AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Max Movie Review: ‘ಮ್ಯಾಕ್ಸ್’ ಸಿನಿಮಾಗೆ ಬಲ ತುಂಬಿದ ಕಥೆಯ ಶರವೇಗ, ಕಿಚ್ಚನ ಆವೇಗ

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಇಂದು (ಡಿ.25) ತೆರೆಕಂಡಿದೆ. ‘ವಿಕ್ರಾಂತ್ ರೋಣ’ ಬಳಿಕ ಒಂದು ಗ್ಯಾಪ್​ನ ನಂತರ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಈ ಚಿತ್ರಕ್ಕೆ ಗ್ರ್ಯಾಂಡ್​ ವೆಲ್​ಕಮ್ ನೀಡಿದ್ದಾರೆ. ಮಾಸ್​ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ. ಮ್ಯಾಕ್ಸ್ ವಿಮರ್ಶೆ ಇಲ್ಲಿದೆ..

Max Movie Review: ‘ಮ್ಯಾಕ್ಸ್’ ಸಿನಿಮಾಗೆ ಬಲ ತುಂಬಿದ ಕಥೆಯ ಶರವೇಗ, ಕಿಚ್ಚನ ಆವೇಗ
Kichcha Sudeep
Follow us
ಮದನ್​ ಕುಮಾರ್​
|

Updated on:Dec 25, 2024 | 11:11 AM

ಸಿನಿಮಾ: ಮ್ಯಾಕ್ಸ್. ನಿರ್ಮಾಣ: ಕಲೈಪುಲಿ ಎಸ್​. ಧಾನು. ನಿರ್ದೇಶನ: ವಿಜಯ್ ಕಾರ್ತಿಕೇಯ. ಪಾತ್ರವರ್ಗ: ಕಿಚ್ಚ ಸುದೀಪ್, ಸುನಿಲ್, ವರಲಕ್ಷ್ಮಿ ಶರತ್ ಕುಮಾರ್​, ಉಗ್ರಂ ಮಂಜು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ, ವಿಜಯ್ ಚಂಡೂರು ಮುಂತಾದವರು. ಸ್ಟಾರ್​: 3.5/5

‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್​ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ ಕಳ್ಳರೇ ಪೊಲೀಸರನ್ನು ಹಿಡಿಯಲು ಬರುತ್ತಾರೆ! ಇಲ್ಲಿ ಕಿಚ್ಚ ಸುದೀಪ್ ಅವರು ಖಡಕ್ ಪೊಲೀಸ್ ಆಫೀಸರ್​ ಪಾತ್ರವನ್ನು ಮಾಡಿದ್ದಾರೆ. ಅವರ ಜೊತೆ ಉಗ್ರಂ ಮಂಜು, ಸುಕೃತಾ ವಾಗ್ಳೆ, ಸಂಯುಕ್ತಾ ಹೊರನಾಡು ಮುಂತಾದವರು ಕೂಡ ಪೊಲೀಸ್ ಪಾತ್ರವನ್ನು ನಿಭಾಯಿಸಿದ್ದಾರೆ. ಒಂದೇ ರಾತ್ರಿಯಲ್ಲಿ ನಡೆಯುವ ಕಥೆಯನ್ನು ಇಟ್ಟುಕೊಂಡು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮ್ಯಾಕ್ಸ್’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ.

ಮ್ಯಾಕ್ಸ್ ಕಥೆ ಸರಳವಾಗಿದೆ. ರಾಜಕಾರಣಿಗಳ ಮಕ್ಕಳು ಪೊಲೀಸರ ಮೇಲೆ ಕೈ ಮಾಡುತ್ತಾರೆ. ಅಂಥವರಿಗೆ ಬುದ್ಧಿ ಕಲಿಸಲು ಮ್ಯಾಕ್ಸ್ ಅಲಿಯಾಸ್ ಅರ್ಜುನ್ ಮಹಾಕ್ಷಯ್ (ಸುದೀಪ್) ಬರುತ್ತಾನೆ. ಬಂಧನಕ್ಕೆ ಒಳಗಾದ ಬಳಿಕ ರಾಜಕಾರಣಿಗಳ ಮಕ್ಕಳು ಅನುಮಾನಾಸ್ಪದವಾಗಿ ಸಾಯುತ್ತಾರೆ. ಆಗ ಇಡೀ ಪೊಲೀಸ್ ಸ್ಟೇಷನ್​ಗೆ ಸಂಕಷ್ಟ ಶುರುವಾಗುತ್ತದೆ. ಸೇಡು ತೀರಿಸಿಕೊಳ್ಳಲು ವಿಲನ್​ಗಳ ದಂಡು ಬರುತ್ತದೆ. ಅವರಿಂದ ತಪ್ಪಿಸಿಕೊಂಡು, ತಮ್ಮವರನ್ನು ಕಾಪಾಡಿಕೊಳ್ಳಲು ಮ್ಯಾಕ್ಸ್ ಹೇಗೆಲ್ಲ ಕಷ್ಟಪಡುತ್ತಾನೆ ಎಂಬುದೇ ಈ ಚಿತ್ರದ ಕಥಾ ಸಾರಾಂಶ.

ಮೇಲ್ನೋಟಕ್ಕೆ ನೋಡಲು ‘ಮ್ಯಾಕ್ಸ್’ ಕಥೆ ಸರಳವಾಗಿದೆ ಎನಿಸದರೂ ಅದನ್ನು ತೆರೆಗೆ ತರುವಲ್ಲಿ ನಿರ್ದೇಶಕರು ಸಾಕಷ್ಟು ಶ್ರಮಪಟ್ಟಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಥ್ರಿಲ್ಲಿಂಗ್ ಗುಣವನ್ನು ಪ್ರತಿ ದೃಶ್ಯದಲ್ಲೂ ಬರೆಸಿದ್ದಾರೆ. ಒಂದಷ್ಟು ಟ್ವಿಸ್ಟ್​ಗಳ ಮೂಲಕ ಮನರಂಜನೆಯನ್ನು ಹೆಚ್ಚಿಸಿದ್ದಾರೆ. ಮುಂದೇನಾಗುತ್ತದೆ ಎಂಬ ಕೌತುಕವನ್ನು ಕೊನೇ ತನಕ ಕಾಪಾಡಿಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಪ್ರೇಕ್ಷಕರನ್ನು ‘ಮ್ಯಾಕ್ಸ್’ ಸಿನಿಮಾ ಆವರಿಸುತ್ತದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ‘ಮ್ಯಾಕ್ಸ್’ ದರ್ಶನ; ಹೇಗಿದೆ ಸುದೀಪ್ ಸಿನಿಮಾದ ಫಸ್ಟ್ ಹಾಫ್?

ರಾತ್ರಿ ಶುರುವಾದ ಒಂದು ಕಿರಿಕ್​ ಮರುದಿನ ಬೆಳಕು ಹರಿಯುವುದರೊಳಗೆ ಅಂತ್ಯವಾಗುತ್ತದೆ. ಕೆಲವೇ ಗಂಟೆಗಳ ಒಳಗೆ ಒಂದು ದೊಡ್ಡ ಯುದ್ಧವೇ ನಡೆಯುತ್ತದೆ. ಹಾಗಂತ ಇದು ಬರೀ ಹೊಡಿಬಡಿ ದೃಶ್ಯಗಳೇ ತುಂಬಿರುವ ಸಿನಿಮಾ ಅಲ್ಲ. ಆ್ಯಕ್ಷನ್​ ಸೀನ್​ಗಳ ಜೊತೆಗೆ ಬುದ್ಧಿಯ ಆಟ ಕೂಡ ಹೌದು. ಭುಜಬಲದ ಜೊತೆಗೆ ಬುದ್ಧಿಬಲವನ್ನೂ ಮ್ಯಾಕ್ಸ್ ಉಪಯೋಗಿಸುತ್ತಾನೆ. ಸುದೀಪ್​ ಅವರ ವೃತ್ತಿಜೀವನದಲ್ಲಿಒಂದು ಡಿಫರೆಂಟ್​ ಚಿತ್ರವಾಗಿ ‘ಮ್ಯಾಕ್ಸ್’ ಮೂಡಿಬಂದಿದೆ.

‘ಮ್ಯಾಕ್ಸ್’ ಸಿನಿಮಾದಲ್ಲಿ ಹೀರೋ ಪಾತ್ರಕ್ಕೆ ಹೆಚ್ಚಿನ ಕಟ್ಟುಪಾಡುಗಳು ಇಲ್ಲ. ಲವ್, ರೊಮ್ಯಾನ್ಸ್, ಕಾಮಿಡಿ ಇತ್ಯಾದಿ ವಿಷಯಗಳಲ್ಲಿ ಹೀರೋ ಕಾಲ ಹರಣ ಮಾಡುವುದೇ ಇಲ್ಲ. ಚಿತ್ರದ ಆರಂಭದಿಂದಲೇ ನೇರವಾಗಿ ಕಥೆ ತೆರೆದುಕೊಳ್ಳುತ್ತದೆ. ಯಾವುದೇ ಅನಗತ್ಯ ಅಂಶಗಳಿಗೂ ಕಥೆಯಲ್ಲಿ ಜಾಗವಿಲ್ಲ. ಒಮ್ಮೆ ಶುರುವಾದ ಕಥೆ ಕೊನೆವರೆಗೂ ವೇಗವಾಗಿಯೇ ಸಾಗುತ್ತದೆ. ಇದು ಈ ಸಿನಿಮಾದ ಮುಖ್ಯವಾದ ಪ್ಲಸ್ ಪಾಯಿಂಟ್. 2 ಗಂಟೆ 13 ನಿಮಿಷದಲ್ಲಿ ‘ಮ್ಯಾಕ್ಸ್’ ಮಸ್ತ್ ಮನರಂಜನೆ ನೀಡುತ್ತದೆ.

ಇದನ್ನೂ ಓದಿ: UI Movie Review: ಯುಐ ಸಿನಿಮಾದಲ್ಲಿ ಉಪೇಂದ್ರ ವಿಚಾರಗಳ ಓವರ್​ ಡೋಸ್​

ಸುದೀಪ್​ ಅವರು ಇಡೀ ಸಿನಿಮಾವನ್ನು ಆವರಿಸಿಕೊಂಡಿದ್ದಾರೆ. ಆ್ಯಕ್ಷನ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತದಿಂದಾಗಿ ಸಿನಿಮಾದ ತೂಕ ಹೆಚ್ಚಿದೆ. ಶೇಖರ್​ ಚಂದ್ರ ಅವರ ಛಾಯಾಗ್ರಹಣ ಕೂಡ ಚೆನ್ನಾಗಿದೆ. ಮಾಸ್ ಕಮರ್ಷಿಯಲ್ ಸಿನಿಮಾ ಆದ್ದರಿಂದ ಎಲ್ಲ ಕಡೆಯಲ್ಲೂ ಲಾಜಿಕ್ ಹುಡುಕುವಂತಿಲ್ಲ. ಇನ್ನು, ಕಥೆ ಸಂಪೂರ್ಣ ಹೊಸದಾಗಿದೆ ಎನ್ನವಂತೆಯೂ ಇಲ್ಲ. ಇಂಥ ಕೆಲವು ಮೈನಸ್ ಅಂಶಗಳನ್ನು ಬದಿಗಿಟ್ಟರೆ ‘ಮ್ಯಾಕ್ಸ್’ ಇಷ್ಟ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:51 am, Wed, 25 December 24

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ