AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Badava Rascal First Half Review: ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​
ಧನಂಜಯ-ಅಮೃತಾ ಅಯ್ಯಂಗಾರ್
TV9 Web
| Edited By: |

Updated on: Dec 24, 2021 | 11:57 AM

Share

ಧನಂಜಯ (Dhananjay) ಹಾಗೂ ಅಮೃತಾ ಅಯ್ಯಂಗಾರ್ (Amrutha Iyengar)​ ನಟನೆಯ ‘ಬಡವ ರಾಸ್ಕಲ್​’ (Badava Rascal)ಇಂದು (ಡಿಸೆಂಬರ್​ 24) ತೆರೆಗೆ ಬಂದಿದೆ. ಕ್ರಿಸ್​ಮಸ್​ ಪ್ರಯುಕ್ತ ಈ ಸಿನಿಮಾ ರಿಲೀಸ್​ ಆಗಿದೆ. ಇದೇ ಮೊದಲ ಬಾರಿಗೆ ಆಟೋ ಡ್ರೈವರ್​ ಆಗಿ ಧನಂಜಯ ಕಾಣಿಸಿಕೊಂಡಿದ್ದಾರೆ. ‘ಟಗರು’, ‘ಪುಷ್ಪ’ ಚಿತ್ರಗಳ ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದ ಅವರು ಈಗ ಹೀರೋ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಈ ನಿರೀಕ್ಷೆಯನ್ನು ತಲುಪೋಕೆ ಈ ಚಿತ್ರದಿಂದ ಸಾಧ್ಯವಾಯಿತೇ? ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ಡಾಲಿ ಧನಂಜಯ ಅವರು ಮಿಡ್ಲ್​ ಕ್ಲಾಸ್​ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ನ್ಯಾಯ ಒದಗಿಸುವ  ಪ್ರಯತ್ನ ಮಾಡಿದ್ದಾರೆ.
  2. ‘ಬಡವ ರಾಸ್ಕಲ್​’ ಮೊದಲಾರ್ಧದಲ್ಲಿ ಫ್ರೆಂಡ್​ಶಿಪ್​ ಕಥೆ ಹೈಲೈಟ್​ ಆಗಿದೆ. ಟ್ರೇಲರ್​ನಲ್ಲಿ ನಿರೀಕ್ಷೆ ಮೂಡಿಸಿದ ರೀತಿಯಲ್ಲೇ ಗೆಳೆತನದ ಕಥೆ ಮೂಡಿಬಂದಿದೆ.
  3. ಪೂರ್ತಿ ಮೊದಲಾರ್ಧದಲ್ಲಿ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆಯುತ್ತವೆ. ಸಂಭಾಷಣೆಗಳು ಪ್ರೇಕ್ಷಕರಿಗೆ ​ಮನರಂಜನೆ ನೀಡುತ್ತವೆ.
  4. ಈ ಸಿನಿಮಾದಲ್ಲಿ ಪೋಷಕ ನಟ ನಾಗಭೂಷಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಕ್ಕಿದೆ. ಬಹುತೇಕ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ.
  5. ರಂಗಾಯಣ ರಘು ಮತ್ತು ತಾರಾ ಅನುರಾಧ ಅವರು ಕಥಾನಾಯಕನ ತಂದೆ-ತಾಯಿ ಆಗಿ ಮನಸೆಳೆಯುವ ಅಭಿನಯ ನೀಡಿದ್ದಾರೆ. ಅವರ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತವೆ.
  6. ಡಾಲಿ ಧನಂಜಯ ಮತ್ತು ಅಮೃತಾ ಅಯ್ಯಂಗಾರ್​ ಅವರ ಕಾಂಬಿನೇಷನ್​ ಚೆನ್ನಾಗಿದೆ. ಅವರಿಬ್ಬರ ಲವ್​ಸ್ಟೋರಿ ಸೆಕೆಂಡ್​ ಹಾಫ್​ನಲ್ಲಿ ಇನ್ನಷ್ಟು ತಿರುವುಗಳನ್ನು ಪಡೆದುಕೊಳ್ಳುವ ಸುಳಿವು ಸಿಕ್ಕಿದೆ.

ಇದನ್ನೂ ಓದಿ: Dhananjay: 20 ರೂ ಪೆಟ್ರೋಲ್ ಹಾಕಿಸ್ತೀವಿ ಕೊಡು ಎಂದು ಫ್ರೆಂಡ್ ಗಾಡಿ ತೆಗೆದುಕೊಂಡು ಹೋಗುತ್ತಿದ್ದೆವು; ಆ ದಿನಗಳನ್ನು ಸ್ಮರಿಸಿದ ಧನಂಜಯ್

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್