AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರ್ಯಾದೆ ಪ್ರಶ್ನೆ’ ವಿಮರ್ಶೆ: ಶ್ರೀಮಂತರಿಗೆ ದುಡ್ಡಿನ ಆಟ; ಮಧ್ಯಮ ವರ್ಗದವರದ್ದು ಭಾವನೆಗಳ ತೊಳಲಾಟ

Maryade Prashne Review: ಹೊಸಬರ ಸಿನಿಮಾಗೆ ಯಾವುದೇ ಕೊರತೆ ಇಲ್ಲ. ಪ್ರತಿ ವಾರ ಹೊಸ ತಂಡಗಳ ಸಿನಿಮಾಗಳು ಬರುತ್ತಲೇ ಇರುತ್ತವೆ. ಅದರಲ್ಲಿ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಕೂಡ ಒಂದು. ಈ ಚಿತ್ರ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಮರ್ಯಾದೆ ಪ್ರಶ್ನೆ’ ವಿಮರ್ಶೆ: ಶ್ರೀಮಂತರಿಗೆ ದುಡ್ಡಿನ ಆಟ; ಮಧ್ಯಮ ವರ್ಗದವರದ್ದು ಭಾವನೆಗಳ ತೊಳಲಾಟ
ಮರ್ಯಾದೆ ಪ್ರಶ್ನೆ
ರಾಜೇಶ್ ದುಗ್ಗುಮನೆ
|

Updated on:Nov 22, 2024 | 11:17 AM

Share

ಸಿನಿಮಾ: ಮರ್ಯಾದೆ ಪ್ರಶ್ನೆ. ನಿರ್ದೇಶನ: ನಾಗರಾಜ್ ಸೋಮಯಾಜಿ. ನಿರ್ಮಾಣ: ಶ್ವೇತಾ ಪ್ರಸಾದ್. ಕಥೆ: ಆರ್​ಜೆ ಪ್ರದೀಪ. ಸಂಗೀತ ಸಂಯೋಜನೆ: ಅರ್ಜುನ್ ರಾಮು. ತಾರಾಗಣ: ರಾಕೇಶ್ ಅಡಿಗ, ಸುನಿಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ರೇಖಾ ಕುಡ್ಲಗಿ, ಪೂರ್ಣಚಂದ್ರ ಮೈಸೂರು ಮೊದಲಾದವರು. ರೇಟಿಂಗ್: 3.5/5.

ಸೂರಿ (ರಾಕೇಶ್), ಸತೀಶ್ (ಸುನೀಲ್), ಮಂಜು (ಪೂರ್ಣಚಂದ್ರ) ಪಕ್ಕಾ ಮಧ್ಯಮ ವರ್ಗದ ಹುಡುಗರು. ಇವರು ಸಣ್ಣ ವಯಸ್ಸಿನಿಂದಲೂ ಗೆಳೆಯರು. ಒಬ್ಬರ ಕಷ್ಟಕ್ಕೆ ಒಬ್ಬರು ಆಗುತ್ತಾರೆ. ಇವರೆಲ್ಲರಿಗೂ ದುಡ್ಡು ಮಾಡಬೇಕು ಎಂಬ ಕನಸು. ಹೇಗಾದರೂ ಹಣ ಮಾಡಲೇಬೇಕು ಎಂದರೂ ಯಾವುದೂ ಕೈಗೂಡುವುದಿಲ್ಲ. ಇದರ ಜೊತೆಗೆ ಮರ್ಯಾದೆ ಬಗ್ಗೆ ಏಳುವ ಪ್ರಶ್ನೆಯ ಬಗ್ಗೆ ಅಂಜಿಕೆ. ಇವರ ಜೀವನದಲ್ಲಿ ಒಂದು ದೊಡ್ಡ ತಿರುವು ಸಿಗುತ್ತದೆ. ಅಲ್ಲಿಂದ ಸಿನಿಮಾದ ಪ್ರತಿ ಪಾತ್ರಗಳೂ ತಿರುವು ಪಡೆದುಕೊಂಡು ಬಿಡುತ್ತದೆ. ನಂತರ ಏನಾಗುತ್ತದೆ? ಇವರು ಹಣ ಮಾಡುತ್ತಾರಾ? ಈ ಪ್ರಶ್ನೆಗಳಿಗೆ ಸಿನಿಮಾದಲ್ಲೇ ಉತ್ತರ ಕಂಡುಕೊಳ್ಳಬೇಕು.

ನಟನೆ..

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ದೊಡ್ಡ ಸ್ಟಾರ್ ಹೀರೋಗಳು ಇಲ್ಲ. ಆದರೆ, ನಟಿಸಿದ ಎಲ್ಲರೂ ದೊಡ್ಡ ಹೀರೋಗಳಿಗೇನು ಕಡಿಮೆ ಇಲ್ಲ ಎಂಬಂತೆ ನಟಿಸಿದ್ದಾರೆ. ಎಲ್ಲರೂ ನಟನೆಯಲ್ಲಿ ಫುಲ್ ಮಾರ್ಕ್ಸ್ ಪಡೆದಿದ್ದಾರೆ. ಪ್ರತಿ ಪಾತ್ರಗಳ ಆಯ್ಕೆಯೂ ಉತ್ತಮವಾಗಿ ಮಾಡಿದ್ದಾರೆ ನಿರ್ದೇಶಕರು. ರಾಕೇಶ್ ಅವರು ನಟನೆಯಲ್ಲಿ ಎಲ್ಲರಿಂದ ಚಪ್ಪಾಳೆ ಪಡೆಯುತ್ತಾರೆ. ಸುನಿಲ್, ಪೂರ್ಣಚಂದ್ರ ಅವರು ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ವಿಲನ್ ಪಾತ್ರದಲ್ಲಿ ನಟಿಸಿರೋ ಪ್ರಭು ಅವರು ಕೆಲವು ದೃಶ್ಯಗಳನ್ನು ಸಂಪೂರ್ಣವಾಗಿ ಆವರಿಸಿಕೊಂಡು ಬಿಡುತ್ತಾರೆ. ತಮ್ಮ ಡೈಲಾಗ್ ಡೆಲಿವರಿ ಹಾಗೂ ಅದ್ಭುತ ನಟನೆಯ ಮೂಲಕ ಭೇಷ್ ಎನಿಸಿಕೊಳ್ಳುತ್ತಾರೆ.

ನಾಗೇಂದ್ರ ಶಾ, ರೇಖಾ ಕುಡ್ಲಿಗಿ ಅವರು ಸತೀಶ್​ನ ತಂದೆ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆರೆಯ ಮೇಲೆ ಇದ್ದಷ್ಟು ಹೊತ್ತು ಅವರು ಭಾವನಾತ್ಮಕವಾಗಿ ಆವರಿಸಿಕೊಳ್ಳುತ್ತಾರೆ. ನಾಗೇಂದ್ರ ಶಾ ಹೇಳುವ ಕೆಲವೇ ಡೈಲಾಗ್​ಗಳು ಕರುಳನ್ನು ಚುರುಕ್ ಎನಿಸುತ್ತದೆ. ಸತೀಶ್​ನ ಸಹೋದರಿಯ ಪಾತ್ರದಲ್ಲಿರೋ ತೇಜು ಬೆಳವಾಡಿ ಅವರು ಒಂದು ನವಿರಾದ ಪ್ರೇಮಕಥೆಯ ರುವಾರಿಯಾಗಿದ್ದಾರೆ. ಅವರು ತಂಗಿಯಾಗಿ, ಪ್ರೇಮಿಯಾಗಿ ಇಷ್ಟ ಆಗುತ್ತಾರೆ. ಶೈನ್ ಶೆಟ್ಟಿ ಅವರು ಶೆಟ್ಟಿ ಪಾತ್ರದ ಮೂಲಕ ಭೇಷ್ ಎನಿಸಿಕೊಳ್ಳುತ್ತಾರೆ.

ಇದನ್ನೂ ಓದಿ:ಈ ವಾರ ಮರ್ಯಾದೆ ಪ್ರಶ್ನೆ, ಟೆನಂಟ್, ಅಂಶು, ಜೀಬ್ರಾ ಮುಂತಾದ ಸಿನಿಮಾ; ಪ್ರೇಕ್ಷಕರ ಆಯ್ಕೆ ಯಾವುದು? 

ನಿರ್ದೇಶನ

ನಾಗರಾಜ್ ಸೋಮಯಾಜಿ ಅವರದ್ದು ಇದು ಮೊದಲ ನಿರ್ದೇಶನ. ಮೊದಲ ಚಿತ್ರದಲ್ಲೇ ಅವರು ಅದ್ಭುತ ಕೆಲಸ ಮಾಡಿ ತೋರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಂದು ಒಳ್ಳೆಯ ನಿರ್ದೇಶಕ ಸಿಕ್ಕ ಎನ್ನಬಹುದು. ಮಧ್ಯಮ ವರ್ಗದವರ ತೊಳಲಾಟವನ್ನು, ಅಸಹಾಯಕತೆಯನ್ನು ಅತ್ಯುತ್ತಮವಾಗಿ ತೋರಿಸಿದ್ದಾರೆ. ಭಾವನಾತ್ಮಕ ದೃಶ್ಯಗಳಲ್ಲಿ ಕಣ್ಣು ತುಂಬುವಂತೆ ಮಾಡುತ್ತಾರೆ ನಿರ್ದೇಶಕರು. ಎಲ್ಲಿಯೂ ಆಡಂಬರವಿಲ್ಲದೆ, ಮಧ್ಯಮವರ್ಗದ ಸಹಜ ಜೀವನವನ್ನು ಕಟ್ಟಿಕೊಟ್ಟಿದ್ದಾರೆ. ವೀಕ್ಷಕರು ಏನು ಊಹಿಸುತ್ತಾರೋ ಅದಕ್ಕೆ ವಿರುದ್ಧವಾಗಿಯೇ ಕಥೆ ನಡೆಯುತ್ತದೆ. ಒಂದು ನವಿರಾದ ಪ್ರೇಮ ಕಥೆಯನ್ನು ಅದ್ಭುತವಾಗಿ ಹೆಣೆದಿದ್ದಾರೆ. ಮಧ್ಯಂತರದಲ್ಲೇ ಕ್ಲೈಮ್ಯಾಕ್ಸ್ ರೇಂಜ್​ನ ಎಗ್ಸೈಟ್​ಮೆಂಟ್​ ನೀಡುತ್ತಾರೆ. ಅರ್ಜುನ್ ರಾಮು ಅವರು ಹಿನ್ನೆಲೆ ಸಂಗೀತ ಮತ್ತು ಹಾಡುಗಳ ಮೂಲಕ ಕಾಡುತ್ತಾರೆ. ಕ್ಲೈಮ್ಯಾಕ್ಸ್​​ನ ಫ್ಲ್ಯಾಟ್ ಮಾಡುವ ಬದಲು ಇನ್ನೂ ಎಗ್ಸೈಟ್ ಆಗಿ ಮಾಡಬಹುದಿತ್ತು ಎಂದು ಥಿಯೇಟರ್​ನಿಂದ ಹೊರ ಬರುವ ಪ್ರೇಕ್ಷಕರಿಗೆ ಅನಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:53 am, Fri, 22 November 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ