AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘45’ ಸಿನಿಮಾ ವಿಮರ್ಶೆ; ಅರ್ಜುನ್ ಜನ್ಯ ಮ್ಯಾಜಿಕ್​​ನಲ್ಲಿ ‘ಶಿವ’ತಾಂಡವ;

‘45’ ಸಿನಿಮಾ ವಿಮರ್ಶೆ; ಅರ್ಜುನ್ ಜನ್ಯ ಮ್ಯಾಜಿಕ್​​ನಲ್ಲಿ ‘ಶಿವ’ತಾಂಡವ;
45 ಸಿನಿಮಾ
45
UA
  • Time - 150 Minutes
  • Released - ಡಿಸೆಂಬರ್ 25, 2025
  • Language - ಕನ್ನಡ
  • Genre - ಫ್ಯಾಂಟಸಿ ಆ್ಯಕ್ಷನ್ ಡ್ರಾಮಾ
Cast - ಶಿವರಾಜ್​​ಕುಮಾರ್, ರಾಜ್ ಬಿ ಶೆಟ್ಟಿ, ಉಪೇಂದ್ರ ಮೊದಲಾದವರು
Director - ಅರ್ಜುನ್ ಜನ್ಯ
4
Critic's Rating
ರಾಜೇಶ್ ದುಗ್ಗುಮನೆ
|

Updated on:Dec 24, 2025 | 1:08 PM

Share

ಅರ್ಜುನ್ ಜನ್ಯ ಅವರು ಇಷ್ಟು ವರ್ಷಗಳ ಕಾಲ ಮ್ಯೂಸಿಕ್ ಲೋಕದಲ್ಲಿ ಗಮನ ಸೆಳೆದವರು. ಅವರು ಈಗ ‘45’ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಎಂದರೆ ದೊಡ್ಡ ಚಾಲೆಂಜ್ ಇರುತ್ತದೆ. ಈ ಚಾಲೆಂಜ್ ಮಧ್ಯೆ ಅರ್ಜುನ್ ಅವರು ಮಲ್ಟಿ ಸ್ಟಾರರ್ ಹಾಗೂ ಬಿಗ್ ಬಜೆಟ್​ನ ಆಯ್ಕೆ ಮಾಡಿಕೊಂಡಿದ್ದಾರೆ. ಗ್ರಾಫಿಕ್ಸ್ ಬಹುವಾಗಿರೋ ‘45’ ಚಿತ್ರದ ವಿಮರ್ಶೆ ಇಲ್ಲಿದೆ.

ವಿನಯ್ (ರಾಜ್ ಬಿ ಶೆಟ್ಟಿ) ಓರ್ವ ಸಾಮಾನ್ಯ ಐಟಿ ಉದ್ಯೋಗಿ. ನಿತ್ಯ ಕಚೇರಿ ಹೋಗಿ ಬರುವ ಕಾಯಕ ಅವನದ್ದು. ತಾಯಿ ಹಾಗೂ ಪ್ರೀತಿಸಿದಾಕೆ ಆತನ ಪ್ರಪಂಚ. ಈ ಪ್ರಪಂಚದ ಒಳಗೆ ರಾಯಪ್ಪ (ಉಪೇಂದ್ರ) ಹಾಗೂ ಶಿವಪ್ಪನ (ಶಿವರಾಜ್​​ಕುಮಾರ್) ಆಗಮನ ಆಗುತ್ತದೆ. ಒಂದು ಕನಸಿನಿಂದ ಜೀವನ ಕಲಸು ಮೇಲೋಗರ ಆಗುತ್ತದೆ. ನಿಜ ಯಾವುದು-ಸುಳ್ಯಾವುದು ಎಂದು ಅರ್ಥೈಸಿಕೊಳ್ಳಲು ಆತ ವಿಫಲನಾಗುತ್ತಾನೆ. ಅಲ್ಲಿಂದ ಆತನ ಒದ್ದಾಟ ಶುರು. 45 ದಿನಗಳ ಆಟ ಕೂಡ ಆರಂಭವಾಗುತ್ತದೆ. ಅಲ್ಲಿ ರಾಯಪ್ಪ-ಶಿವಪ್ಪ ಹೇಗೆ ಬರುತ್ತಾರೆ? ಏಕೆ ಬರುತ್ತಾರೆ ಎಂದೆಲ್ಲ ಹೇಳುತ್ತಾ ಹೋದರೆ ಸಿನಿಮಾದ ಸ್ವಾದ ಉಳಿದುಕೊಳ್ಳುವುದಿಲ್ಲ. ಅದನ್ನು ಥಿಯೇಟರ್​​ನಲ್ಲಿ ನೋಡಿಯೇ ಆನಂದಿಸಬೇಕು.

ಅರ್ಜುನ್ ಜನ್ಯಗೆ ಫುಲ್ ಮಾರ್ಕ್ಸ್

ಈವರೆಗೆ ಎಲ್ಲರೂ ಅರ್ಜುನ್ ಜನ್ಯ ಅವರನ್ನು ಮ್ಯೂಸಿಕ್ ಡೈರೆಕ್ಟರ್ ಆಗಿ ಮಾತ್ರ ನೋಡಿದ್ದಾರೆ. ಅದ್ಭುತ ಮೆಲೋಡಿ ಹಾಡುಗಳನ್ನು ಅವರು ಚಿತ್ರರಂಗಕ್ಕೆ ನೀಡಿದ್ದಾರೆ. ತಮ್ಮಲ್ಲೊಬ್ಬ ಒಳ್ಳೆಯ ನಿರ್ದೇಶಕ ಇದ್ದಾನೆ ಎಂಬುದನ್ನು ‘45’ ಸಿನಿಮಾ ಮೂಲಕ ತೋರಿಸಿದ್ದಾರೆ. ಈ ಸಿನಿಮಾ ನೋಡಿದರೆ ಅರ್ಜುನ್ ಅವರು ಅದೆಷ್ಟೋ ವರ್ಷಗಳಿಂದ ತಮ್ಮಲ್ಲಿರುವ ನಿರ್ದೇಶಕನ ಪೋಷಿಸುತ್ತಾ ಬರುತ್ತಿದ್ದರೇನೋ ಎಂದನಿಸಿಬಿಡುತ್ತದೆ.

ಸಾವಿನ ಬಳಿಕದ ಮುಂದೇನು?

‘ಸಾವಿನ ಬಳಿಕ ಮುಂದೇನು?’ ಈ ರೀತಿಯ ಪ್ರಶ್ನೆ ಎಲ್ಲರಿಗೂ ಇರುತ್ತದೆ. ಇದಕ್ಕೆ ಅದರದ್ದೇ ಆದ ಉತ್ತರಗಳು ಸಿಗುತ್ತವೆ. ‘ಗರುಡ ಪುರಾಣ’ದ ಪ್ರತಿ ಪುಟ ತಿರುವು ಹಾಕಿದಾಗಲೂ ಹೊಸದೊಂದು ವಿಷಯ, ಜೀವನದ ಮತ್ತೊಂದು ರೂಪ ಗೊತ್ತಾಗುತ್ತದೆ. ಈ ವಿಷಯಗಳು ಸಿನಿಮಾದಲ್ಲೂ ಟ್ರಾವೆಲ್ ಆಗುತ್ತವೆ. ಗರುಡ ಪುರಾಣವನ್ನು ಸಿನಿಮಾ ಕಥೆಗೆ ಬ್ಲೆಂಡ್ ಮಾಡಿದ ಅರ್ಜುನ್ ಜನ್ಯ ಸ್ಟೈಲ್ ಇಷ್ಟ ಆಗುತ್ತದೆ.

ಇಲ್ಲಿ ಅರ್ಜುನ್ ಜನ್ಯ ಅವರು ಮತ್ತೊಂದು ತಂತ್ರಗಾರಿಕೆಯ ಬಗ್ಗೆ ಮಾತನಾಡಲೇಬೇಕು. ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಈ ಮೊದಲಿನ ಕಲ್ಟ್ ಸಿನಿಮಾಗಳ ದೃಶ್ಯಗಳನ್ನು ರೀ ಕ್ರಿಯೇಟ್ ಮಾಡಿದ್ದಾರೆ. ಹೊಂದಿಕೆ ಆಗೋ ಹಳೆಯ ಹಾಡುಗಳು ದೃಶ್ಯದ ಸ್ವಾದ ಹೆಚ್ಚಿಸಿವೆ. ಗ್ರಾಫಿಕ್ಸ್ ವಿಷಯದಲ್ಲಿ ಎಲ್ಲಿಯೂ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ. ಸುಧಾರಾಣಿಯ ಪಾತ್ರದ ಅವಶ್ಯಕತೆ ಇರಲಿಲ್ಲ ಎಂದನಿಸದೇ ಇರದು.

ಉಪ್ಪಿ vs ರಾಜ್

ಮಧ್ಯಮ ವರ್ಗದ ವ್ಯಕ್ತಿಯಾಗಿ ರಾಜ್ ಗಮನ ಸೆಳೆಯುತ್ತಾರೆ. ಮಧ್ಯಮ ವ್ಯಕ್ತಿಯ ತೊಳಲಾಟ,  ಒದ್ದಾಟ ಇಷ್ಟ ಆಗುತ್ತದೆ.  ಅಸಹಾಯಕತೆ ನೋವು ತರಿಸುತ್ತದೆ. ರಾಜ್ ನಟನೆಯಲ್ಲಿ ಹೆಚ್ಚು ಅಂಕ ಪಡೆಯುತ್ತಾರೆ. ಅವರ ಈ ಹಿಂದಿನ ಸಿನಿಮಾಗಳ ಪಾತ್ರಗಳು ಇಲ್ಲಿ ಬಂದು ಹೋಗುತ್ತವೆ. ಇನ್ನು ರಾಯಪ್ಪನ ಪಾತ್ರದಲ್ಲಿ ಉಪ್ಪಿ ತಮ್ಮ ಖದರ ತೋರಿಸಿದ್ದಾರೆ. ಸಿಗಾರ್ ಸೇದುವ ಸ್ಟೈಲ್, ಹೇರ್ ಸ್ಟೈಲ್, ಭಿನ್ನ ಉಡುಗೆ, ಚಿತ್ರ-ವಿಚಿತ್ರ ವಾಹನಗಳು ಅವರ ಮ್ಯಾನರಿಸಂಗೆ ಹೊಸ ಖದರ್ ನೀಡಿದೆ. ಕಣ್ಣಿನ ಮೂಲಕವೇ ಅವರು ಮಾತನಾಡುತ್ತಾರೆ. ಕೆಲ ದೃಶ್ಯಗಳಲ್ಲಿ ರಾಕ್ಷಸನ ರೀತಿ ಕಾಣಿಸುತ್ತಾರೆ. ಸಿನಿಮಾ ಉದ್ದಕ್ಕೂ ಉಪ್ಪಿ vs ರಾಜ್ ಎಂಬಂತಿದೆ.

ಶಿವಣ್ಣನ ಮೇಲುಗೈ

ಶಿವರಾಜ್​​ಕುಮಾರ್ ಶಿವಪ್ಪ ಪಾತ್ರ ಸಿನಿಮಾ ಮೆರಗು ಹೆಚ್ಚಿಸಿದೆ. ಅವರು ಇಡೀ ಚಿತ್ರಕ್ಕೆ ಬೇರೆಯದೇ ತೂಕ ಕೊಡುತ್ತಾರೆ. ಲೇಟ್​ ಆಗಿ ಎಂಟ್ರಿ ಕೊಟ್ಟರೂ ಪ್ರೇಕ್ಷಕರ ಮನಸ್ಸಿನಲ್ಲಿ ಹಾಗೆಯೇ ಆವರಿಸಿಕೊಂಡು ಬಿಡುತ್ತಾರೆ ಅವರು. ಶಿವಣ್ಣ ತಮ್ಮ ನಟನೆ ಮೂಲಕ ಒಂದು ಹೆಜ್ಜೆ ಮೇಲೆ ಕಾಣಿಸಿಕೊಳ್ಳುತ್ತಾರೆ. ಇದು ಅವರ ಹೆಚ್ಚುಗಾರಿಕೆ. ಅವರು ಚಿತ್ರದಲ್ಲಿ ವಿವಿಧ ಅವತಾರದಲ್ಲಿ ಕಾಣಿಸಿಕೊಳ್ಳುವುದರಿಂದ ಫ್ಯಾನ್ಸ್​​ಗೆ ಹಬ್ಬ ಫಿಕ್ಸ್. ಅದರಲ್ಲೂ ಕೊನೆಯಲ್ಲಿ ಬರೋ ಶಿವತಾಂಡವ ಹೊಸ ಗುಂಗು ಹತ್ತಿಸುತ್ತದೆ.

ಲಾರಿಯಲ್ಲಿ ಬೈಕ್ ಚೇಸಿಂಗ್ ದೃಶ್ಯ, ಮಾರುಕಟ್ಟೆ ಮೇಲಿನ ದಾಳಿ ಹಾಗೂ ಸಿನಿಮಾದ ಕೊನೆಯ 45 ನಿಮಿಷ ಮನರಂಜನೆಯ ರಸದೌತಣ ಬಡಿಸುತ್ತದೆ. ಸಿನಿಮಾದ ಬಿಜಿಎಂ ಅಲ್ಲಿ ಅರ್ಜುನ್ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಳ್ಳುತ್ತಾರೆ. ಇನ್ನು ಈ ಚಿತ್ರದಲ್ಲಿ ಲಾಜಿಕ್​​ಗೆ ಜಾಗವಿಲ್ಲ. ಇಲ್ಲಿ ಎಲ್ಲವೂ ಅರ್ಜುನ್ ಜನ್ಯ ಮ್ಯಾಜಿಕ್ ಮಾತ್ರ. ಕೆಲವೊಂದು ಡಾಟ್​​​ಗಳನ್ನು ಕೂಡಿಸದೇ ಸಿನಿಮಾ ನೋಡಿದರೆ ಇಷ್ಟ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:59 pm, Wed, 24 December 25

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು