Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Pushpa Movie Review: ಅನೇಕ ಕಾರಣಗಳಿಂದ ‘ಪುಷ್ಪ’ ಚಿತ್ರದ ಕ್ರೇಜ್​ ಹೆಚ್ಚಿತ್ತು. ಈಗ ಸಿನಿಮಾ ನೋಡಿಬಂದವರು ಟ್ವಿಟರ್​ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
Follow us
| Updated By: ಮದನ್​ ಕುಮಾರ್​

Updated on: Dec 17, 2021 | 7:49 AM

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ‘ಪುಷ್ಪ’ ಸಿನಿಮಾ ಇಂದು (ಡಿ.17) ಅದ್ದೂರಿಯಾಗಿ ತೆರೆಕಂಡಿದೆ. ಅನೇಕ ಕಡೆಗಳಲ್ಲಿ ಮುಂಜಾನೆಯೇ ಶೋ ಆರಂಭ ಆಗಿದೆ. ತೆಲುಗಿನಲ್ಲಿ ತಯಾರಾದ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ ಮತ್ತು ತಮಿಳು ಭಾಷೆಗೂ ಡಬ್​ ಆಗಿ ಬಿಡುಗಡೆ ಆಗಿದೆ. ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬಂದ ಬಹುನಿರೀಕ್ಷಿತ ಸಿನಿಮಾ ಇದು. ಡಾಲಿ ಧನಂಜಯ, ಫಹಾದ್​ ಫಾಸಿಲ್ ಸೇರಿದಂತೆ ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸಮಂತಾ ಕಾಣಿಸಿಕೊಂಡಿರುವ ‘ಹು ಅಂತಿಮಾ ಮಾವ, ಊಹು ಅಂತಿಯಾ ಮಾವ..’ ಹಾಡಿನಿಂದ ‘ಪುಷ್ಪ’ ಚಿತ್ರದ ಕ್ರೇಜ್​ ಹೆಚ್ಚಿತ್ತು. ಈಗ ಸಿನಿಮಾ ನೋಡಿಬಂದವರು ಟ್ವಿಟರ್​ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಡಿಫರೆಂಟ್​ ಗೆಟಪ್​ನಲ್ಲಿ ಅಲ್ಲು ಅರ್ಜುನ್​ ಕಾಣಿಸಿಕೊಂಡಿದ್ದಾರೆ. ತುಂಬ ಮಾಸ್​ ಆಗಿ ಸಿನಿಮಾ ಮೂಡಿಬಂದಿದೆ. ರಶ್ಮಿಕಾ ಪಾತ್ರ ಕೂಡ ಭಿನ್ನವಾಗಿದೆ. ಕೆಲವರು ಈ ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದೊಂದು ಸಾಮಾನ್ಯ ಸಿನಿಮಾ ಎಂದು ಹೇಳುತ್ತಿದ್ದಾರೆ. ಟ್ವಿಟರ್​ನಲ್ಲಿ ಎಲ್ಲ ಬಗೆಯ ಪ್ರತಿಕ್ರಿಯೆಗಳು ಸಿಗುತ್ತಿವೆ.

‘ಅಲ್ಲು ಅರ್ಜುನ್​ ಅವರ ಅಪ್ಪಟ ಅಭಿಮಾನಿಯಾಗಿ ಹೇಳುತ್ತೇನೆ.. ಈ ಸಿನಿಮಾದ ಮೊದಲಾರ್ಧದಲ್ಲಿ 20 ನಿಮಿಷ ತುಂಬ ಸ್ಲೋ ಎನಿಸುತ್ತದೆ. ಆದರೆ ಇಡೀ ಸಿನಿಮಾದಲ್ಲಿ ನೀವು ಅಲ್ಲು ಅರ್ಜುನ್​ ಅವರನ್ನು ಬೇರೆಯದೇ ರೀತಿಯಲ್ಲಿ ನೋಡುತ್ತೀರಿ. ಮಾಸ್​ ಮಾಸ್​ ಮಾಸ್​. ಅಲ್ಲು ಅರ್ಜುನ್​ ಅಭಿಮಾನಿ ಎಂದು ಹೇಳಿಕೊಳ್ಳಲು ಹೆಮ್ಮೆ ಆಗುತ್ತದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ಫಸ್ಟ್​ ಹಾಫ್​ ಮುಗಿಯಿತು. ಇದು ಅಲ್ಲು ಅರ್ಜುನ್​ ಅವರ ಒನ್​ ಮ್ಯಾನ್​ ಶೋ’ ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಅಲ್ಲು ಅರ್ಜುನ್​ ಅವರ ರಗಡ್ ಲುಕ್​ ಮತ್ತು ಮ್ಯಾನರಿಸಂ ಸಖತ್​ ಇಷ್ಟ ಆಗುತ್ತದೆ. ಹಳ್ಳಿ ಹಿನ್ನೆಲೆಯಲ್ಲಿ ಎಲ್ಲ ಕಲಾವಿದರ ಡೈಲಾಗ್​ಗಳು ನಿಮ್ಮನ್ನು ಬೇರೊಂದು ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್​ ಅವರ ಲವ್​ ಹಾಗೂ ಕಾಮಿಡಿ ದೃಶ್ಯಗಳು ಚೆನ್ನಾಗಿ ಮೂಡಿಬಂದಿವೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ.

ಕೆಲವರಿಗೆ ಈ ಚಿತ್ರ ಇಷ್ಟ ಆಗಿಲ್ಲ. ಹಾಗಾಗಿ ನೆಗೆಟಿವ್​ ಪ್ರತಿಕ್ರಿಯೆಗಳು ಕೂಡ ಬಂದಿವೆ. ‘ಕೇವಲ ಎರಡು ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ. ಸಾಧಾರಣ ಅಥವಾ ಅದಕ್ಕಿಂತಲೂ ಕೆಳಗೆ. ಈ ಚಿತ್ರ ಹೀನಾಯವಾಗಿ ಸೋಲುವುದಿಲ್ಲ, ಅದ್ಭುತವಾಗಿ ಗೆಲ್ಲುವುದೂ ಇಲ್ಲ’ ಎಂಬ ಅಭಿಪ್ರಾಯ ಕೂಡ ಟ್ವಿಟರ್​ನಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ:

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ