AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು

HanuMan Twitter Review: ‘ಹನುಮಾನ್’ ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಬ್ಲಾಕ್​ಬಸ್ಟರ್​’ ಪಕ್ಕಾ; ‘ಹನುಮಾನ್’ ನೋಡಿ ವಿಮರ್ಶೆ ತಿಳಿಸಿದ ಅಭಿಮಾನಿಗಳು
ಹನುಮಾನ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 12:00 PM

Share

ಭಾರತದಲ್ಲಿ ಸೂಪರ್ ಹೀರೋ ರೀತಿಯ ಕಾನ್ಸೆಪ್ಟ್ ಚಿತ್ರಗಳು ಕಡಿಮೆ. ಈಗ ತೇಜ ಸಜ್ಜಾ ಅವರು ಹನುಮಂತನ ಸ್ಫೂರ್ತಿಯಾಗಿಟ್ಟುಕೊಂಡು ಮಾಡಿದ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇಂದು (ಜನವರಿ 12) ರಿಲೀಸ್ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್​ಎಕ್ಸ್ ಹಾಗೂ ಚಿತ್ರದ ಕ್ಲೈಮ್ಯಾಕ್ಸ್​ನ ಜನರು ಇಷ್ಟಪಟ್ಟಿದ್ದಾರೆ. ತೇಜ ಸಜ್ಜಾ (Taja Sajja) ಅವರ ನಟನೆಯನ್ನು ಕೂಡ ಜನರು ಹೊಗಳಿದ್ದಾರೆ.  ಹೀಗಾಗಿ ಮೊದಲ ದಿನ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

‘ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ, ವರಲಕ್ಷ್ಮೀ ಶರತ್​ಕುಮಾರ್, ಅಮೃತಾ ಅಯ್ಯರ್, ವಿನಯ್ ರಾಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಪ್ರಶಾಂತ್ ವರ್ಮ ನಿರ್ದೇಶನ ಮಾಡಿದ್ದಾರೆ. ಇದು ಸೂಪರ್ ಹೀರೋ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಹನುಮನಂತನ ಆಶೀರ್ವಾದ ಇರುವ ಕಥಾ ನಾಯಕನ ಹೋರಾಟದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

‘ಮೊದಲಾರ್ಧ ಉತ್ತಮವಾಗಿದೆ. ಸಿನಿಮಾ ಅನುಭವ ಬೇರೆಯದೇ ಲೆವೆಲ್​ನಲ್ಲಿ ಸಿಗುತ್ತದೆ. ವಿಎಫ್​ಎಕ್ಸ್, ಬಿಜಿಎಂ ಗೂಸ್​ಬಂಪ್ಸ್ ಸಿಗುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ವರ್ಷದ ಸಿನಿಮಾ. ಈ ಚಿತ್ರವನ್ನು ಇಷ್ಟಪಟ್ಟೆ. ಕ್ಲೈಮ್ಯಾಕ್ಸ್ ನಿಮ್ಮನ್ನು ಕಾಡುತ್ತದೆ. ಲವ್​ ಯೂ ಹನುಮಾನ್’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿದ್ದೆ ಬಂತು’; ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಹನುಮಂತು (ತೇಜ) ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಸಹೋದರಿ (ವರಲಕ್ಷ್ಮಿ) ಜೊತೆ ವಾಸವಾಗಿರುತ್ತಾನೆ. ಅಂಜನಾದ್ರಿ ಎನ್ನುವ ಕಾಲ್ಪನಿಕ ಊರಲ್ಲಿ ಕಥೆ ನಡೆಯುತ್ತದೆ. ಆ ಊರಲ್ಲಿ ಹನುಮಂತನ ದೊಡ್ಡದಾದ ಮೂರ್ತಿ ಇರುತ್ತದೆ. ಆ ಬಳಿಕ ಹನುಮಂತುಗೆ ದೇವ ಹನುಮಾನ್​ ಆಶೀರ್ವಾದ ಸಿಗುತ್ತದೆ. ನಂತರ ಏನೆಲ್ಲ ಆಗುತ್ತದೆ ಅನ್ನೋದು ಸಿನಿಮಾದ ಕಥೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 12 January 24

Follow Us
CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​
CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!