AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara Movie: ‘ಸೂಪರ್ ಆ್ಯಕ್ಷನ್, ನಾನಿ ನಟನೆಗೆ ಭೇಷ್’; ‘ದಸರಾ’ ಸಿನಿಮಾ ನೋಡಿ ಫ್ಯಾನ್ಸ್ ಖುಷ್

ನಾನಿ ನಟನೆಯನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಲವರ್ ಬಾಯ್ ರೀತಿಯ ಪಾತ್ರಗಳಲ್ಲಿ ನಾನಿ ಹೆಚ್ಚು ಗಮನ ಸೆಳೆದಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಬೇರೆಯದೇ ಅವತಾರ ತಾಳಿದ್ದಾರೆ ಎನ್ನುವ ಅಭಿಪ್ರಾಯ ಅನೇಕರಿಂದ ಕೇಳಿ ಬಂದಿದೆ.

Dasara Movie: ‘ಸೂಪರ್ ಆ್ಯಕ್ಷನ್, ನಾನಿ ನಟನೆಗೆ ಭೇಷ್’; ‘ದಸರಾ’ ಸಿನಿಮಾ ನೋಡಿ ಫ್ಯಾನ್ಸ್ ಖುಷ್
ನಾನಿ
ರಾಜೇಶ್ ದುಗ್ಗುಮನೆ
|

Updated on: Mar 30, 2023 | 10:48 AM

Share

ನ್ಯಾಚುರಲ್ ಸ್ಟಾರ್ ನಾನಿ ಹಾಗೂ ಕೀರ್ತಿ ಸುರೇಶ್ (Keerthy Suresh) ನಟನೆಯ ‘ದಸರಾ’ ಸಿನಿಮಾ ರಾಮ ನವಮಿ ಪ್ರಯುಕ್ತ ಇಂದು (ಮಾರ್ಚ್​ 30) ರಿಲೀಸ್ ಆಗಿದೆ. ಮುಂಜಾನೆಯಿಂದಲೇ ಶೋ ಆರಂಭ ಆಗಿದ್ದು, ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ನಾನಿ ಅಭಿಮಾನಿಗಳಿಗೆ ಸಿನಿಮಾ ಇಷ್ಟ ಆಗಿದೆ. ಚಿತ್ರ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ. ನಾನಿ ಅವರು ರಗಡ್ ಅವತಾರದಲ್ಲಿ ಕಾಣಿಸಿಕೊಂಡರೆ, ಕೀರ್ತಿ ಸುರೇಶ್ ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ ಎನ್ನುವ ಅಭಿಪ್ರಾಯ ಪ್ರೇಕ್ಷಕರ ವಲಯದಿಂದ ಸಿಕ್ಕಿದೆ.

ನಾನಿ-ಕೀರ್ತಿ ನಟನೆ ಕೊಂಡಾಡಿದ ಅಭಿಮಾನಿಗಳು

ನಾನಿ ನಟನೆಯನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಲವರ್ ಬಾಯ್ ರೀತಿಯ ಪಾತ್ರಗಳಲ್ಲಿ ನಾನಿ ಹೆಚ್ಚು ಗಮನ ಸೆಳೆದಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಬೇರೆಯದೇ ಅವತಾರ ತಾಳಿದ್ದಾರೆ ಎನ್ನುವ ಅಭಿಪ್ರಾಯ ಅನೇಕರಿಂದ ಕೇಳಿ ಬಂದಿದೆ. ಅವರು ಆ್ಯಕ್ಷನ್ ಹಾಗೂ ಭಾವಾನತ್ಮಕ ದೃಶ್ಯಗಳಿಗೆ ಸರಿಯಾದ ನ್ಯಾಯ ಒದಗಿಸಿದ್ದಾರೆ ಎನ್ನುತ್ತಿದ್ದಾರೆ ಫ್ಯಾನ್ಸ್. ಕೀರ್ತಿ ಸುರೇಶ್ ಅವರ ಅಭಿನಯವನ್ನೂ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ತಾಂತ್ರಿಕವಾಗಿ ಶ್ರೀಮಂತ

ತಾಂತ್ರಿಕವಾಗಿ ನಾನಿ ಸಿನಿಮಾ ಶ್ರೀಮಂತವಾಗಿದೆ ಎಂದು ಫ್ಯಾನ್ಸ್ ಹೇಳಿದ್ದಾರೆ. ಹಿನ್ನೆಲೆ ಸಂಗೀತ, ಚಿತ್ರದ ಛಾಯಾಗ್ರಹಣದ ಬಗ್ಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಆ್ಯಕ್ಷನ್ ದೃಶ್ಯಗಳು ಕೂಡ ಫ್ಯಾನ್ಸ್​ಗೆ ರೋಮಾಂಚನ ಮೂಡಿಸಿದೆ.

ಕೆಲವು ವಿಚಾರ ಇಷ್ಟ ಆಗಿಲ್ಲ ಎಂದ ಫ್ಯಾನ್ಸ್

ಸಿನಿಮಾ ಒಂದು ವರ್ಗದ ಜನರಿಗೆ ಇಷ್ಟವಾಗಿಲ್ಲ. ವಿಲನ್​ಗಳು ಇನ್ನೂ ರಗಡ್ ಆಗಿ ಇರಬೇಕಿತ್ತು ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ. ಕೆಲವು ಕಡೆಗಳಲ್ಲಿ ನಿಧಾನಗತಿಯ ನರೇಷನ್ ಇದೆ ಎಂದು ಹೇಳಿದ್ದಾರೆ. ಕಥೆಯಲ್ಲಿ ಎಲ್ಲಿಯೂ ಟ್ವಿಸ್ಟ್ ಆ್ಯಂಡ್ ಟರ್ನ್​ಗಳು ಇಲ್ಲ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಾನಿ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್​ಗೆ ವ್ಯಯವಾಯ್ತು ಭರ್ಜರಿ ಹಣ; ಇದರಲ್ಲಿ ಮತ್ತೊಂದು ಸಿನಿಮಾ ಮಾಡಬಹುದು

ಜನರಿಗೆ ಸಿನಿಮಾ ಇಷ್ಟ ಆಯ್ತಾ?

‘ನಾನಿ ಅವರ ವೃತ್ತಿಜೀವನದಲ್ಲೇ ಇದು ಅತ್ಯುತ್ತಮ ಸಿನಿಮಾ. ಸಿಳ್ಳೆ ನಿಲ್ಲುವುದೇ ಇಲ್ಲ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ಕೆಲವರು ‘ನಾನಿ ಅಣ್ಣ ಹಿಟ್ ಕೊಟ್ಟ’ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ನಾನಿ ಎನರ್ಜಿಯನ್ನು ಕೊಂಡಾಡಿದ್ದಾರೆ. ಬಹುತೇಕರಿಗೆ ಸಿನಿಮಾ ಇಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ