AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daskath Movie Review: ತುಳುನಾಡಿನಲ್ಲೊಂದು ಒಳಿತು-ಕೆಡುಕಿನ ಸಂಘರ್ಷದ ಕಥೆ ‘ದಸ್ಕತ್’

ಸಾಕಷ್ಟು ಗಂಭೀರ ವಿಷಯಗಳನ್ನು ‘ದಸ್ಕತ್’ ಸಿನಿಮಾದಲ್ಲಿ ಹೇಳಲಾಗಿದೆ. ಅದರಲ್ಲಿ ತಿಳಿ ಹಾಸ್ಯ, ಪ್ರೇಮಕಥೆ ಕೂಡ ಬೆರೆಸಲಾಗಿದೆ. ಇದೊಂದು ಸಂಘರ್ಷದ ಕಥೆ. ಶುರುವಿನಿಂದ ಕೊನೆತನಕ ಸಂಘರ್ಷವೇ ಇದೆ. ಗ್ರಾಮೀಣ ಭಾಗದ ಕಹಾನಿಯನ್ನು ಈ ಸಿನಿಮಾ ತೆರೆದಿಡುತ್ತಿದೆ. ‘ದಸ್ಕತ್’ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

Daskath Movie Review: ತುಳುನಾಡಿನಲ್ಲೊಂದು ಒಳಿತು-ಕೆಡುಕಿನ ಸಂಘರ್ಷದ ಕಥೆ ‘ದಸ್ಕತ್’
Daskath Movie Poster
ಮದನ್​ ಕುಮಾರ್​
|

Updated on: May 09, 2025 | 6:23 PM

Share

ಸಿನಿಮಾ: ದಸ್ಕತ್. ನಿರ್ಮಾಣ: ಜಗದೀಶ್ ಎನ್. ಅರೆಬಿನ್ನಮಂಗಲ. ನಿರ್ದೇಶನ: ಅನೀಶ್ ಪೂಜಾರಿ ವೇಣುರು. ಪಾತ್ರವರ್ಗ: ದೀಕ್ಷಿತ್ ಕೆ. ಅಂಡಿಂಜೆ, ಮೋಹನ್ ಶೇಣಿ, ಭವ್ಯಾ ಪೂಜಾರಿ, ಚಂದ್ರಹಾಸ್ ಉಲ್ಲಾಳ್ ಮುಂತಾದವರು. ಸ್ಟಾರ್: 3/5

ಗ್ರಾಮೀಣ ಭಾಗದಲ್ಲಿ ಇರುವ ಲೋಕವೇ ಬೇರೆ. ಪ್ರತಿ ಹಳ್ಳಿಯಲ್ಲೂ ರೋಚಕವಾದ ಕಥೆಗಳು ಇವೆ. ಅಂಥ ಒಂದು ಕಹಾನಿಯನ್ನು ಇಟ್ಟುಕೊಂಡು ‘ದಸ್ಕತ್’ ಸಿನಿಮಾ ಮಾಡಲಾಗಿದೆ. ಅನೀಶ್ ಪೂಜಾರಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ತುಳುನಾಡಿನ ಕಥೆಯನ್ನು ಅವರು ತೆರೆಗೆ ತಂದಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವ ಘರ್ಷಣೆಯನ್ನೇ ಅವರು ಬೆಳ್ಳಿತೆರೆಯಲ್ಲಿ ತೋರಿಸಿದ್ದಾರೆ. ಅಲ್ಲಿನ ಜನರ ನಂಬಿಕೆ, ಆಚಾರ-ವಿಚಾರ, ಲಂಚಾವತಾರ, ಮೇಲು-ಕೀಳು ಸಮರ ಮುಂತಾದವುಗಳೇ ‘ದಸ್ಕತ್’ ಸಿನಿಮಾದಲ್ಲಿ ಹೈಲೈಟ್ ಆಗಿವೆ.

ಬಡವರ ಜೀವ ಹಿಂಡುವ ಅಧಿಕಾರಿಗಳು ಎಲ್ಲ ಕಡೆಗಳಲ್ಲೂ ಇರುತ್ತಾರೆ. ಅಂಥ ಒಬ್ಬ ಸರ್ಕಾರಿ ನೌಕರ ಗ್ರಾಮ ಪಂಚಾಯಿತಿಯಲ್ಲಿ ಇದ್ದರೆ ಅಲ್ಲಿನ ಜನರಿಗೆ ಹಲವು ಕಷ್ಟಗಳು ಎದುರಾಗುತ್ತವೆ. ಸರ್ಕಾರದಿಂದ ಸಿಗುವ ಸೌಕರ್ಯಗಳನ್ನು ಪಡೆಯಲು ಲಂಚ ಕೊಡದಿದ್ದರೆ ಯಾವ ಕೆಲಸವೂ ಆಗುವುದಿಲ್ಲ ಎಂಬ ವಾತಾವರಣ ನಿರ್ಮಾಣ ಆಗುತ್ತದೆ. ಅದರ ಜೊತೆಗೆ ಜಾತಿಯ ಕಾರಣಕ್ಕೆ ಜನರನ್ನು ಅವಮಾನಿಸಲಾಗುತ್ತದೆ. ಇಂಥ ಗಂಭೀರ ವಿಷಯಗಳನ್ನು ಇಟ್ಟುಕೊಂಡು ‘ದಸ್ಕತ್’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ
Image
ಈಡೇರಲೇ ಇಲ್ಲ ಮುತ್ತಪ್ಪ ರೈ ಬಯೋಪಿಕ್ ಆಸೆ: ವಿವರಿಸಿದ ರವಿ ಶ್ರೀವತ್ಸ
Image
ಸೌರವ್ ಗಂಗೂಲಿ ಜೀವನ ಆಧರಿಸಿದ ಸಿನಿಮಾಕ್ಕೆ ಕೊನೆಗೂ ಸಿಕ್ಕ ನಾಯಕ
Image
ಬಹುನಿರೀಕ್ಷಿತ ಕ್ರಿಕೆಟಿಗನ ಬಯೋಪಿಕ್ ಘೋಷಣೆ, ಯಾರು ಆ ಆಟಗಾರ
Image
ಬರಲಿದೆ ರಜನಿಕಾಂತ್ ಬಯೋಪಿಕ್; ಬಾಲಿವುಡ್ ನಿರ್ಮಾಪಕನ ಬಂಡವಾಳ

ತುಳುನಾಡಿನ ಶೈಲಿನ ಕನ್ನಡವನ್ನು ‘ದಸ್ಕತ್’ ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ. ಈ ಕಾರಣದಿಂದ ಚಿತ್ರಕ್ಕೆ ಬೇರೆಯದೇ ಫ್ಲೇವರ್ ಬಂದಿದೆ. ಯಾವುದೇ ಒಂದು ಪಾತ್ರವನ್ನು ಹೀರೋ ರೀತಿ ಬಿಂಬಿಸದೇ ಎಲ್ಲ ಪಾತ್ರಕ್ಕೂ ಅಗತ್ಯವಿರುವ ಮಹತ್ವವನ್ನು ನೀಡಲಾಗಿದೆ. ಆರಂಭದಿಂದ ಕ್ಲೈಮ್ಯಾಕ್ಸ್ ತನಕ ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಸಂಘರ್ಷದ ರೀತಿ ಈ ಸಿನಿಮಾ ಮೂಡಿಬಂದಿದೆ. ಅಂತಿಮವಾಗಿ ಯಾವುದು ಗೆಲ್ಲುತ್ತದೆ ಎಂಬುದನ್ನು ನೋಡಲು ಪೂರ್ತಿ ಸಿನಿಮಾ ನೋಡಬೇಕು.

‘ದಸ್ಕತ್’ ಸಿನಿಮಾದಲ್ಲಿ ಗಂಭೀರವಾದ ವಿಷಯವನ್ನೇ ಹೇಳಲಾಗಿದೆಯಾದರೂ ಅದನ್ನು ಸಾಧ್ಯವಾದಷ್ಟು ಲವಲವಿಕೆಯಿಂದ ಪ್ರಸ್ತುತಪಡಿಸಲು ಪ್ರಯತ್ನಿಸಲಾಗಿದೆ. ತಿಳಿಯಾದ ಹಾಸ್ಯವನ್ನು ಬೆರೆಸುವ ಮೂಲಕ ಪ್ರೇಕ್ಷಕರನ್ನು ನಗಿಸುವ ಪ್ರಯತ್ನ ನಡೆದಿದೆ. ಈ ನಡುವೆ ಚಿಕ್ಕದೊಂದು ಪ್ರೇಮ್ ಕಹಾನಿ ಕೂಡ ಇದೆ. ಉಳಿದಂತೆ ಇಡೀ ಸಿನಿಮಾವನ್ನು ರಿಯಲಿಸ್ಟಿಕ್ ಆಗಿ ಕಟ್ಟಿಕೊಡಲಾಗಿದೆ. ಯಾವ ಅತಿರೇಕಗಳೂ ಇಲ್ಲದೇ ತುಂಬ ಸಹಜವಾಗಿ ದೃಶ್ಯಗಳನ್ನು ಪ್ರೇಕ್ಷಕರ ಮುಂದೆ ಇಡಲಾಗಿದೆ.

ಈ ಸಿನಿಮಾದಲ್ಲಿ ತೋರಿಸಿರುವ ಬಡವ ಮತ್ತು ದಣಿ ನಡುವಿನ ಸಂಘರ್ಷವನ್ನು ನೋಡಿದಾಗ ‘ಕಾಂತಾರ’, ‘ಭೂತಯ್ಯನ ಮಗ ಅಯ್ಯು’ ಮುಂತಾದ ಸಿನಿಮಾಗಳು ನೆನಪಿಗೆ ಬರುತ್ತವೆ. ಆದರೆ ಆರಂಭದಿಂದ ಕೊನೇ ತನಕ ಈ ಸಂಘರ್ಷವೇ ಮುಂದುವರಿಯುತ್ತದೆ. ದೊಡ್ಡ ಟ್ವಿಸ್ಟ್​ಗಳನ್ನು ಇಲ್ಲಿ ನಿರೀಕ್ಷಿಸಲಾಗದು. ಸರಣಿ ಸಂಘರ್ಷಗಳನ್ನು ಮೀರಿ ಈ ಕಥೆ ಹೆಚ್ಚಿನದ್ದನ್ನು ಸಾಧಿಸುವ ಪ್ರಯತ್ನ ಮಾಡಿದ್ದರೆ ಚಿತ್ರದ ತೂಕ ಹೆಚ್ಚುತ್ತಿತ್ತು.

ದೀಕ್ಷಿತ್ ಕೆ. ಅಂಡಿಂಜೆ, ಭವ್ಯಾ ಪೂಜಾರಿ, ಚಂದ್ರಹಾಸ್ ಉಲ್ಲಾಳ್, ಮೋಹನ್ ಶೇಣಿ, ಯೋಗಿಶ್ ಶೆಟ್ಟಿ, ಯುವ ಶೆಟ್ಟಿ, ನೀರಜ್ ಮುಂತಾದ ಕಲಾವಿದರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ