AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು

Movie duration: 90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’,‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ.

ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು
Devil And Dhurandhar
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 18, 2025 | 5:16 PM

Share

90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’, ‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ.

ಈಗಿನ ಕಾಲದಲ್ಲಿ ಮನರಂಜನೆಗೆ ನಾನಾ ಆಯ್ಕೆಗಳಿವೆ. ಹೀಗಾಗಿ, ಸಿನಿಮಾ ನೋಡಿಯೇ ಮನರಂಜನೆ ಪಡೆಯಬೇಕು ಎಂಬುದು ಯಾರಿಗೂ ಇಲ್ಲ. ಮೊದಲಿನಷ್ಟು ತಾಳ್ಮೆಯೂ ಜನರಿಗೆ ಇಲ್ಲ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಕಾರಣದಿಂದಲೇ ಸಿನಿಮಾದ ಅವಧಿಯನ್ನು ಎರಡು ಗಂಟೆಯಿಂದ ಎರಡೂವರೆ ಗಂಟೆಗೆ ಸೀಮಿತ ಮಾಡಲಾಗಿತ್ತು. ಆದರೆ, ಕೆಲವು ನಿರ್ದೇಶಕರು ಧೈರ್ಯ ಮಾಡಿ ಈ ನಿಯಮವನ್ನು ಮುರಿಯುವ ಪ್ರಯತ್ನದಲ್ಲಿ ಇದ್ದಾರೆ ಎನ್ನಬಹುದು.

ಕಳೆದ ವರ್ಷಾಂತ್ಯಕ್ಕೆ ಬಂದ ‘ಪುಷ್ಪ 2’ ಸಿನಿಮಾ 3 ಗಂಟೆ 21 ನಿಮಿಷ ಇತ್ತು. ಈ ವರ್ಷ ಬಂದು ಸೂಪರ್ ಹಿಟ್ ಆದ ‘ಧುರಂಧರ್’ ಚಿತ್ರದ ಅವಧಿ 3 ಗಂಟೆ 36 ನಿಮಿಷ. ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ರನ್ ಟೈಮ್ ಮೂರು ಗಂಟೆಗೆ (2 ಗಂಟೆ 49 ನಿಮಿಷ) ಸನಿಹವಾಗಿದೆ.

ಇದನ್ನೂ ಓದಿ:ಬಾಲಿವುಡ್​​ಗೆ ಎಂಟ್ರಿ ಕೊಡಲಿರುವ ರುಕ್ಮಿಣಿ ವಸಂತ್, ನಟಿ ಹೇಳಿದ್ದೇನು?

‘ಧುರಂಧರ್’ ಸಿನಿಮಾದ ರನ್​ ಟೈಮ್ ಚಿತ್ರಕ್ಕೆ ಮುಳುವಾಗಬಹುದು ಎನ್ನಲಾಗಿತ್ತು. ಆದರೆ, ಈ ಸಿನಿಮಾ 400+ ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​​ನ್ಲಿ ಸಾವಿರ ಕೋಟಿ ರೂಪಾಯಿ ಸಮೀಪಿಸುತ್ತಿದೆ. ಹೀಗಾಗಿ, ರನ್​ ಟೈಮ್ ಮುಖ್ಯವಾಗೋದಿಲ್ಲ.

‘ರಾಜ ಸಾಬ್’ ಹಾಗೂ ‘ಜನ ನಾಯಗನ್’ ಅವಧಿ ಕೂಡ ಮೂರು ಗಂಟೆ ಮೀರಿಸಿದೆ. ‘ರಾಜಾ ಸಾಬ್ ’ 3 ಗಂಟೆ 10 ನಿಮಿಷ ಹಾಗೂ ಜನ ನಾಯಗನ್ 3 ಗಂಟೆ 5 ನಿಮಿಷ ಇದೆ. ಹೀಗಾಗಿ, ರನ್ ಟೈಮ್ ಮುಖ್ಯವಾಗುವುದಿಲ್ಲ ಎಂಬುದನ್ನು ಜನರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವರ್ಷ ಈ ಬದಲಾವಣೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 18 December 25

Follow Us
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ