AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್​ಗಿಂತ ನಾಲ್ಕುಪಟ್ಟು ಕೆಟ್ಟದಾಗಿದೆ’; ‘ಲಿಯೋ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಕೈದಿ’, ‘ವಿಕ್ರಮ್’ ಸಿನಿಮಾದಲ್ಲಿ ಡ್ರಗ್ಸ್ ವಿಚಾರ ಹೈಲೈಟ್ ಆಗಿತ್ತು. ‘ಲಿಯೋ’ ಸಿನಿಮಾದಲ್ಲೂ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಇದೇ ವಿಚಾರದ ಮೇಲೆ ಫೋಕಸ್ ಮಾಡಿದ್ದಾರೆ. ತ್ರಿಷಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಬೀಸ್ಟ್​ಗಿಂತ ನಾಲ್ಕುಪಟ್ಟು ಕೆಟ್ಟದಾಗಿದೆ’; ‘ಲಿಯೋ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ವಿಜಯ್
ರಾಜೇಶ್ ದುಗ್ಗುಮನೆ
|

Updated on:Oct 19, 2023 | 12:31 PM

Share

ದಳಪತಿ ವಿಜಯ್ (Thalapathy Vijay) ನಟನೆಯ ತಮಿಳು ಸಿನಿಮಾ ‘ಲಿಯೋ’​ ಇಂದು (ಅಕ್ಟೋಬರ್ 19) ರಿಲೀಸ್ ಆಗಿದೆ. ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್​’ (Ghost Movie ) ಕೂಡ ಇಂದೇ ರಿಲೀಸ್ ಆಗಿದ್ದು ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ. ದಸರಾ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ಇದು ಚಿತ್ರದ ಕಲೆಕ್ಷನ್​ ಹೆಚ್ಚಲು ಸಹಕಾರಿ ಆಗಲಿದೆ. ಸದ್ಯ ‘ಘೋಸ್ಟ್’ ಚಿತ್ರಕ್ಕೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಆದರೆ, ‘ಲಿಯೋ’ ಸಿನಿಮಾಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ. 2022ರಲ್ಲಿ ರಿಲೀಸ್ ಆಗಿ ಸೋತ ವಿಜಯ್ ನಟನೆಯ ‘ಬೀಸ್ಟ್​’ ಚಿತ್ರಕ್ಕಿಂತ ನಾಲ್ಕು ಪಟ್ಟು ಕೆಟ್ಟದಾಗಿ ‘ಲಿಯೋ’ ಇದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ದಳಪತಿ ವಿಜಯ್ ಅವರು ಒಪ್ಪಿಕೊಂಡ ಚಿತ್ರದ ಕೆಲಸವನ್ನು ಆದಷ್ಟು ಬೇಗ ಮುಗಿಸುತ್ತಾರೆ. ಜನವರಿಯಲ್ಲಿ ‘ವಾರಿಸು’ ರಿಲೀಸ್ ಆಗಿ ಹಿಟ್ ಆಯಿತು. ಈಗ ಹತ್ತೇ ತಿಂಗಳಲ್ಲಿ ಅವರ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. ‘ಲಿಯೋ’ ಚಿತ್ರವನ್ನು ನೋಡಿದವರು ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸುತ್ತಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎನ್ನುವ ಅಭಿಪ್ರಾಯಹೊರಹಾಕುತ್ತಿದ್ದಾರೆ.

‘ಬೀಸ್ಟ್​ಗಿಂತ ನಾಲ್ಕು ಪಟ್ಟು ಕೆಟ್ಟದಾಗಿದೆ’ ಎಂದು ಅಭಿಮಾನಿಯೋರ್ವ ಹೇಳಿಕೊಂಡಿದ್ದಾನೆ. ಕೆಲವರು ‘ಓವರ್ ಹೈಪ್ ಸಿನಿಮಾ’ ಎಂದಿದ್ದಾರೆ. ‘ಲಿಯೋ ಎಂದರೆ ಸಿಂಹ ಅಲ್ಲ, ಬೆಕ್ಕು’ ಎಂದು ಕೆಲವರು ಟೀಕೆ ಮಾಡಿದ್ದಾರೆ. ಈ ಮೂಲಕ ಸಿನಿಮಾಗೆ ಸೋಲಾಗುವ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ‘ಘೋಸ್ಟ್ ಮುಂದೆ ಯಾವ ಲಿಯೋನೂ ಇಲ್ಲ’; ಶಿವಣ್ಣನ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರ

‘ಕೈದಿ’, ‘ವಿಕ್ರಮ್’ ಸಿನಿಮಾದಲ್ಲಿ ಡ್ರಗ್ಸ್ ವಿಚಾರ ಹೈಲೈಟ್ ಆಗಿತ್ತು. ‘ಲಿಯೋ’ ಸಿನಿಮಾದಲ್ಲೂ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಇದೇ ವಿಚಾರದ ಮೇಲೆ ಫೋಕಸ್ ಮಾಡಿದ್ದಾರೆ. ತ್ರಿಷಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Thu, 19 October 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ