AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drishyam 2 Twitter Review: ‘ದೃಶ್ಯಂ 2’ ಟ್ವಿಟರ್​ ವಿಮರ್ಶೆ; ಅಜಯ್​ ದೇವಗನ್​ ಚಿತ್ರಕ್ಕೆ ಪ್ರೇಕ್ಷಕರ ರಿಯಾಕ್ಷನ್​ ಇಲ್ಲಿದೆ..

Drishyam 2 Movie Review | Ajay Devgn: ‘ದೃಶ್ಯಂ’ ಮೊದಲ ಪಾರ್ಟ್​ ಮತ್ತು ‘ದೃಶ್ಯಂ 2’​ ನಡುವೆ ಕಥೆ ಚೆನ್ನಾಗಿ ಸಿಂಕ್​ ಆಗಿದೆ. ಅಜಯ್​ ದೇವಗನ್​, ಶ್ರೀಯಾ ಶರಣ್​, ಟಬು, ಅಕ್ಷಯ್​ ಖನ್ನಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Drishyam 2 Twitter Review: ‘ದೃಶ್ಯಂ 2’ ಟ್ವಿಟರ್​ ವಿಮರ್ಶೆ; ಅಜಯ್​ ದೇವಗನ್​ ಚಿತ್ರಕ್ಕೆ ಪ್ರೇಕ್ಷಕರ ರಿಯಾಕ್ಷನ್​ ಇಲ್ಲಿದೆ..
‘ದೃಶ್ಯಂ 2’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Nov 18, 2022 | 2:29 PM

Share

‘ದೃಶ್ಯಂ’ ಸಿನಿಮಾ ಮೂಡಿಸಿದ್ದ ಸಂಚಲನ ಸಣ್ಣದೇನಲ್ಲ. ಮಲಯಾಳಂನ ಆ ಚಿತ್ರ ಬೇರೆ ಬೇರೆ ಭಾಷೆಗಳಿಗೆ ರಿಮೇಕ್​ ಆಗಿಯೂ ಗೆಲುವು ಕಂಡಿತ್ತು. ಬಳಿಕ 2021ರಲ್ಲಿ ‘ದೃಶ್ಯಂ 2’ (Drishyam 2) ಕೂಡ ಬಂತು. ಆ ಸಿನಿಮಾ ಸಹ ಬೇರೆ ಬೇರೆ ಭಾಷೆಗಳಿಗೆ ರಿಮೇಕ್​ ಆಯಿತು.​ ಹಿಂದಿಯಲ್ಲಿ ಅಜಯ್​ ದೇವಗನ್​ (Ajay Devgn) ನಟಿಸಿರುವ ‘ದೃಶ್ಯಂ 2’ ಇಂದು (ನ.18) ಬಿಡುಗಡೆ ಆಗಿದೆ. ಅವರ ಜೊತೆ ಶ್ರೀಯಾ ಶರಣ್​, ಟಬು, ಅಕ್ಷಯ್​ ಖನ್ನಾ, ಇಶಿತಾ ದತ್ತ ಮುಂತಾದವರು ನಟಿಸಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿ ಬಂದ ಪ್ರೇಕ್ಷಕರು ಟ್ವಿಟರ್​ ಮೂಲಕ ವಿಮರ್ಶೆ (Drishyam 2 Movie Twitter Review) ತಿಳಿಸಿದ್ದಾರೆ. ಈ ಚಿತ್ರಕ್ಕೆ ಅಭಿಷೇಕ್​ ಪಾಠಕ್​ ನಿರ್ದೇಶನ ಮಾಡಿದ್ದಾರೆ. ಸಿನಿಪ್ರಿಯರಿಂದ ‘ದೃಶ್ಯಂ 2’ ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಈ ಸಿನಿಮಾದ ಕಥೆ ತುಂಬ ಥ್ರಿಲ್ಲಿಂಗ್​ ಆಗಿದೆ. ಯಾವುದೇ ಕಾರಣಕ್ಕೂ ಮಿಸ್​ ಮಾಡಿಕೊಳ್ಳಬೇಡಿ. ನಿರ್ದೇಶಕ ಅಭಿಷೇಕ್​ ಪಾಠಕ್​ ಅವರು ಚೆನ್ನಾಗಿ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಅಜಯ್​ ದೇವಗನ್​, ಟಬು, ಅಕ್ಷಯ್​ ಖನ್ನಾ ಅವರು ಅಭಿನಯ ಸೂಪರ್​ ಆಗಿದೆ’ ಎಂದು ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ಆತ್ಮರಕ್ಷಣೆಗಾಗಿ ನಡೆದ ಒಂದು ಕೊನೆಯನ್ನು ಕಥಾನಾಯಕ ಮುಚ್ಚಿ ಹಾಕುತ್ತಾನೆ. ತನ್ನ ಕುಟುಂಬದವರು ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳದಂತೆ ಚಾಲಾಕಿತನದಿಂದ ಬಚಾವ್​ ಮಾಡುತ್ತಾನೆ. ಇದು ‘ದೃಶ್ಯಂ’ ಮೊದಲ ಪಾರ್ಟ್​ ಕಥೆ. ಎರಡನೇ ಪಾರ್ಟ್​ನಲ್ಲಿ ಆ ಕೇಸ್​ ಮತ್ತೆ ಓಪನ್​ ಆಗುತ್ತದೆ. ಹಲವು ಟ್ವಿಸ್ಟ್​ಗಳ ಮೂಲಕ ಕಥೆ ಸಾಗುತ್ತದೆ. ಈ ಬಾರಿ ಹೀರೋ ತನ್ನ ಕುಟುಂಬವನ್ನು ಹೇಗೆ ರಕ್ಷಿಸುತ್ತಾನೆ ಎಂಬುದನ್ನು ತಿಳಿಯಲು ಪೂರ್ತಿ ಸಿನಿಮಾ ನೋಡಬೇಕು.

‘ದೃಶ್ಯಂ 2’ ಚಿತ್ರದಲ್ಲಿ ಬರುವ ಟ್ವಿಸ್ಟ್​ಗಳನ್ನು ನೋಡಿ ಪ್ರೇಕ್ಷಕರು ಎಂಜಾಯ್​ ಮಾಡುತ್ತಿದ್ದಾರೆ. ಉತ್ತರ ಭಾರತದ ಮಂದಿಗೆ ಈ ಸಿನಿಮಾ ಇಷ್ಟ ಆಗುತ್ತಿದೆ. ಆದರೆ ಬಹುತೇಕರು ಈ ಚಿತ್ರವನ್ನು ಒಟಿಟಿ ಮೂಲಕ ಮಲಯಾಳಂನಲ್ಲಿ ನೋಡಿದ್ದಾರೆ. ಅದರಿಂದ ಬಾಕ್ಸ್​ ಆಫೀಸ್​ನಲ್ಲಿ ಹಿಂದಿ ರಿಮೇಕ್​ಗೆ ತುಂಬ ಉತ್ತಮವಾದ ಕಲೆಕ್ಷನ್ ಆಗುತ್ತೋ ಇಲ್ಲವೋ ಎಂಬ ಅನುಮಾನ ಇದೆ. ಉತ್ತಮ ವಿಮರ್ಶೆ ಸಿಕ್ಕಿದೆಯಾದರೂ ಮುಂದಿನ ದಿನಗಳಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕು.

ಮೊದಲ ಪಾರ್ಟ್​ ಮತ್ತು ಎರಡನೇ ಪಾರ್ಟ್​ ನಡುವೆ ಕಥೆ ಚೆನ್ನಾಗಿ ಸಿಂಕ್​ ಆಗಿದೆ. ಅದು ಎಲ್ಲರಿಗೂ ಹೆಚ್ಚು ಥ್ರಿಲ್​ ನೀಡುತ್ತಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಚಿತ್ರವನ್ನು ಬಯಸುವವರಿಗೆ ಇದು ಹೇಳಿ ಮಾಡಿಸಿದ ಸಿನಿಮಾ ಎಂದು ಸಿನಿಪ್ರಿಯರು ಅಭಿಪ್ರಾಯ ಪಟ್ಟಿದ್ದಾರೆ. ಪೈಸಾ ವಸೂಲ್​ ಮೂವೀ ಎಂದು ಅಜಯ್​ ದೇವಗನ್​ ಫ್ಯಾನ್ಸ್​ ಹೊಗಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:29 pm, Fri, 18 November 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?