AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devara First Half Review: ಹೇಗಿದೆ ‘ದೇವರ’ ಸಿನಿಮಾ ಮೊದಲಾರ್ಧ? ಇಲ್ಲಿದೆ ಡೀಟೇಲ್ಸ್

‘ದೇವರ’ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್, ಜಾನ್ವಿ ಕಪೂರ್, ಸೈಫ್ ಅಲಿ ಖಾನ್ ನಟಿಸಿದ್ದಾರೆ. ಕೊರಟಾಲ ಶಿವ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಎನ್​ಟಿಆರ್ ಆರ್ಟ್ಸ್​ ನಿರ್ಮಾಣ ಮಾಡಿದೆ. ಈ ಚಿತ್ರದ ಬಜೆಟ್ 200 ಕೋಟಿ ರೂಪಾಯಿ ಇದೆ.

Devara First Half Review: ಹೇಗಿದೆ ‘ದೇವರ’ ಸಿನಿಮಾ ಮೊದಲಾರ್ಧ? ಇಲ್ಲಿದೆ ಡೀಟೇಲ್ಸ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
| Edited By: |

Updated on:Sep 27, 2024 | 6:29 AM

Share

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾ ಎಂದರೆ ಅದು ‘ದೇವರ’ ಚಿತ್ರ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಆಚಾರ್ಯ’ ಮೂಲಕ ಸೋಲು ಕಂಡ ಕೊರಟಾಲ ಶಿವ ಅವರು ‘ದೇವರ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡುವ ಪ್ರಯತ್ನದಲ್ಲಿ ಇದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ಕಲಾವಿದರಾದ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ನಟಿಸಿದ್ದಾರೆ.

‘ದೇವರ’ ಸಿನಿಮಾದ ಕಾಲಘಟ್ಟ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ. 80 ಹಾಗೂ 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಜೂನಿಯರ್ ಎನ್‌ಟಿಆರ್ ಅವರ ಎಂಟ್ರಿ ಗಮನ ಸೆಳೆದಿದೆ. ಭರ್ಜರಿ ಮಾಸ್ ಆಗಿ ಅವರ ಆಗಮನ ಆಗುತ್ತದೆ. ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಹೈಲೈಟ್ ಆಗಿದೆ. ಪ್ರತಿ ದೃಶ್ಯಗಳನ್ನು ಅದ್ದೂರಿಯಾಗಿ ತರಲು ಪ್ರಯತ್ನ ನಡೆದಿದೆ.

ಜಾನ್ವಿ ಕಪೂರ್ ಅವರ ಆಗಮನ ಮೊದಲಾರ್ಧದಲ್ಲಿ ಆಗುವುದೇ ಇಲ್ಲ. ಹೀಗಾಗಿ, ರೊಮ್ಯಾಂಟಿಕ್ ಸಾಂಗ್‌ನ ಆಗಮನ ಆಗಿಲ್ಲ. ಸಿನಿಮಾ ಉದ್ದಕ್ಕೂ ಆ್ಯಕ್ಷನ್ ದೃಶ್ಯಗಳು ಹೇರಳವಾಗಿ ಇದೆ. ಇದು ಎನ್‌ಟಿಆರ್ ಅಭಿಮಾನಿಗಳನ್ನು ರಂಜಿಸುತ್ತದೆ.

ಸಿನಿಮಾ ತುಂಬಾನೇ ನಿಧಾನವಾಗಿ ಸಾಗುತ್ತದೆ. ಆಗಾಗ ಸಪ್ಪೆ ದೃಶ್ಯಗಳು ಇವೆ. ಸಮುದ್ರದ ತೀರದಲ್ಲೇ ಸಿನಿಮಾದ ಕಥೆ ಸಾಗುತ್ತದೆ. ‌ಅದ್ದೂರಿ ಸೆಟ್‌ಗಳು ಗಮನ ಸೆಳೆಯುತ್ತವೆ. ನೆಗೆಟಿವ್ ಶೇಡ್‌ನಲ್ಲಿ‌ ಸೈಫ್ ಅಲಿ ಖಾನ್ ಅವರು ಮಿಂಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:24 am, Fri, 27 September 24

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ