AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್

ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ವಿಮರ್ಶಕರ ವಲಯದಲ್ಲಿ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.

ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್
ರಣವೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 13, 2022 | 3:59 PM

Share

ಬಾಲಿವುಡ್​ನಲ್ಲಿ (Bollywood) ಸೋಲಿನ ಸರಣಿ ಮುಂದುವರಿದಿದೆ. ಕೊರೊನಾ ಮೂರನೆ ಅಲೆ ಬಳಿಕ ‘ಸೂರ್ಯವಂಶಿ’ ಹಾಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಹೊರತುಪಡಿಸಿ ಮತ್ತಾವ ಬಾಲಿವುಡ್​ ಚಿತ್ರಗಳ ಬಳಿಯೂ ಗೆಲ್ಲಲು ಸಾಧ್ಯವಾಗಿಲ್ಲ. ‘ಕೆಜಿಎಫ್ 2’ ಬಳಿಕ ತೆರೆಗೆ ಬಂದ ಎಲ್ಲಾ ಬಾಲಿವುಡ್ ಸಿನಿಮಾಗಳು ಸೋತಿವೆ. ಇಂದು (ಮೇ 13) ತೆರೆಗೆ ಬಂದ ರಣವೀರ್ ಸಿಂಗ್ (Ranveer Singh) ನಟನೆಯ ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ (Jayeshbhai Jordaar ) ಕೂಡ ನೆಲಕಚ್ಚುವ ಸೂಚನೆ ಸಿಕ್ಕಿದೆ. ವಿಮರ್ಶಕರು ಹಾಗೂ ಸಿನಿಪ್ರಿಯರಿಂದ ಸಿನಿಮಾಗೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಕೆಲವರು ಈ ಚಿತ್ರವನ್ನು ಡಿಸಾಸ್ಟರ್ ಎಂದು ಬಣ್ಣಿಸಿದರೆ ಇನ್ನೂ ಕೆಲವರು ತಲೆನೋವು ಭರಿಸುವ ಚಿತ್ರ ಎಂದು ಕರೆದಿದ್ದಾರೆ.

ಈ ಮೊದಲು ಹೀರೋ ಆಗಿ ಗುರುತಿಸಿಕೊಂಡಿದ್ದ ದಿವ್ಯಾಂಗ್​ ಠಕ್ಕರ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ಸಿನಿಮಾ ನೋಡಿದ ಬಹುತೇಕರು ನೆಗೆಟಿವ್ ವಿಮರ್ಶೆ ನೀಡುತ್ತಿದ್ದಾರೆ. ‘ಬೇಸರ-ತಲೆನೋವು ತರಿಸುವ ಸಿನಿಮಾ. ಇದೊಂದು ಡಿಸಾಸ್ಟರ್​’ ಎಂದು ಶಿವ ಸತ್ಯಮ್ ಎಂಬುವವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ
Image
‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ವಿಮರ್ಶಕರ ವಲಯದಲ್ಲೂ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ಬಣ್ಣಿಸಿದ್ದು ‘ಕಳಪೆ’ ಎಂದು ಕರೆದಿದ್ದಾರೆ. ವಿಮರ್ಶಕ ರೋಹಿತ್ ಜೈಸ್ವಾಲ್ ಐದಕ್ಕೆ ಒಂದು ಸ್ಟಾರ್ ನೀಡಿದ್ದಾರೆ.

‘ಅರ್ಜುನ್​ ರೆಡ್ಡಿ’ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡ ಶಾಲಿನಿ ಪಾಂಡೆ ಸತತ ಸೋಲು ಕಂಡರು. ಈ ಸೋಲಿನ ಸರಣಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆದಂತೆ ಆಗಿದೆ. ರಣವೀರ್ ನಟನೆಯ ‘83’ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲಿಲ್ಲ. ಈಗ ಈ ಸಿನಿಮಾದಿಂದ ರಣವೀರ್ ಸೋಲು ಉಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ