AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Pushpa Movie Review: ಅನೇಕ ಕಾರಣಗಳಿಂದ ‘ಪುಷ್ಪ’ ಚಿತ್ರದ ಕ್ರೇಜ್​ ಹೆಚ್ಚಿತ್ತು. ಈಗ ಸಿನಿಮಾ ನೋಡಿಬಂದವರು ಟ್ವಿಟರ್​ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Dec 17, 2021 | 7:49 AM

Share

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ‘ಪುಷ್ಪ’ ಸಿನಿಮಾ ಇಂದು (ಡಿ.17) ಅದ್ದೂರಿಯಾಗಿ ತೆರೆಕಂಡಿದೆ. ಅನೇಕ ಕಡೆಗಳಲ್ಲಿ ಮುಂಜಾನೆಯೇ ಶೋ ಆರಂಭ ಆಗಿದೆ. ತೆಲುಗಿನಲ್ಲಿ ತಯಾರಾದ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ ಮತ್ತು ತಮಿಳು ಭಾಷೆಗೂ ಡಬ್​ ಆಗಿ ಬಿಡುಗಡೆ ಆಗಿದೆ. ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬಂದ ಬಹುನಿರೀಕ್ಷಿತ ಸಿನಿಮಾ ಇದು. ಡಾಲಿ ಧನಂಜಯ, ಫಹಾದ್​ ಫಾಸಿಲ್ ಸೇರಿದಂತೆ ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸಮಂತಾ ಕಾಣಿಸಿಕೊಂಡಿರುವ ‘ಹು ಅಂತಿಮಾ ಮಾವ, ಊಹು ಅಂತಿಯಾ ಮಾವ..’ ಹಾಡಿನಿಂದ ‘ಪುಷ್ಪ’ ಚಿತ್ರದ ಕ್ರೇಜ್​ ಹೆಚ್ಚಿತ್ತು. ಈಗ ಸಿನಿಮಾ ನೋಡಿಬಂದವರು ಟ್ವಿಟರ್​ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಡಿಫರೆಂಟ್​ ಗೆಟಪ್​ನಲ್ಲಿ ಅಲ್ಲು ಅರ್ಜುನ್​ ಕಾಣಿಸಿಕೊಂಡಿದ್ದಾರೆ. ತುಂಬ ಮಾಸ್​ ಆಗಿ ಸಿನಿಮಾ ಮೂಡಿಬಂದಿದೆ. ರಶ್ಮಿಕಾ ಪಾತ್ರ ಕೂಡ ಭಿನ್ನವಾಗಿದೆ. ಕೆಲವರು ಈ ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದೊಂದು ಸಾಮಾನ್ಯ ಸಿನಿಮಾ ಎಂದು ಹೇಳುತ್ತಿದ್ದಾರೆ. ಟ್ವಿಟರ್​ನಲ್ಲಿ ಎಲ್ಲ ಬಗೆಯ ಪ್ರತಿಕ್ರಿಯೆಗಳು ಸಿಗುತ್ತಿವೆ.

‘ಅಲ್ಲು ಅರ್ಜುನ್​ ಅವರ ಅಪ್ಪಟ ಅಭಿಮಾನಿಯಾಗಿ ಹೇಳುತ್ತೇನೆ.. ಈ ಸಿನಿಮಾದ ಮೊದಲಾರ್ಧದಲ್ಲಿ 20 ನಿಮಿಷ ತುಂಬ ಸ್ಲೋ ಎನಿಸುತ್ತದೆ. ಆದರೆ ಇಡೀ ಸಿನಿಮಾದಲ್ಲಿ ನೀವು ಅಲ್ಲು ಅರ್ಜುನ್​ ಅವರನ್ನು ಬೇರೆಯದೇ ರೀತಿಯಲ್ಲಿ ನೋಡುತ್ತೀರಿ. ಮಾಸ್​ ಮಾಸ್​ ಮಾಸ್​. ಅಲ್ಲು ಅರ್ಜುನ್​ ಅಭಿಮಾನಿ ಎಂದು ಹೇಳಿಕೊಳ್ಳಲು ಹೆಮ್ಮೆ ಆಗುತ್ತದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ಫಸ್ಟ್​ ಹಾಫ್​ ಮುಗಿಯಿತು. ಇದು ಅಲ್ಲು ಅರ್ಜುನ್​ ಅವರ ಒನ್​ ಮ್ಯಾನ್​ ಶೋ’ ಎಂದು ನೆಟ್ಟಿಗರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಅಲ್ಲು ಅರ್ಜುನ್​ ಅವರ ರಗಡ್ ಲುಕ್​ ಮತ್ತು ಮ್ಯಾನರಿಸಂ ಸಖತ್​ ಇಷ್ಟ ಆಗುತ್ತದೆ. ಹಳ್ಳಿ ಹಿನ್ನೆಲೆಯಲ್ಲಿ ಎಲ್ಲ ಕಲಾವಿದರ ಡೈಲಾಗ್​ಗಳು ನಿಮ್ಮನ್ನು ಬೇರೊಂದು ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್​ ಅವರ ಲವ್​ ಹಾಗೂ ಕಾಮಿಡಿ ದೃಶ್ಯಗಳು ಚೆನ್ನಾಗಿ ಮೂಡಿಬಂದಿವೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ.

ಕೆಲವರಿಗೆ ಈ ಚಿತ್ರ ಇಷ್ಟ ಆಗಿಲ್ಲ. ಹಾಗಾಗಿ ನೆಗೆಟಿವ್​ ಪ್ರತಿಕ್ರಿಯೆಗಳು ಕೂಡ ಬಂದಿವೆ. ‘ಕೇವಲ ಎರಡು ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ. ಸಾಧಾರಣ ಅಥವಾ ಅದಕ್ಕಿಂತಲೂ ಕೆಳಗೆ. ಈ ಚಿತ್ರ ಹೀನಾಯವಾಗಿ ಸೋಲುವುದಿಲ್ಲ, ಅದ್ಭುತವಾಗಿ ಗೆಲ್ಲುವುದೂ ಇಲ್ಲ’ ಎಂಬ ಅಭಿಪ್ರಾಯ ಕೂಡ ಟ್ವಿಟರ್​ನಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ:

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು