AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್​ ಭುಲಯ್ಯ 3’ ಕೆಲವರಿಗೆ ಇಷ್ಟ ಆಯ್ತು, ಇನ್ನೂ ಕೆಲವರಿಗೆ ಬೇಸರವಾಯ್ತು

‘ಭೂಲ್ ಭುಲಯ್ಯ 3’ ಚಿತ್ರ ಹಾರರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ತೃಪ್ತಿ ದಿಮ್ರಿ, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್, ರಾಜ್​ಪಾಲ್ ಯಾದವ್ ಮೊದಲಾದವರು ನಟಿಸಿದ್ದಾರೆ. ಅನೀಸ್ ಬಾಜ್ಮಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ಭೂಲ್​ ಭುಲಯ್ಯ 3’ ಕೆಲವರಿಗೆ ಇಷ್ಟ ಆಯ್ತು, ಇನ್ನೂ ಕೆಲವರಿಗೆ ಬೇಸರವಾಯ್ತು
ಭೂಲ್ ಭುಲಯ್ಯ 3
ರಾಜೇಶ್ ದುಗ್ಗುಮನೆ
|

Updated on: Nov 01, 2024 | 3:01 PM

Share

‘ಭೂಲ್ ಭುಲಯ್ಯ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದವರು ಅಕ್ಷಯ್ ಕುಮಾರ್. ಆ ಬಳಿಕ ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ಹೀರೋ ಆಗಿ ನಟಿಸಿದರು. ದೀಪಾವಳಿ ಪ್ರಯುಕ್ತ ಇಂದು (ನವೆಂಬರ್ 1) ‘ಭೂಲ್ ಭುಲಯ್ಯ 3’ ರಿಲೀಸ್ ಆಗಿದೆ. ಈ ಚಿತ್ರ ನೊಡಿದ ಕೆಲವರು ಮೆಚ್ಚುಗೆ ಸೂಚಿಸಿದರೆ ಇನ್ನೂ ಕೆಲವರು ಬೇಸರ ಹೊರಹಾಕಿದ್ದಾರೆ. ಸಿನಿಮಾ ಹೇಗಿದೆ ಎಂಬುದರ ವಿವರ ಇಲ್ಲಿದೆ.

‘ಭೂಲ್ ಭುಲಯ್ಯ 3’ ಚಿತ್ರ ಹಾರರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ತೃಪ್ತಿ ದಿಮ್ರಿ, ವಿದ್ಯಾ ಬಾಲನ್, ಮಾಧುರಿ ದೀಕ್ಷಿತ್, ರಾಜ್​ಪಾಲ್ ಯಾದವ್ ಮೊದಲಾದವರು ನಟಿಸಿದ್ದಾರೆ. ಅನೀಸ್ ಬಾಜ್ಮಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಅಕ್ಷಯ್ ಕುಮಾರ್ ಅವರನ್ನು ಮಿಸ್ ಮಾಡಿಕೊಂಡಿದ್ದಾರೆ.

‘ಅಕ್ಷಯ್ ಕುಮಾರ್ ಇಲ್ಲದೆ ಭೂಲ್ ಭುಲಯ್ಯ ಸರಣಿಯ ಸಿನಿಮಾಗಳು ಹೇಗೆ ಕಾಣುತ್ತವೆ’ ಎಂಬುದಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರು ವಿಡಿಯೋ ಹಂಚಿಕೊಂಡಿದ್ದಾರೆ. ಕಾರ್ತಿಕ್ ಆರ್ಯನ್ ಅವರು ಎಷ್ಟೇ ಉತ್ತಮ ಪರ್ಫಾರಮೆನ್ಸ್ ನೀಡಿದ್ದರೂ ಅಕ್ಷಯ್ ಕುಮಾರ್ ಬೆಸ್ಟ್ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಮತ್ತೊಂದು ಸೀಕ್ವೆಲ್ ಅಂದುಕೊಂಡ ಮಟ್ಟದಲ್ಲಿ ಮೂಡಿಬಂದಿಲ್ಲ. ಭೂಲ್ ಭುಲಯ್ಯ ಮೂರನೇ ಸಿನಿಮಾ ನಿರಾಸೆ ಮೂಡಿಸಿದೆ’ ಎಂದು ಕೆಲರು ಹೇಳಿದ್ದಾರೆ. ಇನ್ನೂ ಕೆಲವರು ಕಾರ್ತಿಕ್ ಆರ್ಯನ್ ಅವರನ್ನು ಹೊಗಳಿದ್ದಾರೆ. ‘ಕಾರ್ತಿಕ್ ಆರ್ಯನ್ ಅವರು ಮತ್ತೊಂದು ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ‘ಭೂಲ್​ ಭುಲಯ್ಯ 3’ ಟ್ರೇಲರ್: ದೆವ್ವದ ಲುಕ್​ನಲ್ಲಿ ಮಾಧುರಿ ದೀಕ್ಷಿತ್​, ವಿದ್ಯಾ ಬಾಲನ್ 

‘ಪ್ರತಿ ಹಂತದಲ್ಲೂ ಟ್ವಿಸ್ಟ್ ಹಾಗೂ ಟರ್ನ್​​ಗಳು ಇವೆ. ಕಥೆ ಉತ್ತಮವಾಗಿದೆ ನನಗೆ ಇಷ್ಟ ಆಯಿತು’ ಎಂದು ಕೆಲವರು ಹೇಳಿಕೊಡಿದ್ದಾರೆ. ಒಟ್ಟಾರೆ ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಜೊತೆಗೆ ‘ಸಿಂಗಂ ಅಗೇನ್’ ಕೂಡ ರಿಲೀಸ್ ಆಗಿದೆ. ಎರಡೂ ಸಿನಿಮಾಗಳಲ್ಲಿ ಯಾವ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ