AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಡೇ ಮಿಯಾ ಚೋಟೆ ಮಿಯಾ’ ಟ್ವಿಟರ್ ವಿಮರ್ಶೆ; ಅಕ್ಷಯ್, ಟೈಗರ್​ಗಿಂತ ಪೃಥ್ವಿರಾಜ್​ಗೆ ಹೆಚ್ಚು ಅಂಕ

ಈ ಮೊದಲು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದ ಅಕ್ಷಯ್ ಕುಮಾರ್ ಅವರು ‘ನನಗಿಂತ ಪೃಥ್ವಿರಾಜ್​ ಪಾತ್ರಕ್ಕೆ ಹೆಚ್ಚು ಸಂಭಾಷಣೆ ಇದೆ’ ಎಂದು ಹೇಳಿದ್ದರು. ಈ ಮಾತು ಪ್ರೇಕ್ಷಕರಿಗೆ ನಿಜ ಎನಿಸಿದೆ. ಪೃಥ್ವಿರಾಜ್ ಪಾತ್ರಕ್ಕೆ ಹೆಚ್ಚು ತೂಕ ಇದೆ ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

‘ಬಡೇ ಮಿಯಾ ಚೋಟೆ ಮಿಯಾ’ ಟ್ವಿಟರ್ ವಿಮರ್ಶೆ; ಅಕ್ಷಯ್, ಟೈಗರ್​ಗಿಂತ ಪೃಥ್ವಿರಾಜ್​ಗೆ ಹೆಚ್ಚು ಅಂಕ
ಬಡೇ ಮಿಯಾ ಚೋಟೆ ಮಿಯಾ ಸಿನಿಮಾ ತಂಡ
Follow us
ರಾಜೇಶ್ ದುಗ್ಗುಮನೆ
|

Updated on:Apr 11, 2024 | 11:37 AM

ಅಕ್ಷಯ್ ಕುಮಾರ್ (Akshay Kumar), ಟೈಗರ್ ಶ್ರಾಫ್ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಇಂದು (ಏಪ್ರಿಲ್ 11) ರಿಲೀಸ್ ಆಗಿದೆ. ರಂಜಾನ್ ಪ್ರಯುಕ್ತ ಸಿನಿಮಾ ಬಿಡುಗಡೆ ಆಗಿದ್ದು, ದೊಡ್ಡ ಮೊತ್ತದಲ್ಲಿ ಕಲೆಕ್ಷನ್ ಮಾಡೋ ಸೂಚನೆ ನೀಡಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಕ್ಷಯ್ ಕುಮಾರ್, ಟೈಗರ್ ಶ್ರಾಫ್​ಗಿಂತ ಪೃಥ್ವಿರಾಜ್ ಪಾತ್ರ ಹೆಚ್ಚು ಇಷ್ಟ ಆಗಿದೆ ಎಂದು ಟ್ವಿಟರ್​ನಲ್ಲಿ ಫ್ಯಾನ್ಸ್ ವಿಮರ್ಶೆ ತಿಳಿಸುತ್ತಿದ್ದಾರೆ.

ಈ ಮೊದಲು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದ ಅಕ್ಷಯ್ ಕುಮಾರ್ ಅವರು ‘ನನಗಿಂತ ಪೃಥ್ವಿರಾಜ್​ ಪಾತ್ರಕ್ಕೆ ಹೆಚ್ಚು ಸಂಭಾಷಣೆ ಇದೆ’ ಎಂದು ಹೇಳಿದ್ದರು. ಈ ಮಾತು ಪ್ರೇಕ್ಷಕರಿಗೆ ನಿಜ ಎನಿಸಿದೆ. ಪೃಥ್ವಿರಾಜ್ ಪಾತ್ರಕ್ಕೆ ಹೆಚ್ಚು ತೂಕ ಇದೆ ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ‘ಭರ್ಜರಿ ಆ್ಯಕ್ಷನ್ ಸಿನಿಮಾ. ಆ್ಯಕ್ಷನ್ ಪ್ರಿಯರಿಗೆ ಇಷ್ಟ ಆಗಲಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಕೇವಲ ಆ್ಯಕ್ಷನ್ ಪ್ರಿಯರಿಗೆ ಮಾತ್ರ ಸಿನಿಮಾ ಇಷ್ಟ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಎರಡು ಬಾರಿ ಮೆಗಾಸ್ಟಾರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಪೃಥ್ವಿರಾಜ್ ಸುಕುಮಾರನ್

ಅಲ್ಲಿ ಅಬ್ಬಾಸ್ ಜಫರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಬರುವ ಟ್ವಿಸ್ಟ್​ಗಳನ್ನು ಪ್ರೇಕ್ಷಕರು ಸುಲಭದಲ್ಲಿ ಊಹಿಸಬಹುದು ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಹೊಸ ರೀತಿಯ ಆ್ಯಕ್ಷನ್ ದೃಶ್ಯಗಳು ಸಿನಿಮಾದಲ್ಲಿ ಇವೆ ಎಂದು ಅನೇಕರು ಹೇಳಿದ್ದಾರೆ. ವಿಲನ್ ಆಗಿ ಪೃಥ್ವಿರಾಜ್ ಅವರು ಇಷ್ಟ ಆಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Thu, 11 April 24

ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ