AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು

HanuMan Twitter Review: ‘ಹನುಮಾನ್’ ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು
ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 12:00 PM

Share

ಭಾರತದಲ್ಲಿ ಸೂಪರ್ ಹೀರೋ ರೀತಿಯ ಕಾನ್ಸೆಪ್ಟ್ ಚಿತ್ರಗಳು ಕಡಿಮೆ. ಈಗ ತೇಜ ಸಜ್ಜಾ ಅವರು ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಿದ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜನವರಿ 12) ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್​ಎಕ್ಸ್ ಹಾಗೂ ಚಿತ್ರದ ಕ್ಲೈಮ್ಯಾಕ್ಸ್​ನ ಜನರು ಇಷ್ಟಪಟ್ಟಿದ್ದಾರೆ. ತೇಜ ಸಜ್ಜಾ (Taja Sajja) ಅವರ ನಟನೆಯನ್ನು ಕೂಡ ಜನರು ಹೊಗಳಿದ್ದಾರೆ.  ಹೀಗಾಗಿ ಮೊದಲ ದಿನ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

‘ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ, ವರಲಕ್ಷ್ಮೀ ಶರತ್​ಕುಮಾರ್, ಅಮೃತಾ ಅಯ್ಯರ್, ವಿನಯ್ ರಾಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ವರ್ಮ ನಿರ್ದೇಶನ ಮಾಡಿದ್ದಾರೆ. ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಮೊದಲಾರ್ಧ ಉತ್ತಮವಾಗಿದೆ. ಸಿನಿಮಾ ಅನುಭವ ಬೇರೆಯದೇ ಲೆವೆಲ್​ನಲ್ಲಿ ಸಿಗುತ್ತದೆ. ವಿಎಫ್​ಎಕ್ಸ್, ಬಿಜಿಎಂ ಗೂಸ್​ಬಂಪ್ಸ್ ಸಿಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ವರ್ಷದ ಸಿನಿಮಾ. ಈ ಚಿತ್ರವನ್ನು ಇಷ್ಟಪಟ್ಟೆ. ಕ್ಲೈಮ್ಯಾಕ್ಸ್ ನಿಮ್ಮನ್ನು ಕಾಡುತ್ತದೆ. ಲವ್​ ಯೂ ಹನುಮಾನ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿದ್ದೆ ಬಂತು’; ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಹನುಮಂತು (ತೇಜ) ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಸಹೋದರಿ (ವರಲಕ್ಷ್ಮಿ) ಜೊತೆ ವಾಸವಾಗಿರುತ್ತಾನೆ. ಅಂಜನಾದ್ರಿ ಎನ್ನುವ ಕಾಲ್ಪನಿಕ ಊರಲ್ಲಿ ಕಥೆ ನಡೆಯುತ್ತದೆ. ಆ ಊರಲ್ಲಿ ಹನುಮಂತನ ದೊಡ್ಡದಾದ ಮೂರ್ತಿ ಇರುತ್ತದೆ. ಆ ಬಳಿಕ ಹನುಮಂತುಗೆ ದೇವ ಹನುಮಾನ್​ ಆಶೀರ್ವಾದ ಸಿಗುತ್ತದೆ. ನಂತರ ಏನೆಲ್ಲ ಆಗುತ್ತದೆ ಅನ್ನೋದು ಸಿನಿಮಾದ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 12 January 24

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು