AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ

ಪ್ರೀತಿ ಉಳಿಸಿಕೊಳ್ಳೋದು ಹೇಗೆ ಎಂಬ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ಪಾಠ ಮಾಡಲಾಗಿದೆ. ಗಿರೀಶ್ ಮೂಲಿಮನಿ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಮೋದ್, ರೇಚಲ್ ಡೇವಿಡ್, ಪೃಥ್ವಿ ಅಂಬಾರ್, ಅಶ್ವತಿ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಈ ಸಿನಿಮಾ ಬಿಡುಗಡೆ ಆಗಿದೆ.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ
Bhuvanam Gaganam
ಮದನ್​ ಕುಮಾರ್​
|

Updated on: Feb 14, 2025 | 4:13 PM

Share

ಸಿನಿಮಾ: ಭುವನಂ ಗಗನಂ. ನಿರ್ಮಾಣ: ಎಂ. ಮುನೇಗೌಡ. ನಿರ್ದೇಶನ: ಗಿರೀಶ್ ಮೂಲಿಮನಿ. ಪಾತ್ರವರ್ಗ: ಪ್ರಮೋದ್, ಪೃಥ್ವಿ ಅಂಬಾರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್​ ಕುಮಾರ್, ಪೊನ್ನು ಅಶ್ವತಿ ಮುಂತಾದವರು.

ಎಲ್ಲೆಡೆ ವ್ಯಾಲೆಂಟೈನ್ಸ್ ಡೇ ಸಡಗರ ಇದೆ. ಪ್ರೇಮಿಗಳಿಗೆ ಈ ದಿನ ಹಬ್ಬ. ಸಿನಿಪ್ರಿಯರು ಕೂಡ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಲವ್ ಸ್ಟೋರಿ ಇರುವ ಸಿನಿಮಾ ನೋಡಲು ಇಷ್ಟಪಡುತ್ತಾರೆ. ಅಂಥವರಿಗಾಗಿ ‘ಭುವನಂ ಗಗನಂ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರೇಮ್​ ಕಹಾನಿಯೇ ಪ್ರಮುಖವಾಗಿದೆ. ನಿಜವಾದ ಪ್ರೀತಿ ಹೇಗಿರುತ್ತದೆ ಎಂಬುದನ್ನು ನಿರ್ದೇಶಕ ಗಿರೀಶ್ ಮೂಲಿಮನಿ ಅವರು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

ಎರಡು ಬೇರೆ ಬೇರೆ ಕಥೆಯನ್ನು ‘ಭುವನಂ ಗಗನಂ’ ಸಿನಿಮದಲ್ಲಿ ವಿವರಿಸಲಾಗಿದೆ. ಒಂದು ಕಥೆಯಲ್ಲಿ ಪ್ರಮೋದ್ ಮತ್ತು ರೇಚಲ್ ಡೇವಿಡ್ ಅವರು ಜೋಡಿ ಆಗಿದ್ದಾರೆ. ಇನ್ನೊಂದು ಕಥೆಯಲ್ಲಿ ಅಶ್ವತಿ ಹಾಗೂ ಪೃಥ್ವಿ ಅಂಬಾರ್ ಅವರು ಜೋಡಿಯಾಗಿ ನಟಿದ್ದಾರೆ. ಈ ಎರಡೂ ಕಥೆಗಳು ಬೇರೆ ಬೇರೆ ಆಗಿದ್ದರೂ ಅವುಗಳ ಸಾರಾಂಶ ಪ್ರೀತಿಯೇ ಆಗಿದೆ. ಯಾವುದೋ ಒಂದು ಸಂದರ್ಭದಲ್ಲಿ ಈ ಎರಡು ಕಥೆಗಳು ಒಟ್ಟಿಗೆ ಸೇರುತ್ತವೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಿ ತಿಳಿಯಬೇಕು.

ನೋಡಿದ ತಕ್ಷಣ ಹುಟ್ಟುವ ಪ್ರೀತಿ ಒಂದು ರೀತಿ ಇರುತ್ತದೆ. ಹಲವು ದಿನಗಳ ಒಡನಾಟದಿಂದ ಹುಟ್ಟಿದ ಪ್ರೀತಿ ಬೇರೊಂದು ರೀತಿ ಇರುತ್ತದೆ. ಈ ಎರಡೂ ಬಗೆಯ ಲವ್​ ಸ್ಟೋರಿಯನ್ನು ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ. ಯೌವನದ ಹುಮ್ಮಸ್ಸಿನಲ್ಲಿ ಐ ಲವ್ ಯೂ ಎಂದು ಹೇಳುವುದು ತುಂಬ ಸುಲಭ. ಆದರೆ ಆ ಪ್ರೀತಿಯನ್ನು ಕೊನೇ ತನಕ ಕಾಪಾಡಿಕೊಳ್ಳುವುದು ಸಖತ್ ಕಷ್ಟ. ಮದುವೆ ಆದ ಬಳಿಕ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅವುಗಳ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ.

ನಟ ಪ್ರಮೋದ್ ಅವರು ಈ ಸಿನಿಮಾದಲ್ಲಿ ರಫ್ ಆ್ಯಂಡ್ ಟಫ್​ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ನೇರ ನಿಷ್ಠುರ ಗುಣ ಇರುವ ಪಾತ್ರವನ್ನು ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲೂ ಮಿಂಚಿದ್ದಾರೆ. ಸೌಮ್ಯ ಸ್ವಭಾವದ ಹುಡುಗಿಯಾಗಿ ರೇಚಲ್ ಡೇವಿಡ್ ಅವರು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್ ಚೆನ್ನಾಗಿದೆ. ಇನ್ನು, ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಅವರು ಸವಾಲಿನ ಪಾತ್ರ ಮಾಡಿದ್ದಾರೆ. ಬುದ್ಧಿಮಾಂದ್ಯ ವ್ಯಕ್ತಿಯಾಗಿ ಅವರು ನಟಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಆ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ಅಶ್ವತಿ ಅವರು ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಗಮನ ಸೆಳೆಯುತ್ತಾರೆ. ಪೋಷಕ ಪಾತ್ರಗಳಲ್ಲಿ ಇರುವ ಅಚ್ಯುತ್ ಕುಮಾರ್​, ಶರತ್ ಲೋಹಿತಾಶ್ವ ಮುಂತಾದ ಹಿರಿಯ ಕಲಾವಿದರು ಈ ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Unlock Raghava Review: ತಾನೇ ಲಾಕ್ ಆಗಿ ನಗಿಸುವ ‘ಅನ್​ಲಾಕ್ ರಾಘವ’

ಒಟ್ಟಾರೆ ಈ ಸಿನಿಮಾದ ಕಥೆ ಸಿಂಪಲ್ ಆಗಿದೆ. ತುಂಬ ಫ್ರೆಶ್ ಎಂಬಂತಹ ವಿಷಯಗಳೇನಿಲ್ಲ. ಈಗಾಗಲೇ ತಿಳಿದಿರುವ ವಿಷಯಗಳನ್ನು ಪ್ರೇಕ್ಷಕರಿಗೆ ಮತ್ತೊಮ್ಮೆ ನೆನಪಿಸುವ ರೀತಿಯಲ್ಲಿ ‘ಭುವನಂ ಗಗನಂ’ ಸಿನಿಮಾ ಮೂಡಿಬಂದಿದೆ. ಕೆಲವು ದೃಶ್ಯಗಳು ದೀರ್ಘ ಎನಿಸುತ್ತವೆ. ಅವುಗಳ ಬಗ್ಗೆ ಗಮನ ಹರಿಸಿ ಚಿತ್ರದ ಅವಧಿಯನ್ನು ತಗ್ಗಿಸಬಹುದಿತ್ತು. ಪ್ರೀತಿ ಮತ್ತು ದಾಂಪತ್ಯದಲ್ಲಿನ ಹೊಸ ಸವಾಲುಗಳ ಬಗ್ಗೆ ಬೆಳಕು ಚೆಲ್ಲಬಹುದಿತ್ತು. ಇಂತಹ ಸಾಧ್ಯತೆಗಳ ಬಗ್ಗೆ ನಿರ್ದೇಶಕರು ಗಮನ ಹರಿಸಿದ್ದರೆ ಸಿನಿಮಾ ತೂಕ ಇನ್ನಷ್ಟು ಹೆಚ್ಚುತ್ತಿತ್ತು ಎನಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ