AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​

Vikrant Rona Kichcha Sudeep: ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ‘ವಿಕ್ರಾಂತ್​ ರೋಣ’ ಚಿತ್ರದ ಬಗ್ಗೆ ವಿಮರ್ಶೆ ಹಂಚಿಕೊಂಡಿದ್ದಾರೆ. 3ಡಿ ಮತ್ತು 2ಡಿ ಅವತರಣಿಕೆಯಲ್ಲಿ ಈ ಸಿನಿಮಾ ಮೂಡಿಬಂದಿದೆ.

Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
ಕಿಚ್ಚ ಸುದೀಪ್
TV9 Web
| Edited By: |

Updated on:Jul 28, 2022 | 10:40 AM

Share

‘ರಂಗಿತರಂಗ’ ಮೂಲಕ ದೊಡ್ಡ ಹಿಟ್​ ಪಡೆದಿದ್ದ ನಿರ್ದೇಶಕ ಅನೂಪ್​ ಭಂಡಾರಿ ಅವರ ಬತ್ತಳಿಕೆಯಿಂದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಮೂಡಿಬಂದಿದೆ. ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳಿಗೆ ಈ ಸಿನಿಮಾ ಸಖತ್​ ಇಷ್ಟ ಆಗುತ್ತಿದೆ. ಮೊದಲ ದಿನವೇ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇದು 3ಡಿ ಚಿತ್ರ ಎಂಬ ಕಾರಣಕ್ಕೆ ಹೈಪ್​ ಹೆಚ್ಚಿದೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾದ ದೃಶ್ಯಗಳು 3ಡಿಯಲ್ಲಿ ಕಣ್ಮನ ಸೆಳೆಯುವಂತಿವೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಅನೇಕರು ಟ್ವಿಟರ್​ ಮೂಲಕ ವಿಮರ್ಶೆ (Vikrant Rona Twitter Review) ಹಂಚಿಕೊಳ್ಳುತ್ತಿದ್ದಾರೆ. ಕಿಚ್ಚ ಸುದೀಪ್​ ಮಾತ್ರವಲ್ಲದೇ ಚಿತ್ರತಂಡದ ಅನೇಕರಿಗೆ ಮೆಚ್ಚುಗೆ ಸಿಗುತ್ತಿದೆ.

ಭಾರತ ಮಾತ್ರವಲ್ಲದೇ ಅನೇಕ ದೇಶಗಳಲ್ಲಿ ‘ವಿಕ್ರಾಂತ್​ ರೋಣ’ ಬಿಡುಗಡೆ ಆಗಿದೆ. ದುಬೈನಲ್ಲಿ ಸಿನಿಮಾ ನೋಡಿದ ಅಭಿಮಾನಿಯೊಬ್ಬರು 5ಕ್ಕೆ 4.5 ಅಂಕ ನೀಡಿದ್ದಾರೆ. ಇದು ಸೂಪರ್​ ಸಿನಿಮಾ ಎಂದು ಟ್ವಿಟರ್​ನಲ್ಲಿ ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು ‘3ಡಿ ಹೇಗಿದೆ’ ಎಂದು ಕೇಳಿದ್ದಾರೆ. ‘ತುಂಬ ಚೆನ್ನಾಗಿದೆ. ನಿರ್ದೇಶಕ ಅನೂಪ್​ ಭಂಡಾರಿ ಸೆನ್ಸೇಷನ್​ ಸೃಷ್ಟಿ ಮಾಡಿದ್ದಾರೆ’ ಎಂದು ಅವರು ಉತ್ತರಿಸಿದ್ದಾರೆ.

ಇದನ್ನೂ ಓದಿ
Image
Vikrant Rona: ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ
Image
Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
Image
‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?

ಖಂಡಿತವಾಗಿಯೂ ‘ವಿಕ್ರಾಂತ್​ ರೋಣ’ ಅತ್ಯುತ್ತಮ ಕಲೆಕ್ಷನ್​ ಮಾಡಲಿದೆ ಎಂದು ಪ್ರೇಕ್ಷಕರೊಬ್ಬರು ಅನಿಸಿಕೆ ಹಂಚಿಕೊಂಡಿದ್ದಾರೆ. ‘ಭಾರತದಿಂದ ಬಂದ ದಿ ಬೆಸ್ಟ್​ 3ಡಿ ಸಿನಿಮಾ ಇದು. ಥ್ರಿಲ್​ ಮತ್ತು ಸಸ್ಪೆನ್ಸ್​ ಸೂಪರ್​ ಆಗಿದೆ. ಕನ್ನಡ ಚಿತ್ರರಂಗ ಬೇರೆ ಹಂತಕ್ಕೆ ಹೋಗಿದೆ. ಪಕ್ಕಾ ಪೈಸಾ ವಸೂಲ್​ ಸಿನಿಮಾ’ ಎಂದು ಟ್ವೀಟ್​ ಮಾಡಲಾಗಿದೆ.

‘ಇಂಟರೆಸ್ಟಿಂಗ್ ಆದ ಒಂದು ಕಥೆಯನ್ನು ಚೆನ್ನಾಗಿ ನಿರೂಪಿಸಲಾಗಿದೆ. ಸುದೀಪ್​ ತುಂಬ ಚೆನ್ನಾಗಿ ನಟಿಸಿದ್ದಾರೆ. ಕೆಲವು ದೃಶ್ಯಗಳನ್ನು ಕತ್ತರಿಸಬಹುದಿತ್ತು. ಆದರೂ ಕೂಡ ಇದು ಒಂದು ಉತ್ತಮ ಸಿನಿಮಾ’ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.

ಪರಭಾಷೆಯ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಶುಭ ಕೋರಿದ್ದಾರೆ. ರಾಜಮೌಳಿ, ಕಾರ್ತಿ ಮುಂತಾದವರು ಸುದೀಪ್​ಗೆ ವಿಶ್​ ಮಾಡಿದ್ದಾರೆ. ಮೊದಲ ದಿನ ಎಲ್ಲ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

Published On - 10:40 am, Thu, 28 July 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ