AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್

ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ವಿಮರ್ಶಕರ ವಲಯದಲ್ಲಿ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.

ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್
ರಣವೀರ್
TV9 Web
| Edited By: |

Updated on: May 13, 2022 | 3:59 PM

Share

ಬಾಲಿವುಡ್​ನಲ್ಲಿ (Bollywood) ಸೋಲಿನ ಸರಣಿ ಮುಂದುವರಿದಿದೆ. ಕೊರೊನಾ ಮೂರನೆ ಅಲೆ ಬಳಿಕ ‘ಸೂರ್ಯವಂಶಿ’ ಹಾಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಹೊರತುಪಡಿಸಿ ಮತ್ತಾವ ಬಾಲಿವುಡ್​ ಚಿತ್ರಗಳ ಬಳಿಯೂ ಗೆಲ್ಲಲು ಸಾಧ್ಯವಾಗಿಲ್ಲ. ‘ಕೆಜಿಎಫ್ 2’ ಬಳಿಕ ತೆರೆಗೆ ಬಂದ ಎಲ್ಲಾ ಬಾಲಿವುಡ್ ಸಿನಿಮಾಗಳು ಸೋತಿವೆ. ಇಂದು (ಮೇ 13) ತೆರೆಗೆ ಬಂದ ರಣವೀರ್ ಸಿಂಗ್ (Ranveer Singh) ನಟನೆಯ ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ (Jayeshbhai Jordaar ) ಕೂಡ ನೆಲಕಚ್ಚುವ ಸೂಚನೆ ಸಿಕ್ಕಿದೆ. ವಿಮರ್ಶಕರು ಹಾಗೂ ಸಿನಿಪ್ರಿಯರಿಂದ ಸಿನಿಮಾಗೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಕೆಲವರು ಈ ಚಿತ್ರವನ್ನು ಡಿಸಾಸ್ಟರ್ ಎಂದು ಬಣ್ಣಿಸಿದರೆ ಇನ್ನೂ ಕೆಲವರು ತಲೆನೋವು ಭರಿಸುವ ಚಿತ್ರ ಎಂದು ಕರೆದಿದ್ದಾರೆ.

ಈ ಮೊದಲು ಹೀರೋ ಆಗಿ ಗುರುತಿಸಿಕೊಂಡಿದ್ದ ದಿವ್ಯಾಂಗ್​ ಠಕ್ಕರ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ಸಿನಿಮಾ ನೋಡಿದ ಬಹುತೇಕರು ನೆಗೆಟಿವ್ ವಿಮರ್ಶೆ ನೀಡುತ್ತಿದ್ದಾರೆ. ‘ಬೇಸರ-ತಲೆನೋವು ತರಿಸುವ ಸಿನಿಮಾ. ಇದೊಂದು ಡಿಸಾಸ್ಟರ್​’ ಎಂದು ಶಿವ ಸತ್ಯಮ್ ಎಂಬುವವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ
Image
‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ವಿಮರ್ಶಕರ ವಲಯದಲ್ಲೂ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ಬಣ್ಣಿಸಿದ್ದು ‘ಕಳಪೆ’ ಎಂದು ಕರೆದಿದ್ದಾರೆ. ವಿಮರ್ಶಕ ರೋಹಿತ್ ಜೈಸ್ವಾಲ್ ಐದಕ್ಕೆ ಒಂದು ಸ್ಟಾರ್ ನೀಡಿದ್ದಾರೆ.

‘ಅರ್ಜುನ್​ ರೆಡ್ಡಿ’ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡ ಶಾಲಿನಿ ಪಾಂಡೆ ಸತತ ಸೋಲು ಕಂಡರು. ಈ ಸೋಲಿನ ಸರಣಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆದಂತೆ ಆಗಿದೆ. ರಣವೀರ್ ನಟನೆಯ ‘83’ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲಿಲ್ಲ. ಈಗ ಈ ಸಿನಿಮಾದಿಂದ ರಣವೀರ್ ಸೋಲು ಉಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು