AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

KGF 2 Twitter Review: ಪ್ರೇಕ್ಷಕರು ‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅನಿಸಿಕೆ ತಿಳಿಸುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಹಾಗೂ ನಟ ಯಶ್​ ಕಾಂಬಿನೇಷನ್​ಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ
ಕೆಜಿಎಫ್​: ಚಾಪ್ಟರ್​ 2
Follow us
TV9 Web
| Updated By: ಮದನ್​ ಕುಮಾರ್​

Updated on: Apr 14, 2022 | 8:02 AM

ಬಹುಕಾಲದ ಕಾಯುವಿಕೆಗೆ ಫುಲ್​ಸ್ಟಾಪ್​ ಬಿದ್ದಿದೆ. ಸಿನಿಪ್ರಿಯರು ಭಾರಿ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ತೆರೆಗೆ ಬಂದಿದೆ. ಮೊದಲ ದಿನ, ಮೊದಲ ಶೋ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ಚಿತ್ರಮಂದಿರಕ್ಕೆ ಮುಗಿಬಿದ್ದಿದ್ದಾರೆ. ಕಷ್ಟಪಟ್ಟು ಫಸ್ಟ್​ ಶೋ ಟಿಕೆಟ್​ ಗಿಟ್ಟಿಸಿಕೊಂಡು ಸಿನಿಮಾ ನೋಡಿದ್ದಾರೆ. ದೇಶಾದ್ಯಂತ ‘ಕೆಜಿಎಫ್​ 2’ ಧೂಳೆಬ್ಬಿಸುತ್ತಿದೆ. ಮಧ್ಯರಾತ್ರಿಯೇ ಪ್ರೇಕ್ಷಕರು ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಆ ಮೂಲಕ ದೊಡ್ಡ ಓಪನಿಂಗ್​ ನೀಡಿದ್ದಾರೆ. ಯಶ್​ (Yash) ವೃತ್ತಿಜೀವನಕ್ಕೆ ಮತ್ತೊಂದು ದೊಡ್ಡ ಗೆಲುವು ಖಚಿತ ಎನ್ನುತ್ತಿದ್ದಾರೆ ಪ್ರೇಕ್ಷಕರು. ಹಾಗಾದರೆ ಈ ಸಿನಿಮಾ ಹೇಗೆ ಮೂಡಿಬಂದಿದೆ? ‘ಕೆಜಿಎಫ್​: ಚಾಪ್ಟರ್​​ 2’ ಚಿತ್ರಕ್ಕೆ ಟ್ವಿಟರ್​ನಲ್ಲಿ ಯಾವ ರೀತಿ ವಿಮರ್ಶೆ (KGF Chapter 2 Twitter Review) ಸಿಗುತ್ತಿದೆ? ಮಧ್ಯರಾತ್ರಿ ಸಿನಿಮಾ ನೋಡಿ ಹೊರಬಂದವರು ನಿರ್ದೇಶಕ ಪ್ರಶಾಂತ್​ ನೀಲ್​ ಬಗ್ಗೆ ಏನು ಹೇಳ್ತಾ ಇದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ಕನ್ನಡ ಚಿತ್ರರಂಗವನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ದಿದೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ. ವಿಶ್ವಾದ್ಯಂತ 10 ಸಾವಿರಕ್ಕೂ ಅಧಿಕ ಪರದೆಯಲ್ಲಿ ಈ ಚಿತ್ರವನ್ನು ತೆರೆಕಾಣಿಸಲಾಗಿದೆ. ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಫಸ್ಟ್​ ಶೋ ನೋಡಿ ಬಂದಿರುವ ಅಭಿಮಾನಿಗಳು ಈ ಸಿನಿಮಾಗೆ ಉಘೇ ಉಘೇ ಎನ್ನುತ್ತಿದ್ದಾರೆ. ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

‘ಇದು ಅತ್ಯುತ್ತಮ ಸಿನಿಮಾ. ಇಂಟರ್​ವಲ್​ ತನಕ ರಾಕಿ ಭಾಯ್​ ಮತ್ತು ಸಂಜಯ್​ ದತ್​ ಎಲ್ಲರ ಹೃದಯ ಗೆಲ್ಲುತ್ತಾರೆ. 5ಕ್ಕೆ 5 ಸ್ಟಾರ್​ ನೀಡುತ್ತೇನೆ. ಇದು ನನ್ನ ಪ್ರಾಮಾಣಿಕ ವಿಮರ್ಶೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಅನೇಕ ಪ್ರೇಕ್ಷಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಕೆಲವು ಸಿನಿಮಾಗಳಲ್ಲಿ ತಾಯಿ ಸೆಂಟಿಮೆಂಟ್​ ದೃಶ್ಯಗಳು ಬೋರಿಂಗ್​ ಎನಿಸುತ್ತವೆ. ಆದರೆ ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ತುಂಬ ಪರಿಣಾಮಕಾರಿಯಾಗಿ ಮೂಡಿಬಂದಿವೆ. ಇಂಟರ್​ವಲ್​ ದೃಶ್ಯ ಸಖತ್​ ರಾ ಆಗಿದೆ’ ಎಂದು ನೆಟ್ಟಿಗರೊಬ್ಬರು ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎಲ್ಲ ದೃಶ್ಯಗಳನ್ನೂ ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಯಶ್​ ಎನರ್ಜಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಕ್ಲೈಮ್ಯಾಕ್ಸ್​ ಕಂಡು ಜನರು ವಾವ್​ ಎನ್ನುತ್ತಿದ್ದಾರೆ. ಹಿನ್ನೆಲೆ ಸಂಗೀತವೂ ಪ್ರೇಕ್ಷಕರನ್ನು ಆಕರ್ಷಿಸಿದೆ. ಪ್ರಶಾಂತ್​ ನೀಲ್​ ಅವರ ಕೆಲಸಕ್ಕೆ ನೋಡುಗರಿಂದ ಮೆಚ್ಚುಗೆ ಸಿಕ್ಕಿದೆ. ಕೆಲವು ದೃಶ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬಹುದಿತ್ತು ಎಂಬ ಅಭಿಪ್ರಾಯ ಕೂಡ ಕೇಳಿಬಂದಿದೆ.

ಒಟ್ಟಿನಲ್ಲಿ ಈ ಸಿನಿಮಾ ಭರ್ಜರಿ ಓಪನಿಂಗ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಎಲ್ಲ ಭಾಷೆಯಲ್ಲೂ ಜನರು ಈ ಚಿತ್ರಕ್ಕೆ ಉತ್ತಮ ವಿಮರ್ಶೆಗಳನ್ನು ನೀಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಆ ಮೂಲಕ ಕನ್ನಡದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಕಮಾಲ್​ ಮಾಡುತ್ತಿದೆ.

ಇದನ್ನೂ ಓದಿ:

KGF Chapter 2 First Half Review: ಹೇಗಿದೆ ‘ಕೆಜಿಎಫ್​ ಚಾಪ್ಟರ್​ 2’ ಮೊದಲಾರ್ಧ​? ಅಬ್ಬರಿಸಿದ ಯಶ್

ಪುಣೆಯಲ್ಲಿ ‘ಕೆಜಿಎಫ್​ 2’ ಟಿಕೆಟ್​ ಸಿಗದೇ ವಿಮಾನ ಹತ್ತಿ ಬೆಂಗಳೂರಿಗೆ ಬಂದ ಲೇಡಿ ಫ್ಯಾನ್ಸ್​​: ಆಹಾ ಅಭಿಮಾನ

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ