AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kothalavadi Movie Review: ‘ಕೊತ್ತಲವಾಡಿ’; ಅಪೂರ್ಣತೆಯ ಮಧ್ಯೆ ಹರಿಯುವ ಕಣ್ಣೀರ ಕೋಡಿ

Kothalavadi Movie Review: ‘ಕೊತ್ತಲವಾಡಿ’; ಅಪೂರ್ಣತೆಯ ಮಧ್ಯೆ ಹರಿಯುವ ಕಣ್ಣೀರ ಕೋಡಿ
ಕೊತ್ತಲವಾಡಿ
ಕೊತ್ತಲವಾಡಿ
UA
  • Time - 144 Minutes
  • Released - ಆಗಸ್ಟ್ 1, 2025
  • Language - ಕನ್ನಡ
  • Genre - Action, Drama
Cast - ಪೃಥ್ವಿ ಅಂಬರ್, ಕಾವ್ಯಾ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ ಮೊದಲಾದವರು.
Director - ಶ್ರೀರಾಜ್
3
Critic's Rating
ರಾಜೇಶ್ ದುಗ್ಗುಮನೆ
|

Updated on:Aug 01, 2025 | 12:07 PM

Share

ಯಶ್ ಅವರು ಸೂಪರ್ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಅವರು ತಮ್ಮದೇ ಆದ ನಿರ್ಮಾಣ ಸಂಸ್ಥೆ ಕೂಡ ಹೊಂದಿದ್ದಾರೆ. ಅವರ ತಂದೆ ಅರುಣ್ ಹಾಗೂ ತಾಯಿ ಪುಷ್ಪ ಕೂಡ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇವರು ನಿರ್ಮಾಣ ಮಾಡಿರೋ ಚೊಚ್ಚಲ ಸಿನಿಮಾ ‘ಕೊತ್ತಲವಾಡಿ’ ಇಂದು (ಆಗಸ್ಟ್ 1) ರಿಲೀಸ್ ಆಗಿದೆ. ಸಿನಿಮಾ ಹೇಗಿದೆ ಎಂಬುದರ ವಿಮರ್ಶೆ ಟಿವಿ9 ಕನ್ನಡ ಡಿಜಿಟಲ್​ನಲ್ಲಿ.

‘ಕೊತ್ತಲವಾಡಿ’ ಹೆಸರಿನ ಗ್ರಾಮ ಹಚ್ಚ ಹಸಿರಿನ ಮಧ್ಯೆ ಹುದುಗಿ ಹೋಗಿದೆ. ಇದರ ಸಮೀಪವೇ ಕಾವೇರಿ ನದಿ ಹಾದು ಹೋಗಿದೆ. ಆ ಹಳ್ಳಿಗೂ ನದಿಗೂ ಅವಿನಾಭಾವ ಸಂಬಂಧ. ಈ ಊರಿನಲ್ಲಿ ಗುಜುರಿ ಬಾಬು (ಗೋಪಾಲ್ ದೇಶಪಾಂಡೆ) ಗುಜುರಿ ಆಯ್ದುಕೊಂಡು ಜೀವನ ಮಾಡುತ್ತಿರುತ್ತಾನೆ. ಎಲ್ಲರೂ ಕಸದಿಂದ ರಸ ತೆಗೆದರೆ ಈತ ರಾಮರಸ ತೆಗೆಯುವಷ್ಟು ಚಾಲಾಕಿ. ಕಥಾ ನಾಯಕ ಮೋಹನ (ಪೃಥ್ವಿ ಅಂಬರ್) ಕೆಲಸಕ್ಕೆ ಜರನ್ನು ಒಟ್ಟು ಮಾಡಿ ಕಳಿಸೋ ಕಾಯಕ ಮಾಡುತ್ತಾನೆ. ಇಬ್ಬರ ಮಧ್ಯೆ ಅವಿನಾಭಾವ ಸಂಬಂಧ ಬೆರೆತಿರುತ್ತದೆ. ಈ ಊರಿಗೆ ಒಂದು ಸಮಸ್ಯೆ ಎದುರಾಗುತ್ತದೆ. ಎಲ್ಲರೂ ಕಣ್ಣೀರಿನಲ್ಲಿ ಕೈ ತೊಳಿಯೋ ಪರಿಸ್ಥಿತಿ ಬರುತ್ತದೆ. ಆ ಸಮಸ್ಯೆಯನ್ನು ಎದುರಿಸಲು ಹೋದಾಗ ಕಥೆ ನಾನಾ ತಿರುವು ಪಡೆದುಕೊಳ್ಳುತ್ತದೆ. ನಂತರ ಏನಾಗುತ್ತದೆ, ಆ ಊರು ಹೇಗೆ ಕಾಪಾಡಲ್ಪಡುತ್ತದೆ ಎಂಬುದೇ ಚಿತ್ರದ ಕಥೆ.

‘ಕೊತ್ತಲವಾಡಿ’ ಸಿನಿಮಾದಲ್ಲಿ ಪೃಥ್ವಿ ಅಂಬರ್ ಹೀರೋ ಆದರೂ ಇಡೀ ಚಿತ್ರವನ್ನು ಆವರಿಸಿಕೊಳ್ಳೋದು ಗೋಪಾಲ ಕೃಷ್ಣ ದೇಶಪಾಂಡೆ. ಅವರ ಮಾಗಿದ ನಟನೆ ಎಲ್ಲರಿಗೂ ಇಷ್ಟ ಆಗುತ್ತದೆ. ಜನ ಸೇವಕನಾಗಿ, ಕುತಂತ್ರಿಯಾಗಿ, ಅಣ್ಣನಾಗಿ, ಸಮಯ ಸಾಧಕನಾಗಿ ಹಲವು ಶೇಡ್​ಗಳನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರಿಂದ ಚಿತ್ರದ ತೂಕ ಹೆಚ್ಚಿದೆ. ಪೃಥ್ವಿ ಅಂಬರ್ ಅವರು ಕೂಡ ತಮಗೆ ಕೊಟ್ಟ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ರೊಮ್ಯಾಂಟಿಕ್ ಹೀರೋ ಆಗಿ ಮಿಂಚಿದ್ದ ಅವರು, ಈ ಚಿತ್ರದಲ್ಲಿ ಆ್ಯಕ್ಷನ್ ದೃಶ್ಯಗಳಲ್ಲಿ ಮೆಚ್ಚುಗೆ ಪಡೆಯುತ್ತಾರೆ. ಕಾವ್ಯ ಶೈವ ನಾಯಕಿಯಾಗಿ, ರಾಜೇಶ್ ನಟನರಂಗ ಅವರು ಪೊಲೀಸ್ ಅಧಿಕಾರಿಯಾಗಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಬಾಲ ರಾಜ್ವಾಡಿ, ಅವಿನಾಶ್ ಪಾತ್ರಗಳು ಕೆಲವೇ ದೃಶ್ಯಗಳಿಗೆ ಸೀಮಿತ ಆಗಿವೆ.

ನಿರ್ದೇಶಕ ಶ್ರೀ ರಾಜು ಅವರಿಗೆ ‘ಕೊತ್ತಲವಾಡಿ’ ಎರಡನೇ ಅನುಭವ. ಇದು ತೆರೆಮೇಲೆ ಪ್ರತಿ ಹಂತದಲ್ಲೂ ಸ್ಪಷ್ಟವಾಗಿ ಕಾಣಿಸುತ್ತದೆ. ಚಿತ್ರಕಥೆ ಹಾಗೂ ನಿರೂಪಣೆಯಲ್ಲಿ ಜಾಳುತನ ಎದ್ದು ಕಾಣಿಸುತ್ತದೆ. ಇದನ್ನು ಮತ್ತಷ್ಟು ಬಿಗಿ ಮಾಡಿದ್ದರೆ ಸಿನಿಮಾ ಮತ್ತಷ್ಟು ಸುಂದರವಾಗಿ ಕಾಣಿಸುತ್ತಿತ್ತು. ಕಥಾ ನಾಯಕ ಹಾಗೂ ನಾಯಕಿಯ ಲವ್​ ಸ್ಟೋರಿಯಲ್ಲಿ ಇನ್ನಷ್ಟು ಗಾಢತೆ ಬೇಕಿತ್ತು.

ವಿಧಾನಸಭೆ ಚುನಾವಣೆ ನಡೆಯುವ ರೀತಿ, ಮತ ಎಣಿಕೆ, ಶಾಸಕನಾದವನು ಇರೋ ರೀತಿ, ಪೊಲೀಸ್ ವ್ಯವಸ್ಥೆಯನ್ನು ತೀರಾ ಸಿಲ್ಲಿಯಾಗಿ ತೋರಿಸಲಾಗಿದೆ. ಇಲ್ಲಿ ನಿರ್ದೇಶಕರು ಹೆಚ್ಚಿನ ಗಮನ ಹರಿಸಬೇಕಿತ್ತು. ಕಥೆ ಫ್ಲ್ಯಾಶ್​ಬ್ಯಾಕ್​ನಲ್ಲಿ ಸಾಗುತ್ತಿದೆಯೇ ಅಥವಾ ಪ್ರಸ್ತುತದಲ್ಲಿ ನಡೆಯುತ್ತಿದೆಯೇ ಎಂಬ ಗೊಂದಲ ಮೂಡಿಸುವಂತಿದೆ ದೃಶ್ಯಗಳ ಕಾಂಬಿನೇಷನ್.  ಸಿನಿಮಾ ಮೂಲಕ ಏನನ್ನು ಹೇಳ ಹೊರಟಿದ್ದೇನೆ ಎಂಬುದರ ಸ್ಪಷ್ಟತೆ ನಿರ್ದೇಶಕರಿಗೆ ಇರಬೇಕಿತ್ತು. ಇಲ್ಲಿ ಕೆಲ ಹೊತ್ತು ಪ್ರಕೃತಿ ಉಳುವಿನ ಬಗ್ಗೆ ಹೇಳಿದರೆ, ಇನ್ನೂ ಸ್ವಲ್ಪ ಹೊತ್ತು ರಾಜಕೀಯದ ಹೊಲಸುಗಳು ಬಗ್ಗೆ ನಿರ್ದೇಶಕರು ಹೇಳುತ್ತಾರೆ. ಆದರೆ, ಯಾವುದನ್ನೂ ಪೂರ್ಣಗೊಳಿಸಿಲ್ಲ.

ಸಿನಿಮಾ ಹಾಡುಗಳಲ್ಲಿ, ಡ್ಯಾನ್ಸ್​ ವಿಚಾರದಲ್ಲಿ ಹಳೆಯ ಶೈಲಿಯನ್ನು ಫಾಲೋ ಮಾಡಲಾಗಿದೆ. ಹಳ್ಳಿ ಭಾಷಾ ಸೊಗಡು ಕೂಡ ಇಲ್ಲಿ ಸರಿಯಾದ ರೀತಿಯಲ್ಲಿ ಬಳಕೆ ಆಗಿಲ್ಲ. ರಘು ನಿಡುವಳ್ಳಿ ಬರೆದ ಸಂಭಾಷಣೆ ಕಥೆಯನ್ನೂ ಮೀರಿದ ತೂಕ ಪಡೆದುಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Fri, 1 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು