AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆಚ್ಚಿನದ್ದನ್ನು ನಿರೀಕ್ಷಿಸಲಾಗಿತ್ತು’; ಅಜಿತ್ ನಟನೆಯ ‘ವಿದಾಮುಯರ್ಚಿ’ ಸಿನಿಮಾ ನೋಡಿ ಫ್ಯಾನ್ಸ್ ಹೇಳಿದ್ದಿಷ್ಟು

Vidaamuyarchi Twitter Review: ಅಜಿತ್ ಕುಮಾರ್ ಅವರ ‘ವಿದಾಮುಯರ್ಚಿ’ ಚಿತ್ರವು ಫೆಬ್ರವರಿ 6 ರಂದು ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಭಾರಿ ನಿರೀಕ್ಷೆ ಇತ್ತು. ಟ್ವಿಟರ್‌ನಲ್ಲಿ ಚರ್ಚೆಗಳು ನಡೆದಿದ್ದು, ಕೆಲವರು ಚಿತ್ರವನ್ನು ಹೊಗಳಿದರೆ, ಮತ್ತೆ ಕೆಲವರು ನಿರೀಕ್ಷೆಗೆ ತಕ್ಕಷ್ಟು ಇರಲಿಲ್ಲ ಎಂದಿದ್ದಾರೆ. ಅಜಿತ್ ಅವರ ಆಕ್ಷನ್ ದೃಶ್ಯಗಳು ಹಾಗೂ ಅವರ ಮತ್ತು ತ್ರಿಷಾ ಅವರ ರೊಮ್ಯಾಂಟಿಕ್ ದೃಶ್ಯಗಳು ಹೆಚ್ಚು ಮೆಚ್ಚುಗೆ ಪಡೆದಿವೆ.

‘ಹೆಚ್ಚಿನದ್ದನ್ನು ನಿರೀಕ್ಷಿಸಲಾಗಿತ್ತು’; ಅಜಿತ್ ನಟನೆಯ ‘ವಿದಾಮುಯರ್ಚಿ’ ಸಿನಿಮಾ ನೋಡಿ ಫ್ಯಾನ್ಸ್ ಹೇಳಿದ್ದಿಷ್ಟು
ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 06, 2025 | 12:28 PM

Share

ಅಜಿತ್ ಕುಮಾರ್ ನಟನೆಯ ‘ವಿದಾಮುಯರ್ಚಿ’ ಸಿನಿಮಾ ಇಂದು (ಫೆಬ್ರವರಿ 6) ರಿಲಿಸ್ ಆಗಿದೆ. ಈ ಚಿತ್ರದ ಮೇಲೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಗಾದರೆ, ಈ ನಿರೀಕ್ಷೆಯನ್ನು ಸಿನಿಮಾ ಮೀರಿತೆ? ಸಿನಿಮಾ ಹೇಗಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆಗಳು ನಡೆಯುತ್ತಿವೆ. ಸಿನಿಮಾ ನೋಡಿದ ಕೆಲವರು ಬಾಯ್ತುಂಬ ಹೊಗಳಿದರೆ, ಇನ್ನೂ ಕೆಲವರು ಸಿನಿಮಾದಿಂದ ಹೆಚ್ಚಿನದನ್ನು ನಿರೀಕ್ಷಿಸಿದ್ದೆವು ಎಂದು ಹೇಳಿದ್ದಾರೆ.

ಅಜಿತ್ ಕುಮಾರ್ ಅವರ ನಟನೆಯ ‘ವಿದಾಮುಯರ್ಚಿ’ ಚಿತ್ರವನ್ನು ಮಗಿಳ್ ತಿರುಮನೇನಿ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆಗಿದ್ದ ಟ್ರೇಲರ್ ಗಮನ ಸೆಳೆದಿತ್ತು. ಈಗ ಚಿತ್ರ ರಿಲೀಸ್ ಆಗಿದ್ದು ಅನೇಕರು ಸಿನಿಮಾನ ಹೊಗಳುವ ಕೆಲಸ ಮಾಡಿದ್ದಾರೆ. ಅಜಿತ್ ಅವರ ಆ್ಯಕ್ಷನ್ ದೃಶ್ಯಗಳು ಅನೇಕರಿಗೆ ಇಷ್ಟ ಆಗಿದೆ.

‘ಅಜಿತ್ ಅವರು ಮಾಸ್ ಆಗಿ ಎಂಟ್ರಿ ಕೊಡ್ತಾರೆ ಎಂದು ನಿರ್ದೇಶಕರು ಹೇಳಿದ್ದರು. ಹಾಗೆಯೇ ಅವರ ಎಂಟ್ರಿ ಆಗಿದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ಇನ್ನೂ ಕೆಲವರು ಅಜಿತ್ ಹಾಗೂ ತ್ರಿಷಾ ಅವರ ರೊಮ್ಯಾಂಟಿಕ್ ದೃಶ್ಯವನ್ನು ಹೊಗಳಿದ್ದಾರೆ. ಕೆಲವರು ಅನಿರುದ್ಧ್ ಅವರ ಹಿನ್ನೆಲೆ ಸಂಗೀತವನ್ನು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: ‘ವಿದಾಮುಯಾರ್ಚಿ’ ಟ್ರೇಲರ್ ರಿಲೀಸ್; ಆ್ಯಕ್ಷನ್ ಅವತಾರದಲ್ಲಿ ಗಮನ ಸೆಳೆದ ಅಜಿತ್

ಅಜಿತ್ ಅವರು ರೇಸ್ ದೃಶ್ಯಗಳನ್ನು ಸ್ವತಃ ತಾವೇ ಪ್ರಯತ್ನಿಸುತ್ತಾರೆ. ಈ ಸಂದರ್ಭದಲ್ಲೂ ಹಾಗೆಯೇ ಆಗಿದೆ. ಈ ಚಿತ್ರದಲ್ಲೂ ಅದು ಮುಂದುವರಿದಿದ್ದು, ಅಭಿಮಾನಿಗಳಿಗೆ ಸಾಕಷ್ಟು ಇಷ್ಟ ಆಗಿದೆ. ಕೆಲವರು ‘ಹೆಚ್ಚಿನದ್ದನ್ನು ನಿರೀಕ್ಷಿಸಲಾಗಿತ್ತು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ