AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bheema First Half Review:‘ ಭೀಮ’ ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಇಲ್ಲಿದೆ ವಿವರ

Bheema Movie Review: ‘ಭೀಮ’ ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ. ಅವರ ನಿರ್ದೇಶನದ ಮೊದಲ ಸಿನಿಮಾ ‘ಸಲಗ’ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರದಿಂದ ಅವರು ಭರ್ಜರಿ ಯಶಸ್ಸು ಕಂಡರು. ಈಗ ಅವರು ಮತ್ತೊಂದು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

Bheema First Half Review:‘ ಭೀಮ’ ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಇಲ್ಲಿದೆ ವಿವರ
ಭೀಮ ಸಿನಿಮಾ
ಮಂಜುನಾಥ ಸಿ.
| Edited By: |

Updated on:Aug 09, 2024 | 10:57 AM

Share

ದುನಿಯಾ ವಿಜಯ್ ನಿರ್ದೇಶನದ ಮೊದಲ ಸಿನಿಮಾ ‘ಸಲಗ’ ಯಶಸ್ಸು ಕಂಡಿತ್ತು. ಆ ಬಳಿಕ ಅವರು ಕೈಗೆತ್ತಿಕೊಂಡಿದ್ದು ‘ಭೀಮ’ ಚಿತ್ರವನ್ನು. ಈ ಸಿನಿಮಾ ಕೂಡ ಪಕ್ಕಾ ರೌಡಿಸಂ ಕಥೆ ಅನ್ನೋದು ಟ್ರೇಲರ್ ನೋಡಿದವರಿಗೆ ಗೊತ್ತಾಗಿದೆ. ಇಂದು (ಆಗಸ್ಟ್ 9) ಸಿನಿಮಾ ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಜೊತೆ ರಂಗಾಯಣ ರಘು, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗಾದರೆ ಈ ಚಿತ್ರದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಸಿನಿಮಾದಲ್ಲಿ ಏನನ್ನು ಹೇಳಲು ಹೊರಟಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

  1. ಭೀಮ ಸಿನಿಮಾನಲ್ಲಿ ಬೆಂಗಳೂರಿನ ಗಲ್ಲಿಗಳ ಕತೆಯನ್ನು ಅನಾವರಣ ಮಾಡಿರುವ ದುನಿಯಾ ವಿಜಯ್.
  2. ಗಾಂಜಾ ಮೋಹ ಮತ್ತು ಬೆಂಗಳೂರಿನ ಸ್ಲಂ ಯುವಕರನ್ನು ರೌಡಿಗಳು ಬಳಸಿಕೊಳ್ಳುತ್ತಿರುವ ರೀತಿಯ ಬಗ್ಗೆ ತೋರಿಸಲಾಗಿದೆ.
  3. ಸಿನಿಮಾದ ಆರಂಭದಲ್ಲಿ ಮುಖ್ಯ ಪಾತ್ರಗಳ ಪರಿಚಯ ಮತ್ತು ಅವರ ವ್ಯಕ್ತಿತ್ವ ಅನಾವರಣ ಮಾಡಿದ್ದಾರೆ ನಿರ್ದೇಶಕ ವಿಜಿ. ಸಿನಿಮಾದ ವಿಲನ್ ಪಾತ್ರಕ್ಕೆ ನೀಡಿರುವ ಹಿನ್ನೆಲೆ ಚೆನ್ನಾಗಿದೆ.
  4. ದುನಿಯಾ ವಿಜಯ್ ಎಂಟ್ರಿ ಮಾಸ್ ಹಾಡಿನ ಮೂಲಕ ಆಗುತ್ತದೆ. ಸೆಂಟಿಮೆಂಟ್ ದೃಶ್ಯದಲ್ಲಿ ಮಾಸ್ ಹಾಡಿನ ಮೂಲಕ ಎಂಟ್ರಿ ಕೊಡುವ ದುನಿಯಾ ವಿಜಿ.
  5. ಸಿನಿಮಾದಲ್ಲಿ ಫಿಲ್ಟರ್ ಇಲ್ಲದೆ ಬೈಗುಳಗಳನ್ನು ಬಳಸಲಾಗಿದೆ. ಅಮ್ಮ-ಅಕ್ಕ ಬೈಗುಳಗಳು ಪದೇ ಪದೇ ಕಿವಿ ಮೇಲೆ ಬೀಳುತ್ತಲೇ ಇರುತ್ತವೆ.
  6. ಆರಂಭದಲ್ಲಿ ಬರುವ ಕೆಲವು ಹಾಡುಗಳು ಗಮನ ಸೆಳೆಯುತ್ತವೆ. ಹಾಡುಗಳಲ್ಲಿ ಬೆಂಗಳೂರಿನ ಗಲ್ಲಿಗಳನ್ನು ಇದ್ದಂತೆ ತೋರಿಸಿದ್ದಾರೆ ವಿಜಿ.
  7. ಸಿನಿಮಾದ ಮೊದಲಾರ್ಧದಲ್ಲಿ ಕೆಲವು ಹಾಸ್ಯ ಸನ್ನಿವೇಶಗಳು ಬಹಳ ನಗಿಸುತ್ತವೆ. ಆದರೆ ಕೆಲವು ದೃಶ್ಯಗಳು, ಸಂಭಾಷಣೆ ಮುಜುಗರವನ್ನೂ ತರುತ್ತವೆ.
  8. ಸಿನಿಮಾದ ನಾಯಕಿಗೆ ಹಾಗೂ ನಾಯಕನ ಗೆಳೆಯರಿಗೆ ಹೆಚ್ಚೇನು ಕೆಲಸವಿಲ್ಲ. ನಾಯಕನ ಫೈಟ್ ಗಳನ್ನು ನೋಡಿ ಚಪ್ಪಾಳೆ ತಟ್ಟುವುದಷ್ಟೆ ಅವರ ಕೆಲಸ.
  9. ಸಿನಿಮಾದ ಮಧ್ಯಾರ್ಧದ ಬರುವ ಮುಂಚೆ ಖಡಕ್ ಪೊಲೀಸ್ ಅಧಿಕಾರಿ ಕತೆಗೆ ಎಂಟ್ರಿ. ನಾಯಕ ಹಾಗೂ ಖಡಕ್ ಅಧಿಕಾರಿ ಸೇರಿ ಗಾಂಜಾ ವಿತರಕರ ಮೇಲೆ ಸಮರ ಸಾರಿದ್ದಾರೆ.
  10. ಸಿನಿಮಾದ ಮಧ್ಯಾರ್ಧದ ವೇಳೆಗೆ ನಾಯಕ ದುನಿಯಾ ವಿಜಯ್ ಮೇಲುಗೈ ಆಗಿ, ವಿಲನ್ ಜೈಲಿಗೆ ಹೋಗಿದ್ದಾನೆ. ಇನ್ನು ಮುಂದೆ ಇದು ದ್ವೇಷದ ಕತೆಯಾಗಿ ತಿರುವು ಪಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Fri, 9 August 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?