ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್

ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ವಿಮರ್ಶಕರ ವಲಯದಲ್ಲಿ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.

ಬಾಲಿವುಡ್​ನಲ್ಲಿ ಮುಂದುವರಿದ ಸೋಲಿನ ಸರಣಿ; ರಣವೀರ್ ಸಿಂಗ್ ಚಿತ್ರಕ್ಕೆ ‘ಡಿಸಾಸ್ಟರ್​’ ಎಂದ ಫ್ಯಾನ್ಸ್
ರಣವೀರ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 13, 2022 | 3:59 PM

ಬಾಲಿವುಡ್​ನಲ್ಲಿ (Bollywood) ಸೋಲಿನ ಸರಣಿ ಮುಂದುವರಿದಿದೆ. ಕೊರೊನಾ ಮೂರನೆ ಅಲೆ ಬಳಿಕ ‘ಸೂರ್ಯವಂಶಿ’ ಹಾಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಹೊರತುಪಡಿಸಿ ಮತ್ತಾವ ಬಾಲಿವುಡ್​ ಚಿತ್ರಗಳ ಬಳಿಯೂ ಗೆಲ್ಲಲು ಸಾಧ್ಯವಾಗಿಲ್ಲ. ‘ಕೆಜಿಎಫ್ 2’ ಬಳಿಕ ತೆರೆಗೆ ಬಂದ ಎಲ್ಲಾ ಬಾಲಿವುಡ್ ಸಿನಿಮಾಗಳು ಸೋತಿವೆ. ಇಂದು (ಮೇ 13) ತೆರೆಗೆ ಬಂದ ರಣವೀರ್ ಸಿಂಗ್ (Ranveer Singh) ನಟನೆಯ ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ (Jayeshbhai Jordaar ) ಕೂಡ ನೆಲಕಚ್ಚುವ ಸೂಚನೆ ಸಿಕ್ಕಿದೆ. ವಿಮರ್ಶಕರು ಹಾಗೂ ಸಿನಿಪ್ರಿಯರಿಂದ ಸಿನಿಮಾಗೆ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಕೆಲವರು ಈ ಚಿತ್ರವನ್ನು ಡಿಸಾಸ್ಟರ್ ಎಂದು ಬಣ್ಣಿಸಿದರೆ ಇನ್ನೂ ಕೆಲವರು ತಲೆನೋವು ಭರಿಸುವ ಚಿತ್ರ ಎಂದು ಕರೆದಿದ್ದಾರೆ.

ಈ ಮೊದಲು ಹೀರೋ ಆಗಿ ಗುರುತಿಸಿಕೊಂಡಿದ್ದ ದಿವ್ಯಾಂಗ್​ ಠಕ್ಕರ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್​ಗೆ ನಾಯಕಿ ಆಗಿ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ನಟಿಸಿದ್ದಾರೆ. ಈ ಸಿನಿಮಾ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ಸಿನಿಮಾ ನೋಡಿದ ಬಹುತೇಕರು ನೆಗೆಟಿವ್ ವಿಮರ್ಶೆ ನೀಡುತ್ತಿದ್ದಾರೆ. ‘ಬೇಸರ-ತಲೆನೋವು ತರಿಸುವ ಸಿನಿಮಾ. ಇದೊಂದು ಡಿಸಾಸ್ಟರ್​’ ಎಂದು ಶಿವ ಸತ್ಯಮ್ ಎಂಬುವವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
‘ನಿಜಕ್ಕೂ ಸಿನಿಮಾ ಬಿಸ್ನೆಸ್ ಬಗ್ಗೆ ಗೊತ್ತಿಲ್ಲ’; ದಕ್ಷಿಣದ ಸಿನಿಮಾಗಳ ಕಲೆಕ್ಷನ್​ ಬಗ್ಗೆ ರಣವೀರ್ ಸಿಂಗ್ ಮಾತು
Image
ನಟಿ ಆಗ್ಬೇಕು ಅಂತ ಮನೆ ಬಿಟ್ಟು ಓಡಿಬಂದಿದ್ದ ಯುವತಿ: ಇಂದು ಏನಾಗಿದ್ದಾರೆ ನೋಡಿ; ಇದು ಶಾಲಿನಿ ಸಿನಿಜರ್ನಿ
Image
‘ನನಗೆ ಎಲ್ಲವೂ ಗೊತ್ತಿದೆ’ ಎಂದು ಮೆರೆಯುತ್ತಿದ್ದ ರಣವೀರ್​ ಸಿಂಗ್​; ನಟನ ಸೊಕ್ಕು ಮುರಿದ ನಿರ್ದೇಶಕ
Image
‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ವಿಮರ್ಶಕರ ವಲಯದಲ್ಲೂ ಚಿತ್ರಕ್ಕೆ ಋಣಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ‘ಜಯೇಶ್ ಭಾಯ್ ಜೋರ್ದಾರ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ಬಣ್ಣಿಸಿದ್ದು ‘ಕಳಪೆ’ ಎಂದು ಕರೆದಿದ್ದಾರೆ. ವಿಮರ್ಶಕ ರೋಹಿತ್ ಜೈಸ್ವಾಲ್ ಐದಕ್ಕೆ ಒಂದು ಸ್ಟಾರ್ ನೀಡಿದ್ದಾರೆ.

‘ಅರ್ಜುನ್​ ರೆಡ್ಡಿ’ ಸಿನಿಮಾದಿಂದ ಖ್ಯಾತಿ ಹೆಚ್ಚಿಸಿಕೊಂಡ ಶಾಲಿನಿ ಪಾಂಡೆ ಸತತ ಸೋಲು ಕಂಡರು. ಈ ಸೋಲಿನ ಸರಣಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆದಂತೆ ಆಗಿದೆ. ರಣವೀರ್ ನಟನೆಯ ‘83’ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲಿಲ್ಲ. ಈಗ ಈ ಸಿನಿಮಾದಿಂದ ರಣವೀರ್ ಸೋಲು ಉಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ