AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್​ ಭುಲಯ್ಯ 3’ ಕೆಲವರಿಗೆ ಇಷ್ಟ ಆಯ್ತು, ಇನ್ನೂ ಕೆಲವರಿಗೆ ಬೇಸರವಾಯ್ತು

‘ಭೂಲ್ ಭುಲಯ್ಯ 3’ ಚಿತ್ರ ಹಾರರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ತೃಪ್ತಿ ದಿಮ್ರಿ, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್, ರಾಜ್​ಪಾಲ್ ಯಾದವ್ ಮೊದಲಾದವರು ನಟಿಸಿದ್ದಾರೆ. ಅನೀಸ್ ಬಾಜ್ಮಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ಭೂಲ್​ ಭುಲಯ್ಯ 3’ ಕೆಲವರಿಗೆ ಇಷ್ಟ ಆಯ್ತು, ಇನ್ನೂ ಕೆಲವರಿಗೆ ಬೇಸರವಾಯ್ತು
ಭೂಲ್ ಭುಲಯ್ಯ 3
ರಾಜೇಶ್ ದುಗ್ಗುಮನೆ
|

Updated on: Nov 01, 2024 | 3:01 PM

Share

‘ಭೂಲ್ ಭುಲಯ್ಯ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದವರು ಅಕ್ಷಯ್ ಕುಮಾರ್. ಆ ಬಳಿಕ ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ಹೀರೋ ಆಗಿ ನಟಿಸಿದರು. ದೀಪಾವಳಿ ಪ್ರಯುಕ್ತ ಇಂದು (ನವೆಂಬರ್ 1) ‘ಭೂಲ್ ಭುಲಯ್ಯ 3’ ರಿಲೀಸ್ ಆಗಿದೆ. ಈ ಚಿತ್ರ ನೊಡಿದ ಕೆಲವರು ಮೆಚ್ಚುಗೆ ಸೂಚಿಸಿದರೆ ಇನ್ನೂ ಕೆಲವರು ಬೇಸರ ಹೊರಹಾಕಿದ್ದಾರೆ. ಸಿನಿಮಾ ಹೇಗಿದೆ ಎಂಬುದರ ವಿವರ ಇಲ್ಲಿದೆ.

‘ಭೂಲ್ ಭುಲಯ್ಯ 3’ ಚಿತ್ರ ಹಾರರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ತೃಪ್ತಿ ದಿಮ್ರಿ, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್, ರಾಜ್​ಪಾಲ್ ಯಾದವ್ ಮೊದಲಾದವರು ನಟಿಸಿದ್ದಾರೆ. ಅನೀಸ್ ಬಾಜ್ಮಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಅಕ್ಷಯ್ ಕುಮಾರ್ ಅವರನ್ನು ಮಿಸ್ ಮಾಡಿಕೊಂಡಿದ್ದಾರೆ.

‘ಅಕ್ಷಯ್ ಕುಮಾರ್ ಇಲ್ಲದೆ ಭೂಲ್ ಭುಲಯ್ಯ ಸರಣಿಯ ಸಿನಿಮಾಗಳು ಹೇಗೆ ಕಾಣುತ್ತವೆ’ ಎಂಬುದಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ. ಕಾರ್ತಿಕ್ ಆರ್ಯನ್ ಅವರು ಎಷ್ಟೇ ಉತ್ತಮ ಪರ್ಫಾರಮೆನ್ಸ್ ನೀಡಿದ್ದರೂ ಅಕ್ಷಯ್ ಕುಮಾರ್ ಬೆಸ್ಟ್ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಮತ್ತೊಂದು ಸೀಕ್ವೆಲ್ ಅಂದುಕೊಂಡ ಮಟ್ಟದಲ್ಲಿ ಮೂಡಿಬಂದಿಲ್ಲ. ಭೂಲ್ ಭುಲಯ್ಯ ಮೂರನೇ ಸಿನಿಮಾ ನಿರಾಸೆ ಮೂಡಿಸಿದೆ’ ಎಂದು ಕೆಲರು ಹೇಳಿದ್ದಾರೆ. ಇನ್ನೂ ಕೆಲವರು ಕಾರ್ತಿಕ್ ಆರ್ಯನ್ ಅವರನ್ನು ಹೊಗಳಿದ್ದಾರೆ. ‘ಕಾರ್ತಿಕ್ ಆರ್ಯನ್ ಅವರು ಮತ್ತೊಂದು ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ‘ಭೂಲ್​ ಭುಲಯ್ಯ 3’ ಟ್ರೇಲರ್: ದೆವ್ವದ ಲುಕ್​ನಲ್ಲಿ ಮಾಧುರಿ ದೀಕ್ಷಿತ್​, ವಿದ್ಯಾ ಬಾಲನ್ 

‘ಪ್ರತಿ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್​​ಗಳು ಇವೆ. ಕಥೆ ಉತ್ತಮವಾಗಿದೆ ನನಗೆ ಇಷ್ಟ ಆಯಿತು’ ಎಂದು ಕೆಲವರು ಹೇಳಿಕೊಡಿದ್ದಾರೆ. ಒಟ್ಟಾರೆ ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಜೊತೆಗೆ ‘ಸಿಂಗಂ ಅಗೇನ್’ ಕೂಡ ರಿಲೀಸ್ ಆಗಿದೆ. ಎರಡೂ ಸಿನಿಮಾಗಳಲ್ಲಿ ಯಾವ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ