AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಇದೇ ಮೊದಲ ಬಾರಿಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾದಲ್ಲಿ ಹಲವು ಸ್ಟಾರ್​ ನಟರು ಅತಿಥಿ ಪಾತ್ರ ಮಾಡಿದ್ದಾರೆ.

‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
ರಣಬೀರ್
TV9 Web
| Edited By: |

Updated on: Sep 09, 2022 | 2:19 PM

Share

ಸತತ ಸೋಲು ಕಾಣುತ್ತಿರುವ ‘ಬ್ರಹ್ಮಾಸ್ತ್ರ’ ಸಿನಿಮಾಗೆ (Brahmastra Movie) ಬಲ ತುಂಬಲು ಹಲವು ಹೀರೋಗಳು, ನಿರ್ದೇಶಕರು ಪ್ರಯತ್ನಿಸಿ ಸೋತಿದ್ದಾರೆ. ಅಕ್ಷಯ್ ಕುಮಾರ್, ಆಮಿರ್ ಖಾನ್​ರಂತಹ ಘಟಾನುಘಟಿ ನಟರ ಸಿನಿಮಾಗಳೇ ಸೋತು ಸುಣ್ಣವಾಗಿದೆ. 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಲು ಒದ್ದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ಸಂದರ್ಭದಲ್ಲಿ ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಇದೇ ಮೊದಲ ಬಾರಿಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾದಲ್ಲಿ ಹಲವು ಸ್ಟಾರ್​ ನಟರು ಅತಿಥಿ ಪಾತ್ರ ಮಾಡಿದ್ದಾರೆ. ಬಾಲಿವುಡ್​ನ ಸ್ಟಾರ್ ನಟ ಶಾರುಖ್ ಖಾನ್ ಕೂಡ ಈ ಚಿತ್ರದಲ್ಲಿ ಬಂದು ಹೋಗುತ್ತಾರೆ. ಈ ಸಿನಿಮಾಗೆ ಕೆಲವರು ಒಳ್ಳೆಯ ರೇಟಿಂಗ್ ನೀಡಿದರೆ, ಇನ್ನೂ ಕೆಲವರು ಚಿತ್ರವನ್ನು ತೆಗಳಿದ್ದಾರೆ.

ಇದನ್ನೂ ಓದಿ
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?

‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್ ನೋಡಿದವರಿಗೆ ಗ್ರಾಫಿಕ್ಸ್ ಬಗ್ಗೆ ಅನುಮಾನ ಮೂಡಿತ್ತು. ಗ್ರಾಫಿಕ್ಸ್ ಉತ್ತಮವಾಗಿಲ್ಲ ಎಂಬ ಮಾತುಗಳು ಕೇಳಿ ಬಂದವು. ಅದು ನಿಜವಾಗಿದೆ. ಸಿನಿಮಾ ನೋಡಿದ ಅನೇಕರಿಗೆ ಗ್ರಾಫಿಕ್ಸ್ ಇಷ್ಟ ಆಗಲೇ ಇಲ್ಲ. ‘ಬ್ರಹ್ಮಾಸ್ತ್ರ’ ಬರೋಬ್ಬರಿ 410 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡಿದೆ. ಬಜೆಟ್​ಗೆ ಹೋಲಿಕೆ ಮಾಡಿದರೆ ಸಿನಿಮಾದ ಗ್ರಾಫಿಕ್ಸ್ ಕಳಪೆಯಾಗೇ ಇದೆ ಎಂದು ಕೆಲವರು ತಮ್ಮ ಅಭಿಪ್ರಾಯ ಮುಂದಿಟ್ಟಿದ್ದಾರೆ. ‘ಇದು ಎಕ್ಸ್​ಟ್ರಾ ಬಜೆಟ್​ನ ನಾಗಿಣಿ ಧಾರಾವಾಹಿ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇನ್ನೂ ಕೆಲವರಿಗೆ ಸಿನಿಮಾ ಇಷ್ಟವಾಗಿದೆ. ‘ಇದು ನಿಜಕ್ಕೂ ಒಂದೊಳ್ಳೆಯ ವಿಶ್ಯುವಲ್ ಟ್ರೀಟ್. ನಿರ್ದೇಶಕ ಅಯಾನ್ ಮುಖರ್ಜಿ ಅವರ ಆಲೋಚನೆ ನಿಜಕ್ಕೂ ಗ್ರೇಟ್​. ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಲಿದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಇದನ್ನೂ ಓದಿ: ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಬ್ರಹ್ಮಾಸ್ತ್ರ’ ಕಮಾಲ್; ಆದರೆ, ‘ಕೆಜಿಎಫ್ 2’ ಸಮೀಪವೂ ಬರಲಿಲ್ಲ ರಣಬೀರ್ ಸಿನಿಮಾ ಕಲೆಕ್ಷನ್

ಕೆಲವರು ಆಲಿಯಾ ಭಟ್ ನಟನೆಯನ್ನು ಕೊಂಡಾಡಿದ್ದಾರೆ. ಅವರು ಒಳ್ಳೆಯ ನಟನೆ ತೋರಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ರಣಬೀರ್ ಕಪೂರ್, ಮೌನಿ ರಾಯ್ ಮೊದಲಾದವರ ಪಾತ್ರದ ಬಗ್ಗೆಯೂ ಮೆಚ್ಚುಗೆ ಕೇಳಿ ಬಂದಿದೆ.

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ