AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ

ಪ್ರೀತಿ ಉಳಿಸಿಕೊಳ್ಳೋದು ಹೇಗೆ ಎಂಬ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ಪಾಠ ಮಾಡಲಾಗಿದೆ. ಗಿರೀಶ್ ಮೂಲಿಮನಿ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಮೋದ್, ರೇಚಲ್ ಡೇವಿಡ್, ಪೃಥ್ವಿ ಅಂಬಾರ್, ಅಶ್ವತಿ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಈ ಸಿನಿಮಾ ಬಿಡುಗಡೆ ಆಗಿದೆ.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ
Bhuvanam Gaganam
ಮದನ್​ ಕುಮಾರ್​
|

Updated on: Feb 14, 2025 | 4:13 PM

Share

ಸಿನಿಮಾ: ಭುವನಂ ಗಗನಂ. ನಿರ್ಮಾಣ: ಎಂ. ಮುನೇಗೌಡ. ನಿರ್ದೇಶನ: ಗಿರೀಶ್ ಮೂಲಿಮನಿ. ಪಾತ್ರವರ್ಗ: ಪ್ರಮೋದ್, ಪೃಥ್ವಿ ಅಂಬಾರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್​ ಕುಮಾರ್, ಪೊನ್ನು ಅಶ್ವತಿ ಮುಂತಾದವರು.

ಎಲ್ಲೆಡೆ ವ್ಯಾಲೆಂಟೈನ್ಸ್ ಡೇ ಸಡಗರ ಇದೆ. ಪ್ರೇಮಿಗಳಿಗೆ ಈ ದಿನ ಹಬ್ಬ. ಸಿನಿಪ್ರಿಯರು ಕೂಡ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಲವ್ ಸ್ಟೋರಿ ಇರುವ ಸಿನಿಮಾ ನೋಡಲು ಇಷ್ಟಪಡುತ್ತಾರೆ. ಅಂಥವರಿಗಾಗಿ ‘ಭುವನಂ ಗಗನಂ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರೇಮ್​ ಕಹಾನಿಯೇ ಪ್ರಮುಖವಾಗಿದೆ. ನಿಜವಾದ ಪ್ರೀತಿ ಹೇಗಿರುತ್ತದೆ ಎಂಬುದನ್ನು ನಿರ್ದೇಶಕ ಗಿರೀಶ್ ಮೂಲಿಮನಿ ಅವರು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

ಎರಡು ಬೇರೆ ಬೇರೆ ಕಥೆಯನ್ನು ‘ಭುವನಂ ಗಗನಂ’ ಸಿನಿಮದಲ್ಲಿ ವಿವರಿಸಲಾಗಿದೆ. ಒಂದು ಕಥೆಯಲ್ಲಿ ಪ್ರಮೋದ್ ಮತ್ತು ರೇಚಲ್ ಡೇವಿಡ್ ಅವರು ಜೋಡಿ ಆಗಿದ್ದಾರೆ. ಇನ್ನೊಂದು ಕಥೆಯಲ್ಲಿ ಅಶ್ವತಿ ಹಾಗೂ ಪೃಥ್ವಿ ಅಂಬಾರ್ ಅವರು ಜೋಡಿಯಾಗಿ ನಟಿದ್ದಾರೆ. ಈ ಎರಡೂ ಕಥೆಗಳು ಬೇರೆ ಬೇರೆ ಆಗಿದ್ದರೂ ಅವುಗಳ ಸಾರಾಂಶ ಪ್ರೀತಿಯೇ ಆಗಿದೆ. ಯಾವುದೋ ಒಂದು ಸಂದರ್ಭದಲ್ಲಿ ಈ ಎರಡು ಕಥೆಗಳು ಒಟ್ಟಿಗೆ ಸೇರುತ್ತವೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಿ ತಿಳಿಯಬೇಕು.

ನೋಡಿದ ತಕ್ಷಣ ಹುಟ್ಟುವ ಪ್ರೀತಿ ಒಂದು ರೀತಿ ಇರುತ್ತದೆ. ಹಲವು ದಿನಗಳ ಒಡನಾಟದಿಂದ ಹುಟ್ಟಿದ ಪ್ರೀತಿ ಬೇರೊಂದು ರೀತಿ ಇರುತ್ತದೆ. ಈ ಎರಡೂ ಬಗೆಯ ಲವ್​ ಸ್ಟೋರಿಯನ್ನು ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ. ಯೌವನದ ಹುಮ್ಮಸ್ಸಿನಲ್ಲಿ ಐ ಲವ್ ಯೂ ಎಂದು ಹೇಳುವುದು ತುಂಬ ಸುಲಭ. ಆದರೆ ಆ ಪ್ರೀತಿಯನ್ನು ಕೊನೇ ತನಕ ಕಾಪಾಡಿಕೊಳ್ಳುವುದು ಸಖತ್ ಕಷ್ಟ. ಮದುವೆ ಆದ ಬಳಿಕ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅವುಗಳ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ.

ನಟ ಪ್ರಮೋದ್ ಅವರು ಈ ಸಿನಿಮಾದಲ್ಲಿ ರಫ್ ಆ್ಯಂಡ್ ಟಫ್​ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ನೇರ ನಿಷ್ಠುರ ಗುಣ ಇರುವ ಪಾತ್ರವನ್ನು ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲೂ ಮಿಂಚಿದ್ದಾರೆ. ಸೌಮ್ಯ ಸ್ವಭಾವದ ಹುಡುಗಿಯಾಗಿ ರೇಚಲ್ ಡೇವಿಡ್ ಅವರು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್ ಚೆನ್ನಾಗಿದೆ. ಇನ್ನು, ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಅವರು ಸವಾಲಿನ ಪಾತ್ರ ಮಾಡಿದ್ದಾರೆ. ಬುದ್ಧಿಮಾಂದ್ಯ ವ್ಯಕ್ತಿಯಾಗಿ ಅವರು ನಟಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಆ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ಅಶ್ವತಿ ಅವರು ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಗಮನ ಸೆಳೆಯುತ್ತಾರೆ. ಪೋಷಕ ಪಾತ್ರಗಳಲ್ಲಿ ಇರುವ ಅಚ್ಯುತ್ ಕುಮಾರ್​, ಶರತ್ ಲೋಹಿತಾಶ್ವ ಮುಂತಾದ ಹಿರಿಯ ಕಲಾವಿದರು ಈ ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Unlock Raghava Review: ತಾನೇ ಲಾಕ್ ಆಗಿ ನಗಿಸುವ ‘ಅನ್​ಲಾಕ್ ರಾಘವ’

ಒಟ್ಟಾರೆ ಈ ಸಿನಿಮಾದ ಕಥೆ ಸಿಂಪಲ್ ಆಗಿದೆ. ತುಂಬ ಫ್ರೆಶ್ ಎಂಬಂತಹ ವಿಷಯಗಳೇನಿಲ್ಲ. ಈಗಾಗಲೇ ತಿಳಿದಿರುವ ವಿಷಯಗಳನ್ನು ಪ್ರೇಕ್ಷಕರಿಗೆ ಮತ್ತೊಮ್ಮೆ ನೆನಪಿಸುವ ರೀತಿಯಲ್ಲಿ ‘ಭುವನಂ ಗಗನಂ’ ಸಿನಿಮಾ ಮೂಡಿಬಂದಿದೆ. ಕೆಲವು ದೃಶ್ಯಗಳು ದೀರ್ಘ ಎನಿಸುತ್ತವೆ. ಅವುಗಳ ಬಗ್ಗೆ ಗಮನ ಹರಿಸಿ ಚಿತ್ರದ ಅವಧಿಯನ್ನು ತಗ್ಗಿಸಬಹುದಿತ್ತು. ಪ್ರೀತಿ ಮತ್ತು ದಾಂಪತ್ಯದಲ್ಲಿನ ಹೊಸ ಸವಾಲುಗಳ ಬಗ್ಗೆ ಬೆಳಕು ಚೆಲ್ಲಬಹುದಿತ್ತು. ಇಂತಹ ಸಾಧ್ಯತೆಗಳ ಬಗ್ಗೆ ನಿರ್ದೇಶಕರು ಗಮನ ಹರಿಸಿದ್ದರೆ ಸಿನಿಮಾ ತೂಕ ಇನ್ನಷ್ಟು ಹೆಚ್ಚುತ್ತಿತ್ತು ಎನಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?