‘ಅಬ್ಬಬ್ಬಾ.. ಇದು ನಿಜಕ್ಕೂ ಮಾಸ್ಟರ್​ಪೀಸ್​’; ‘ಆಪನ್​ಹೈಮರ್’ ಚಿತ್ರದ ವಿಮರ್ಶೆ ತಿಳಿಸಿದ ಪ್ರೇಕ್ಷಕರು

‘ಕಿಲಿಯನ್ ಮರ್ಫಿ ಅವರ ನಟನೆ ಅದ್ಭುತ. ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ಅವರಿಗೆ ಖಂಡಿತವಾಗಿಯೂ ಅವಾರ್ಡ್ ಸಿಗಲಿದೆ. ಇದು ಕ್ರಿಸ್ಟೋಫರ್ ನೋಲನ್ ಅವರ ಮಾಸ್ಟರ್​ಪೀಸ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ಅಬ್ಬಬ್ಬಾ.. ಇದು ನಿಜಕ್ಕೂ ಮಾಸ್ಟರ್​ಪೀಸ್​’; ‘ಆಪನ್​ಹೈಮರ್’ ಚಿತ್ರದ ವಿಮರ್ಶೆ ತಿಳಿಸಿದ ಪ್ರೇಕ್ಷಕರು
ಕಿಲಿಯನ್ ಮರ್ಫಿ
Follow us
|

Updated on:Jul 21, 2023 | 12:37 PM

ಕ್ರಿಸ್ಟೋಫರ್ ನೋಲನ್ (Christopher Nolan) ನಿರ್ದೇಶನದ ‘ಆಪನ್ ಹೈಮರ್’ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ಸುಳ್ಳಾಗಲಿಲ್ಲ. ಈ ಚಿತ್ರವನ್ನು ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಣು ಬಾಂಬ್ ಕಂಡುಹಿಡಿದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ (J. Robert Oppenheimer) ಅವರ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಪಾತ್ರದಲ್ಲಿ ಕಿಲಿಯನ್​ ಮರ್ಫಿ ನಟಿಸಿದ್ದಾರೆ. ಅವರ ನಟನೆಗೂ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾಗೆ ಸಿಕ್ಕ ವಿಮರ್ಶೆ ನೋಡಿದರೆ ಚಿತ್ರ ಧೂಳೆಬ್ಬಿಸೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್​ನ ಎರಡು ನಗರಗಳ ಮೇಲೆ ಅಣುಬಾಂಬ್ ಹಾಕಲಾಯಿತು. ಈ ಅಣುಬಾಂಬ್​ನ ಕಂಡು ಹಿಡಿದಿದ್ದು ಜೆ ರಾಬರ್ಟ್​ ಆಪನ್​ಹೈಮರ್. ಅವರ ಜೀವನಾಧಾರಿತ ಸಿನಿಮಾ ಮಾಡುತ್ತಾರೆ ಎಂದಾಗಲೇ ನಿರೀಕ್ಷೆ ಸೃಷ್ಟಿ ಆಗಿತ್ತು. ಜುಲೈ 21ರಂದು ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಆಸ್ಕರ್​ ಅವಾರ್ಡ್​ನಲ್ಲಿ ಇದು ಹಲವು ಪ್ರಶಸ್ತಿ ಗೆಲ್ಲುವ ಭರವಸೆ ಸೃಷ್ಟಿಸಿದೆ.

‘ಕಿಲಿಯನ್ ಮರ್ಫಿ ಅವರ ನಟನೆ ಅದ್ಭುತ. ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ಅವರಿಗೆ ಖಂಡಿತವಾಗಿಯೂ ಅವಾರ್ಡ್ ಸಿಗಲಿದೆ. ಇದು ಕ್ರಿಸ್ಟೋಫರ್ ನೋಲನ್ ಅವರ ಮಾಸ್ಟರ್​ಪೀಸ್’ ಎಂದು ಕೆಲವರು ಬರೆದುಕೊಂಡಿದ್ದಾರೆ. ಸಿನಿಮಾ ಅರ್ಧ ಕಲರ್ ಹಾಗೂ ಇನ್ನರ್ಧ ಕಪ್ಪು-ಬಿಳುಪಿನ ಶೈಲಿಯಲ್ಲಿ ಮೂಡಿ ಬಂದಿದೆ.

‘ಆಪನ್​ಹೈಮರ್ ಸಿನಿಮಾ ಬಗ್ಗೆ ಶಬ್ದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅದನ್ನು ನೀವು ಥಿಯೇಟರ್​ನಲ್ಲೇ ನೋಡಿ ಎಂಜಾಯ್ ಮಾಡಬೇಕು. 10ಕ್ಕೆ 10 ಅಂಕ ನೀಡುತ್ತೇವೆ’ ಎಂದು ಪ್ರೇಕ್ಷಕನೋರ್ವ ಬರೆದುಕೊಂಡಿದ್ದಾನೆ. ಇನ್ನು, ಸಿನಿಮಾ ವಿಮರ್ಶೆ ತಿಳಿಸುವ ಭರದಲ್ಲಿ ಕೆಲವರು ಸಿನಿಮಾದ ಪ್ರಮುಖ ದೃಶ್ಯಗಳನ್ನು ಶೂಟ್ ಮಾಡಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲೂ ಧೂಳೆಬ್ಬಿಸಿದ ಕ್ರಿಸ್ಟೋಫರ್ ನೋಲನ್; ‘ಆಪನ್​ಹೈಮರ್’ ಟಿಕೆಟ್ ಸೋಲ್ಡ್ಔಟ್

ಜುಲೈ 11ರಂದು ಪ್ಯಾರಿಸ್​ನಲ್ಲಿ, ಜುಲೈ 13ರಂದು ಲಂಡನ್​ನಲ್ಲಿ, ಜುಲೈ 17ರಂದು ನ್ಯೂಯಾರ್ಕ್​​ನಲ್ಲಿ ಪ್ರೀಮಿಯರ್ ಆಗಿತ್ತು. ಇಂದು ಬಹುತೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದೆ.

Published On - 12:35 pm, Fri, 21 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ