AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು

HanuMan Twitter Review: ‘ಹನುಮಾನ್’ ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು
ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 12:00 PM

Share

ಭಾರತದಲ್ಲಿ ಸೂಪರ್ ಹೀರೋ ರೀತಿಯ ಕಾನ್ಸೆಪ್ಟ್ ಚಿತ್ರಗಳು ಕಡಿಮೆ. ಈಗ ತೇಜ ಸಜ್ಜಾ ಅವರು ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಿದ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜನವರಿ 12) ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್​ಎಕ್ಸ್ ಹಾಗೂ ಚಿತ್ರದ ಕ್ಲೈಮ್ಯಾಕ್ಸ್​ನ ಜನರು ಇಷ್ಟಪಟ್ಟಿದ್ದಾರೆ. ತೇಜ ಸಜ್ಜಾ (Taja Sajja) ಅವರ ನಟನೆಯನ್ನು ಕೂಡ ಜನರು ಹೊಗಳಿದ್ದಾರೆ.  ಹೀಗಾಗಿ ಮೊದಲ ದಿನ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

‘ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ, ವರಲಕ್ಷ್ಮೀ ಶರತ್​ಕುಮಾರ್, ಅಮೃತಾ ಅಯ್ಯರ್, ವಿನಯ್ ರಾಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ವರ್ಮ ನಿರ್ದೇಶನ ಮಾಡಿದ್ದಾರೆ. ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಮೊದಲಾರ್ಧ ಉತ್ತಮವಾಗಿದೆ. ಸಿನಿಮಾ ಅನುಭವ ಬೇರೆಯದೇ ಲೆವೆಲ್​ನಲ್ಲಿ ಸಿಗುತ್ತದೆ. ವಿಎಫ್​ಎಕ್ಸ್, ಬಿಜಿಎಂ ಗೂಸ್​ಬಂಪ್ಸ್ ಸಿಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ವರ್ಷದ ಸಿನಿಮಾ. ಈ ಚಿತ್ರವನ್ನು ಇಷ್ಟಪಟ್ಟೆ. ಕ್ಲೈಮ್ಯಾಕ್ಸ್ ನಿಮ್ಮನ್ನು ಕಾಡುತ್ತದೆ. ಲವ್​ ಯೂ ಹನುಮಾನ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿದ್ದೆ ಬಂತು’; ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಹನುಮಂತು (ತೇಜ) ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಸಹೋದರಿ (ವರಲಕ್ಷ್ಮಿ) ಜೊತೆ ವಾಸವಾಗಿರುತ್ತಾನೆ. ಅಂಜನಾದ್ರಿ ಎನ್ನುವ ಕಾಲ್ಪನಿಕ ಊರಲ್ಲಿ ಕಥೆ ನಡೆಯುತ್ತದೆ. ಆ ಊರಲ್ಲಿ ಹನುಮಂತನ ದೊಡ್ಡದಾದ ಮೂರ್ತಿ ಇರುತ್ತದೆ. ಆ ಬಳಿಕ ಹನುಮಂತುಗೆ ದೇವ ಹನುಮಾನ್​ ಆಶೀರ್ವಾದ ಸಿಗುತ್ತದೆ. ನಂತರ ಏನೆಲ್ಲ ಆಗುತ್ತದೆ ಅನ್ನೋದು ಸಿನಿಮಾದ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 12 January 24

Follow Us
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ