AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bholaa Twitter Review: ರೀಮೇಕ್ ಕಿಂಗ್ ಅಜಯ್ ದೇವಗನ್​ಗೆ ಉಘೆ ಎಂದ ನೆಟ್ಟಿಗರು

ಅಜಯ್ ದೇವಗನ್ ನಟಿಸಿ, ನಿರ್ದೇಶನ ಮಾಡಿರುವ ಭೋಲಾ ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ. ಈ ಸಿನಿಮಾವು ತಮಿಳಿನ ಸೂಪರ್ ಹಿಟ್ ಸಿನಿಮಾ ಖೈದಿಯ ರೀಮೇಕ್ ಆಗಿದೆ.

Bholaa Twitter Review: ರೀಮೇಕ್ ಕಿಂಗ್ ಅಜಯ್ ದೇವಗನ್​ಗೆ ಉಘೆ ಎಂದ ನೆಟ್ಟಿಗರು
ಭೋಲಾ ಸಿನಿಮಾ
ಮಂಜುನಾಥ ಸಿ.
|

Updated on: Mar 30, 2023 | 4:07 PM

Share

ಅಜಯ್ ದೇವಗನ್ (Ajay Devagan) ನಟನೆಯ ಭೋಲಾ (Bholaa) ಹಿಂದಿ ಸಿನಿಮಾ ಇಂದು (ಮಾರ್ಚ್ 30) ಬಿಡುಗಡೆ ಆಗಿದೆ. ರೀಮೇಕ್ ಕಿಂಗ್ (Remake King) ಎಂದೇ ಕರೆಯಲಾಗುವ ಅಜಯ್ ದೇವಗನ್​ರ ಈ ಭೋಲಾ ಸಿನಿಮಾವು ತಮಿಳಿನ ಖೈದಿ (Khaidi) ಸಿನಿಮಾದ ರೀಮೇಕ್ ಆಗಿದೆ. ಸಿನಿಮಾವನ್ನು ಸ್ವತಃ ಅಜಯ್ ದೇವಗನ್ ನಿರ್ದೇಶನ ಮಾಡಿದ್ದಾರೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ.

ವಿಶ್ವದಾದ್ಯಂತ ಸುಮಾರು 4000 ಸ್ಕ್ರೀನ್​ಗಳಲ್ಲಿ ಭೋಲಾ ಸಿನಿಮಾ ಬಿಡುಗಡೆ ಆಗಿದೆ. ಮೊದಲ ದಿನ ಹಲವೆಡೆ ಉತ್ತಮ ಪ್ರತಿಕ್ರಿಯೆಗಳು ಸಿನಿಮಾಕ್ಕೆ ವ್ಯಕ್ತವಾಗಿವೆ. ಮೊದಲ ದಿನ ಸಿನಿಮಾ ನೋಡಿದ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಮರ್ಶೆ ಹಂಚಿಕೊಂಡಿದ್ದು, ಬಹುತೇಕರು ಸಿನಿಮಾ ಚೆನ್ನಾಗಿದೆಯೆಂದು ಹೊಗಳಿದ್ದಾರೆ.

ಜನಪ್ರಿಯ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಸಿನಿಮಾ ನೋಡಿ ಟ್ವಿಟ್ಟರ್​ನಲ್ಲಿ ವಿಮರ್ಶೆ ಹಂಚಿಕೊಂಡಿದ್ದು, ಇದೊಂದು ಪಕ್ಕಾ ಮಾಸ್ ಸಿನಿಮಾ. ತಮ್ಮ ನಟನೆ ಹಾಗೂ ಸ್ಕ್ರೀನ್ ಪ್ರೆಸೆನ್ಸ್​ನಿಂದ ಅಜಯ್ ದೇವಗನ್ ಹಾಗೂ ಟಬು ಸಿನಿಮಾವನ್ನು ಇನ್ನಷ್ಟು ಮಾಸ್ ಆಗಿಸಿದ್ದಾರೆ. ರವಿ ಬಸ್ರೂರು ಸಿನಿಮಾದ ಪ್ರಮುಖ ಪ್ಲಸ್ ಪಾಯಿಂಟ್. ಚಿತ್ರಕತೆ ಇನ್ನಷ್ಟು ಮೊನಚಾಗಿದ್ದು, ಸಿನಿಮಾದ ಅವಧಿ ತುಸು ಕಡಿಮೆ ಇದ್ದಿದ್ದರೆ ಇನ್ನಷ್ಟು ಚೆನ್ನಾಗಿರುತ್ತಿತ್ತು ಎಂದಿದ್ದಾರೆ. ಸಿನಿಮಾಕ್ಕೆ ಐದರಲ್ಲಿ ಮೂರು ರೇಟಿಂಗ್ಸ್ ನೀಡಿದ್ದಾರೆ.

ಎಕೆ ಶರ್ಮಾ ಹೆಸರಿನ ಸಿನಿಮಾ ಪ್ರೇಮಿಯೊಬ್ಬರು, ಭೋಲಾ ಸಿನಿಮಾ ಅತ್ಯದ್ಭುತ ಎಂದಿದ್ದಾರೆ. ಸಿನಿಮಾದ ಕೆಲವು ದೃಶ್ಯಗಳಂತೂ ಬಹಳ ಸಮಯ ನೆನಪಿನಲ್ಲಿ ಉಳಿಯುತ್ತವೆ. ಅತ್ಯುದ್ಭುತವಾದ ಸಿನಿಮಾಟೊಗ್ರಫಿ ಹಾಗೂ ಆಕ್ಷನ್ ಅನ್ನು ಸಿನಿಮಾ ಒಳಗೊಂಡಿದೆ. ಸಿನಿಮಾ ನೋಡಿ ವಿಶಲ್ ಹೊಡೆಯಿರಿ, ಎಂಜಾಯ್ ಮಾಡಿರಿ ಎಂದಿದ್ದಾರೆ.

ಇದನ್ನೂ ಓದಿ: Movies Releasing This Week: ಈ ವಾರ ಬಂದಿವೆ ಒಂದಕ್ಕಿಂತ ಒಂದು ದೊಡ್ಡ ಸಿನಿಮಾ, ನಿಮ್ಮ ಆಯ್ಕೆ ಯಾವುದು?

ಭೋಲಾ, ಪಕ್ಕಾ ಪೈಸಾ ವಸೂಲ್ ಸಿನಿಮಾ. ನಟನೆ, ಸ್ಟೋರಿ, ವಿಎಫ್ಎಕ್ಸ್ ಹಾಗೂ ಆಕ್ಷನ್ ದೃಶ್ಯಗಳು ನಿಜಕ್ಕೂ ಅದ್ಭುತವಾಗಿವೆ. ಎಲ್ಲದಕ್ಕೂ 100 ರಲ್ಲಿ 90 ಅಂಕ ನೀಡಬಹುದು ಎಂದಿದ್ದಾರೆ ಅಜಯ್ ಕಾಸ್ವಾನ್. ಭೋಲಾ ಒಂದು ಪಕ್ಕಾ ಆಕ್ಷನ್ ಸಿನಿಮಾ, ಆದರೆ ಸಿನಿಮಾದಲ್ಲಿ ಸೆಂಟಿಮೆಂಟ್ ಎಲಿಮೆಂಟ್ ಸಹ ಚೆನ್ನಾಗಿದೆ. ಪಕ್ಕಾ ಪೈಸಾ ವಸೂಲ್ ಸಿನಿಮಾ ಇದು. ಅಜಯ್ ದೇವಗನ್ ಆಕ್ಷನ್ ದೃಶ್ಯಗಳು ಸಿನಿಮಾವನ್ನು ಬೇರೆ ಲೆವೆಲ್​ಗೆ ಕೊಂಡೊಯ್ದಿವೆ. ಟಬು ಮತ್ತೊಮ್ಮೆ ಮಿಂಚಿದ್ದಾರೆ. ವಿಲನ್ ಪಾತ್ರದಲ್ಲಿ ದೀಪಕ್ ದೋಬ್ರಿಯಲ್ ಮತ್ತೊಮ್ಮೆ ಮಿಂಚಿದ್ದಾರೆ ಎಂದಿದ್ದಾರೆ ರೋಹಿತ್ ಜೈಸ್ವಾಲ್.

ಇದೊಂದು ಅದ್ಭುತವಾದ ಮಾಸ್ ಸಿನಿಮಾ, ಜೊತೆಗೆ ಸಖತ್ ಥ್ರಿಲ್ಲಿಂಗ್ ಅಂಶಗಳೂ ಇವೆ. ಅಜಯ್ ದೇವಗನ್, ಭೋಲಾ ಸಿನಿಮಾವನ್ನು ಪಕ್ಕಾ ಪರ್ಫೆಕ್ಷನ್ ರೀತಿಯಲ್ಲಿ ಸೃಷ್ಟಿ ಮಾಡಿದ್ದಾರೆ. ಸಿನಿಮಾದಲ್ಲಿ ಎಮೋಷನ್ ಇದೆ. ವಿಶಲ್ ಹೊಡೆಸಿಕೊಳ್ಳುವ ದೃಶ್ಯಗಳಿವೆ. ಅದ್ಭುತ ಡೈಲಾಗ್ಸ್​ಗಳಿವೆ. ಅತ್ಯದ್ಭುತವಾದ ಆಕ್ಷನ್ ದೃಶ್ಯಗಳಿವೆ. 3ಡಿ ಅನುಭವವಂತೂ ಅದ್ಭುತವಾಗಿದೆ ಎಂದಿದ್ದಾರೆ ಅಶ್ವಿನ್ ಕುಮಾರ್ ಹೆಸರಿನ ಸಿನಿಮಾ ಪ್ರೇಮಿ.

ಭೋಲಾ ಸಿನಿಮಾವು ತಮಿಳಿನ ಖೈದಿ ಸಿನಿಮಾದ ರೀಮೇಕ್ ಆಗಿದೆ. ಆದರೆ ಮೂಲ ಸಿನಿಮಾದ ಕತೆಗೆ ಕೆಲವು ಬದಲಾವಣೆಗಳನ್ನು ಮಾಡಿ ಸಿನಿಮಾವನ್ನು ತೆರೆಗೆ ತಂದಿದ್ದಾರೆ ನಿರ್ದೇಶಕ ಅಜಯ್ ದೇವಗನ್, ಮೂಲ ಸಿನಿಮಾದಲ್ಲಿ ಕಾರ್ತಿ ನಿರ್ವಹಿಸಿದ್ದ ನಾಯಕ ಪಾತ್ರದಲ್ಲಿ ಅಜಯ್ ದೇವಗನ್ ನಟಿಸಿದ್ದು, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಟಬು ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು