AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ

ಪ್ರೀತಿ ಉಳಿಸಿಕೊಳ್ಳೋದು ಹೇಗೆ ಎಂಬ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ಪಾಠ ಮಾಡಲಾಗಿದೆ. ಗಿರೀಶ್ ಮೂಲಿಮನಿ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಮೋದ್, ರೇಚಲ್ ಡೇವಿಡ್, ಪೃಥ್ವಿ ಅಂಬಾರ್, ಅಶ್ವತಿ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಈ ಸಿನಿಮಾ ಬಿಡುಗಡೆ ಆಗಿದೆ.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ‘ಭುವನಂ ಗಗನಂ’ ಸಿನಿಮಾ ಮೂಲಕ ಪ್ರೀತಿ ಪಾಠ
Bhuvanam Gaganam
Follow us
ಮದನ್​ ಕುಮಾರ್​
|

Updated on: Feb 14, 2025 | 4:13 PM

ಸಿನಿಮಾ: ಭುವನಂ ಗಗನಂ. ನಿರ್ಮಾಣ: ಎಂ. ಮುನೇಗೌಡ. ನಿರ್ದೇಶನ: ಗಿರೀಶ್ ಮೂಲಿಮನಿ. ಪಾತ್ರವರ್ಗ: ಪ್ರಮೋದ್, ಪೃಥ್ವಿ ಅಂಬಾರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್​ ಕುಮಾರ್, ಪೊನ್ನು ಅಶ್ವತಿ ಮುಂತಾದವರು.

ಎಲ್ಲೆಡೆ ವ್ಯಾಲೆಂಟೈನ್ಸ್ ಡೇ ಸಡಗರ ಇದೆ. ಪ್ರೇಮಿಗಳಿಗೆ ಈ ದಿನ ಹಬ್ಬ. ಸಿನಿಪ್ರಿಯರು ಕೂಡ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಲವ್ ಸ್ಟೋರಿ ಇರುವ ಸಿನಿಮಾ ನೋಡಲು ಇಷ್ಟಪಡುತ್ತಾರೆ. ಅಂಥವರಿಗಾಗಿ ‘ಭುವನಂ ಗಗನಂ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರೇಮ್​ ಕಹಾನಿಯೇ ಪ್ರಮುಖವಾಗಿದೆ. ನಿಜವಾದ ಪ್ರೀತಿ ಹೇಗಿರುತ್ತದೆ ಎಂಬುದನ್ನು ನಿರ್ದೇಶಕ ಗಿರೀಶ್ ಮೂಲಿಮನಿ ಅವರು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

ಎರಡು ಬೇರೆ ಬೇರೆ ಕಥೆಯನ್ನು ‘ಭುವನಂ ಗಗನಂ’ ಸಿನಿಮದಲ್ಲಿ ವಿವರಿಸಲಾಗಿದೆ. ಒಂದು ಕಥೆಯಲ್ಲಿ ಪ್ರಮೋದ್ ಮತ್ತು ರೇಚಲ್ ಡೇವಿಡ್ ಅವರು ಜೋಡಿ ಆಗಿದ್ದಾರೆ. ಇನ್ನೊಂದು ಕಥೆಯಲ್ಲಿ ಅಶ್ವತಿ ಹಾಗೂ ಪೃಥ್ವಿ ಅಂಬಾರ್ ಅವರು ಜೋಡಿಯಾಗಿ ನಟಿದ್ದಾರೆ. ಈ ಎರಡೂ ಕಥೆಗಳು ಬೇರೆ ಬೇರೆ ಆಗಿದ್ದರೂ ಅವುಗಳ ಸಾರಾಂಶ ಪ್ರೀತಿಯೇ ಆಗಿದೆ. ಯಾವುದೋ ಒಂದು ಸಂದರ್ಭದಲ್ಲಿ ಈ ಎರಡು ಕಥೆಗಳು ಒಟ್ಟಿಗೆ ಸೇರುತ್ತವೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಿ ತಿಳಿಯಬೇಕು.

ನೋಡಿದ ತಕ್ಷಣ ಹುಟ್ಟುವ ಪ್ರೀತಿ ಒಂದು ರೀತಿ ಇರುತ್ತದೆ. ಹಲವು ದಿನಗಳ ಒಡನಾಟದಿಂದ ಹುಟ್ಟಿದ ಪ್ರೀತಿ ಬೇರೊಂದು ರೀತಿ ಇರುತ್ತದೆ. ಈ ಎರಡೂ ಬಗೆಯ ಲವ್​ ಸ್ಟೋರಿಯನ್ನು ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ. ಯೌವನದ ಹುಮ್ಮಸ್ಸಿನಲ್ಲಿ ಐ ಲವ್ ಯೂ ಎಂದು ಹೇಳುವುದು ತುಂಬ ಸುಲಭ. ಆದರೆ ಆ ಪ್ರೀತಿಯನ್ನು ಕೊನೇ ತನಕ ಕಾಪಾಡಿಕೊಳ್ಳುವುದು ಸಖತ್ ಕಷ್ಟ. ಮದುವೆ ಆದ ಬಳಿಕ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅವುಗಳ ಬಗ್ಗೆ ‘ಭುವನಂ ಗಗನಂ’ ಸಿನಿಮಾದಲ್ಲಿ ತೋರಿಸಲಾಗಿದೆ.

ನಟ ಪ್ರಮೋದ್ ಅವರು ಈ ಸಿನಿಮಾದಲ್ಲಿ ರಫ್ ಆ್ಯಂಡ್ ಟಫ್​ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ನೇರ ನಿಷ್ಠುರ ಗುಣ ಇರುವ ಪಾತ್ರವನ್ನು ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲೂ ಮಿಂಚಿದ್ದಾರೆ. ಸೌಮ್ಯ ಸ್ವಭಾವದ ಹುಡುಗಿಯಾಗಿ ರೇಚಲ್ ಡೇವಿಡ್ ಅವರು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್ ಚೆನ್ನಾಗಿದೆ. ಇನ್ನು, ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಅವರು ಸವಾಲಿನ ಪಾತ್ರ ಮಾಡಿದ್ದಾರೆ. ಬುದ್ಧಿಮಾಂದ್ಯ ವ್ಯಕ್ತಿಯಾಗಿ ಅವರು ನಟಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಆ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ಅಶ್ವತಿ ಅವರು ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಗಮನ ಸೆಳೆಯುತ್ತಾರೆ. ಪೋಷಕ ಪಾತ್ರಗಳಲ್ಲಿ ಇರುವ ಅಚ್ಯುತ್ ಕುಮಾರ್​, ಶರತ್ ಲೋಹಿತಾಶ್ವ ಮುಂತಾದ ಹಿರಿಯ ಕಲಾವಿದರು ಈ ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: Unlock Raghava Review: ತಾನೇ ಲಾಕ್ ಆಗಿ ನಗಿಸುವ ‘ಅನ್​ಲಾಕ್ ರಾಘವ’

ಒಟ್ಟಾರೆ ಈ ಸಿನಿಮಾದ ಕಥೆ ಸಿಂಪಲ್ ಆಗಿದೆ. ತುಂಬ ಫ್ರೆಶ್ ಎಂಬಂತಹ ವಿಷಯಗಳೇನಿಲ್ಲ. ಈಗಾಗಲೇ ತಿಳಿದಿರುವ ವಿಷಯಗಳನ್ನು ಪ್ರೇಕ್ಷಕರಿಗೆ ಮತ್ತೊಮ್ಮೆ ನೆನಪಿಸುವ ರೀತಿಯಲ್ಲಿ ‘ಭುವನಂ ಗಗನಂ’ ಸಿನಿಮಾ ಮೂಡಿಬಂದಿದೆ. ಕೆಲವು ದೃಶ್ಯಗಳು ದೀರ್ಘ ಎನಿಸುತ್ತವೆ. ಅವುಗಳ ಬಗ್ಗೆ ಗಮನ ಹರಿಸಿ ಚಿತ್ರದ ಅವಧಿಯನ್ನು ತಗ್ಗಿಸಬಹುದಿತ್ತು. ಪ್ರೀತಿ ಮತ್ತು ದಾಂಪತ್ಯದಲ್ಲಿನ ಹೊಸ ಸವಾಲುಗಳ ಬಗ್ಗೆ ಬೆಳಕು ಚೆಲ್ಲಬಹುದಿತ್ತು. ಇಂತಹ ಸಾಧ್ಯತೆಗಳ ಬಗ್ಗೆ ನಿರ್ದೇಶಕರು ಗಮನ ಹರಿಸಿದ್ದರೆ ಸಿನಿಮಾ ತೂಕ ಇನ್ನಷ್ಟು ಹೆಚ್ಚುತ್ತಿತ್ತು ಎನಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ