AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharani Mandala Madhyadolage: ಅಲ್ಲಲ್ಲೇ ಬೆಸೆದುಕೊಂಡರೂ ಮತ್ತೆಲ್ಲಿಗೋ ಕರೆದೊಯ್ಯುವ ಕಾಕತಾಳೀಯ ಕಥನ

Dharani Mandala Madhyadolage Review: ಪ್ರೇಕ್ಷಕರಿಂದ ಹೆಚ್ಚು ಗಮನವನ್ನು ಬೇಡುವಂತಹ ಸಿನಿಮಾ ಇದು. ಗಮನವನ್ನು ಬೇರೆಡೆಗೆ ಹರಿಸಿದರೆ ಕೆಲವೊಂದು ದೃಶ್ಯಗಳು ಗೊಂದಲಮಯ ಎನಿಸಬಹುದು.

Dharani Mandala Madhyadolage: ಅಲ್ಲಲ್ಲೇ ಬೆಸೆದುಕೊಂಡರೂ ಮತ್ತೆಲ್ಲಿಗೋ ಕರೆದೊಯ್ಯುವ ಕಾಕತಾಳೀಯ ಕಥನ
‘ಧರಣಿ ಮಂಡಲ ಮಧ್ಯದೊಳಗೆ’ ಪೋಸ್ಟರ್​
ಮದನ್​ ಕುಮಾರ್​
| Edited By: |

Updated on: Dec 02, 2022 | 11:05 AM

Share

ಚಿತ್ರ: ಧರಣಿ ಮಂಡಲ ಮಧ್ಯದೊಳಗೆ

ನಿರ್ಮಾಣ: ಓಂಕಾರ್​

ನಿರ್ದೇಶನ: ಶ್ರೀಧರ್​ ಶಿಕಾರಿಪುರ

ಇದನ್ನೂ ಓದಿ
Image
Triple Riding Movie Review: ‘ತ್ರಿಬಲ್​ ರೈಡಿಂಗ್​’ ರೇಸ್​ನಲ್ಲಿ ಓವರ್​ಟೇಕ್​ ಮಾಡಿದ ಸಾಧುಕೋಕಿಲ, ರಂಗಾಯಣ ರಘು
Image
Shubhamangala: ‘ಶುಭಮಂಗಳ’ ಸಿನಿಮಾ ವಿಮರ್ಶೆ; ಇದು ಆರು ಪ್ರೇಮಕಥೆಗಳ ಸುಂದರ ಸಂಕಲನ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Guru Shishyaru Review: ರೋಚಕ ಖೊಖೊ ಪಂದ್ಯದ ಜೊತೆ ಹಿತ-ಮಿತವಾದ ಕಾಮಿಡಿ

ಪಾತ್ರವರ್ಗ: ನವೀನ್​ ಶಂಕರ್​, ಐಶಾನಿ ಶೆಟ್ಟಿ, ಯಶ್​ ಶೆಟ್ಟಿ, ಸಿದ್ದು ಮೂಲಿಮನಿ, ಬಾಲ ರಾಜವಾಡಿ ಮುಂತಾದವರು.

ಸ್ಟಾರ್​: 3/5

ಕಥೆ ಮತ್ತು ಅದನ್ನು ಕಟ್ಟಿಕೊಟ್ಟಿರುವ ವಿಚಾರದಲ್ಲಿ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಒಂದು ಭಿನ್ನ ಪ್ರಯತ್ನವಾಗಿ ಕಾಣುತ್ತದೆ. ಇದನ್ನು ಒಂದು ಹೈಪರ್​ ಲಿಂಕ್​ ಸಿನಿಮಾ ಎಂದು ಚಿತ್ರತಂಡವೇ ಕರೆದುಕೊಂಡಿದೆ. ಹೈಪರ್​ ಲಿಂಕ್​ ಎಂದರೆ ಒಂದರೊಳಗೆ ಇನ್ನೊಂದು ಬೆಸದುಕೊಂಡಿರುವುದು ಎಂದರ್ಥ. ಇದು ಕೇವಲ ಕಥೆಗೆ ಸೀಮಿತವಾಗಿಲ್ಲ. ಎಲ್ಲರ ಬದುಕಿಗೂ ಅನ್ವಯ ಆಗುವಂತಹ ವಿಚಾರ ಎಂಬುದನ್ನು ಈ ಸಿನಿಮಾದಲ್ಲಿ ಮೂಲಕ ತೋರಿಸಲಾಗಿದೆ. ಹೊಸ ನಿರ್ದೇಶಕ ಶ್ರೀಧರ್​ ಶಿಕಾರಿಪುರ ಅವರು ಎಲ್ಲವನ್ನೂ ಅಚ್ಚುಕಟ್ಟಾಗಿ ತೆರೆಮೇಲೆ ತಂದಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ.

ನಾಲ್ಕು ಡಿಫರೆಂಟ್​ ಕಥೆಗಳು ಈ ಸಿನಿಮಾದ ಆರಂಭದಲ್ಲಿ ತೆರೆದುಕೊಳ್ಳುತ್ತವೆ. ಪ್ರಾರಂಭದಲ್ಲಿ ಒಂದಕ್ಕೊಂದು ಸಂಬಂಧವೇ ಇಲ್ಲದ ಕಥೆಗಳು ನಂತರದಲ್ಲಿ ನಿಧಾನವಾಗಿ ಬೆಸೆದುಕೊಳ್ಳಲು ಆರಂಭಿಸುತ್ತವೆ. ಕೆಲವೇ ಗಂಟೆಗಳಲ್ಲಿ ನಡೆಯುವ ಒಂದಷ್ಟು ಘಟನೆಗಳನ್ನು ಇಟ್ಟುಕೊಂಡು ನಿರ್ದೇಶಕರು ಒಂದು ರೋಚಕ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಅದೇ ಈ ಸಿನಿಮಾದ ಪ್ಲಸ್​ ಪಾಯಿಂಟ್​.

ನಾವು ಒಬ್ಬರಿಗೆ ಸಹಾಯ ಮಾಡಿದರೆ, ಇನ್ನೊಬ್ಬರು ನಮಗೆ ಸಹಾಯ ಮಾಡುತ್ತಾರೆ ಎಂಬ ಕಾನ್ಸೆಪ್ಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಈ ಹಿಂದೆ ‘ಗುಳ್ಟು’ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ ನವೀನ್​ ಶಂಕರ್​ ಅವರು ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಹಾಗಂತ ಇಡೀ ಕಥೆಯಲ್ಲಿ ಕೇವಲ ಅವರು ಮಾತ್ರ ಹೈಲೈಟ್​ ಆಗಿಲ್ಲ. ಇನ್ನುಳಿದ ಪಾತ್ರಗಳು ಕೂಡ ಶೈನ್​ ಆಗಿವೆ.

ಇದನ್ನೂ ಓದಿ: ಧರಣಿ ಮಂಡಲ ಮಧ್ಯದೊಳಗೆ: ನವೀನ್​ ಶಂಕರ್-ಐಶಾನಿ ಶೆಟ್ಟಿಯ ‘ಮಾತು ಮಾತಲ್ಲೇ..’ ಗೀತೆಗೆ ವಿಜಯ್​ ಪ್ರಕಾಶ್​ ಧ್ವನಿ

ನವೀನ್​ ಶಂಕರ್​ ಅವರಿಗೆ ಜೋಡಿಯಾಗಿ ಐಶಾನಿ ಶೆಟ್ಟಿ ನಟಿಸಿದ್ದಾರೆ. ಮಾದಕ ವಸ್ತುಗಳಿಗೆ ಅಡಿಕ್ಟ್​ ಆಗಿರುವ ಹುಡುಗಿಯ ಪಾತ್ರದಲ್ಲಿ ಅವರು ಗಮನಾರ್ಹವಾಗಿ ನಟಿಸಿದ್ದಾರೆ. ಸಿದ್ದು ಮೂಲಿಮನೆ, ಯಶ್​ ಶೆಟ್ಟಿ ನಿಭಾಯಿಸಿರುವ ಪಾತ್ರಗಳು ಪ್ರೇಕ್ಷಕರಿಗೆ ಅಚ್ಚರಿ ನೀಡುತ್ತವೆ. ಬೇರೆಲ್ಲ ಚಿತ್ರಗಳಲ್ಲಿ ಖಳನಾಗಿ ಅಬ್ಬರಿಸುತ್ತಿದ್ದ ಯಶ್​ ಶೆಟ್ಟಿ ಅವರಿಗೆ ಇಲ್ಲಿ ಬೇರೆಯದೇ ಶೇಡ್​ ಇರುವ ಪಾತ್ರವಿದೆ. ಕಾಮಿಡಿ ಟ್ರ್ಯಾಕ್​ನಲ್ಲಿ ಪ್ರಕಾಶ್​ ತುಮ್ಮಿನಾಡ್​ ಅವರು ‘ಮರ್ಯಾದೆ ರಾಮಣ್ಣ’ನಾಗಿ ಭರ್ಜರಿ ನಗು ಉಕ್ಕಿಸುತ್ತಾರೆ.

ಪ್ರೇಕ್ಷಕರಿಂದ ಹೆಚ್ಚು ಗಮನವನ್ನು ಬೇಡುವಂತಹ ಸಿನಿಮಾ ಇದು. ಗಮನವನ್ನು ಬೇರೆಡೆಗೆ ಹರಿಸಿದರೆ ಕೆಲವೊಂದು ದೃಶ್ಯಗಳು ಗೊಂದಲಮಯ ಎನಿಸಬಹುದು. ಕೆಲವೇ ಗಂಟೆಗಳಲ್ಲಿ ನಡೆಯುವ ಘಟನೆಗಳು ಕಾಕತಾಳೀಯವಾಗಿ ಒಂದಕ್ಕೊಂದು ಬೆಸದುಕೊಳ್ಳುವ ರೀತಿಯೇ ಪ್ರೇಕ್ಷಕರಿಗೆ ಅಚ್ಚರಿ ಮೂಡಿಸುತ್ತದೆ. ಕೀರ್ತನ್​ ಪೂಜಾರಿ ಅವರ ಛಾಯಾಗ್ರಹಣ, ರೋನಾಡ್​ ಬಕ್ಕೇಶ್​ ಹಾಗೂ ಕಾರ್ತಿಕ್​ ಚನ್ನೋಜಿ ರಾವ್​ ಅವರು ಸಂಗೀತ ಕೂಡ ನಿರ್ದೇಶಕ ಶ್ರೀಧರ್​ ಶಿಕಾರಿಪುರ ಅವರ ಪರಿಕಲ್ಪನೆಗೆ ಸೂಕ್ತವಾಗಿ ಸಾಥ್​ ನೀಡಿವೆ.

ಕೆಲವು ದೃಶ್ಯಗಳನ್ನು ಒಂಚೂರು ಮೊನಚುಗೊಳಿಸಿದ್ದರೆ ಈ ಚಿತ್ರ ಇನ್ನಷ್ಟು ಆಪ್ತವಾಗುತ್ತಿತ್ತು. ಕಥೆ ಗಂಭೀರ ಸ್ವರೂಪ ಪಡೆದುಕೊಂಡ ನಂತರವೂ ಆಗಾಗ ನುಗ್ಗಿ ಬರುವ ಕಾಮಿಡಿ ದೃಶ್ಯಗಳಿಂದಾಗಿ ಕ್ಲೈಮ್ಯಾಕ್ಸ್​ನ ತೀವ್ರತೆ ಕಡಿಮೆ ಆದಂತೆ ಅನಿಸುತ್ತದೆ. ಈ ರೀತಿಯ ವಿಚಾರಗಳ ಬಗ್ಗೆ ನಿರ್ದೇಶಕರು ಗಮನ ಹರಿಸಬಹುದಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ