೆಲುಗು ಚಿತ್ರರಂಗದ ಕಲಾವಿದರು ಕೂಡ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಆರಂಭದಲ್ಲಿ ಹೇಮಾ ಮೇಲೆ ರೇವ್​ ಪಾರ್ಟಿ ಆರೋಪ ಕೇಳಿಬಂದಾಗ ಅದನ್ನು ಅವರು ತಳ್ಳಿ ಹಾಕಿದ್ದರು. ತಾವು ಬೆಂಗಳೂರಿಗೆ ಹೋಗಿಲ್ಲ, ಹೈದರಾಬಾದ್​ನಲ್ಲೇ ಇರುವುದಾಗಿ ವಿಡಿಯೋ ಮೂಲಕ ಜನರನ್ನು ಮತ್ತು ಮಾಧ್ಯಮದವರನ್ನು ಯಾಮಾರಿಸಲು ಅವರು ಪ್ರಯತ್ನಿಸಿದ್ದರು. ಆದರೆ ಟಾಲಿವುಡ್​ನ ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಅವರು ಹೇಮಾ ಪರ ಹೇಳಿಕೆ ನೀಡಿದ್ದರು. ಆದರೆ ಈಗ ಸಂಘದಿಂದ ಹೇಮಾ ಅವರನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಈ ಮೊದಲು ಮಾತನಾಡಿದ್ದ ಮಂಚು ವಿಷ್ಣು ಅವರು, ‘ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದರು. ಸದ್ಯದ ಮಾಹಿತಿ ಪ್ರಕಾರ ಹೇಮಾ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಗ್ಸ್​ ಸೇವನೆ ಸಾಬೀತಾಗಿದೆ. ಆ ಕಾರಣದಿಂದಲೇ ಹೇಮಾ ಅವರನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೇಮಾರನ್ನು ಕಲಾವಿದರ ಸಂಘದಿಂದ ಅಮಾನತು ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಸಿನಿಮಾ ಕಲಾವಿದರ ಸಂಘದಿಂದ ಹೇಮಾ ಅವರನ್ನು ಅಮಾನತು ಮಾಡುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇಂದು (ಜೂನ್​ 5) ಹೇಮಾರನ್ನು ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಈ ಹಂತದಲ್ಲೂ ಕೂಡ ತಾವು ನಿರಪರಾಧಿ ಎಂದೇ ಅವರು ವಾದಿಸುತ್ತಿದ್ದಾರೆ. ಸದ್ಯ ತನಿಖೆ ಚುರುಕುಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ