AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು

HanuMan Twitter Review: ‘ಹನುಮಾನ್’ ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು
ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 12:00 PM

Share

ಭಾರತದಲ್ಲಿ ಸೂಪರ್ ಹೀರೋ ರೀತಿಯ ಕಾನ್ಸೆಪ್ಟ್ ಚಿತ್ರಗಳು ಕಡಿಮೆ. ಈಗ ತೇಜ ಸಜ್ಜಾ ಅವರು ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಿದ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜನವರಿ 12) ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್​ಎಕ್ಸ್ ಹಾಗೂ ಚಿತ್ರದ ಕ್ಲೈಮ್ಯಾಕ್ಸ್​ನ ಜನರು ಇಷ್ಟಪಟ್ಟಿದ್ದಾರೆ. ತೇಜ ಸಜ್ಜಾ (Taja Sajja) ಅವರ ನಟನೆಯನ್ನು ಕೂಡ ಜನರು ಹೊಗಳಿದ್ದಾರೆ.  ಹೀಗಾಗಿ ಮೊದಲ ದಿನ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

‘ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ, ವರಲಕ್ಷ್ಮೀ ಶರತ್​ಕುಮಾರ್, ಅಮೃತಾ ಅಯ್ಯರ್, ವಿನಯ್ ರಾಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ವರ್ಮ ನಿರ್ದೇಶನ ಮಾಡಿದ್ದಾರೆ. ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಮೊದಲಾರ್ಧ ಉತ್ತಮವಾಗಿದೆ. ಸಿನಿಮಾ ಅನುಭವ ಬೇರೆಯದೇ ಲೆವೆಲ್​ನಲ್ಲಿ ಸಿಗುತ್ತದೆ. ವಿಎಫ್​ಎಕ್ಸ್, ಬಿಜಿಎಂ ಗೂಸ್​ಬಂಪ್ಸ್ ಸಿಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ವರ್ಷದ ಸಿನಿಮಾ. ಈ ಚಿತ್ರವನ್ನು ಇಷ್ಟಪಟ್ಟೆ. ಕ್ಲೈಮ್ಯಾಕ್ಸ್ ನಿಮ್ಮನ್ನು ಕಾಡುತ್ತದೆ. ಲವ್​ ಯೂ ಹನುಮಾನ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿದ್ದೆ ಬಂತು’; ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಹನುಮಂತು (ತೇಜ) ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಸಹೋದರಿ (ವರಲಕ್ಷ್ಮಿ) ಜೊತೆ ವಾಸವಾಗಿರುತ್ತಾನೆ. ಅಂಜನಾದ್ರಿ ಎನ್ನುವ ಕಾಲ್ಪನಿಕ ಊರಲ್ಲಿ ಕಥೆ ನಡೆಯುತ್ತದೆ. ಆ ಊರಲ್ಲಿ ಹನುಮಂತನ ದೊಡ್ಡದಾದ ಮೂರ್ತಿ ಇರುತ್ತದೆ. ಆ ಬಳಿಕ ಹನುಮಂತುಗೆ ದೇವ ಹನುಮಾನ್​ ಆಶೀರ್ವಾದ ಸಿಗುತ್ತದೆ. ನಂತರ ಏನೆಲ್ಲ ಆಗುತ್ತದೆ ಅನ್ನೋದು ಸಿನಿಮಾದ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 12 January 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ