AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Premam Poojyam: ‘ಪ್ರೇಮಂ ಪೂಜ್ಯಂ’ ಸಿನಿಮಾ ರಿಲೀಸ್​; ಪ್ರೇಮ್​ ಅಭಿನಯ ಕಂಡು ವಿಮರ್ಶೆ ತಿಳಿಸಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು

Premam Poojyam Review: ‘ಲವ್ಲಿ ಸ್ಟಾರ್​’ ಪ್ರೇಮ್​, ಬೃಂದಾ ಆಚಾರ್ಯ, ಐಂದ್ರಿತಾ ರೇ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ‘ಪ್ರೇಮಂ ಪೂಜ್ಯಂ’ ಚಿತ್ರ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಬಳಿಕ ಶರಣ್​, ಖುಷಿ ರವಿ, ತರುಣ್​​ ಸುಧೀರ್​ ಮುಂತಾದ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Premam Poojyam: ‘ಪ್ರೇಮಂ ಪೂಜ್ಯಂ’ ಸಿನಿಮಾ ರಿಲೀಸ್​; ಪ್ರೇಮ್​ ಅಭಿನಯ ಕಂಡು ವಿಮರ್ಶೆ ತಿಳಿಸಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು
‘ಪ್ರೇಮಂ ಪೂಜ್ಯಂ’ ಚಿತ್ರದಲ್ಲಿ ಪ್ರೇಮ್, ಬೃಂದಾ ಆಚಾರ್ಯ
Follow us
TV9 Web
| Updated By: ಮದನ್​ ಕುಮಾರ್​

Updated on: Nov 12, 2021 | 9:55 AM

ನಟ ‘ನೆನಪಿರಲಿ’ ಪ್ರೇಮ್​ (Nenapirali Prem) ಅಭಿನಯದ ‘ಪ್ರೇಮಂ ಪೂಜ್ಯಂ’ (Premam Poojyam) ಸಿನಿಮಾ ಭಾರಿ ನೀರೀಕ್ಷೆ ಮೂಡಿಸಿತ್ತು. ಇಂದು (ನ.12) ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಹಳೇ ಚಾರ್ಮ್​ ಮರಳುತ್ತಿದೆ. ಎರಡನೇ ಲಾಕ್​ಡೌನ್​ ಬಳಿಕ ಮಂಕಾಗಿದ್ದ ಚಿತ್ರರಂಗ ಈಗ ಚೇತರಿಸಿಕೊಳ್ಳುತ್ತಿದೆ. ಹಲವು​ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗುತ್ತಿವೆ. ಆ ಪೈಕಿ ‘ಪ್ರೇಮಂ ಪೂಜ್ಯಂ’ ಚಿತ್ರ ಗಮನ ಸೆಳೆಯುತ್ತಿದೆ. ಬೃಂದಾ ಆಚಾರ್ಯ (Brinda Acharya), ಐಂದ್ರಿತಾ ರೇ (Aindrita Ray), ಸಾಧುಕೋಕಿಲ ಮುಂತಾದವರು ಇದರಲ್ಲಿ ಅಭಿನಯಿಸಿದ್ದಾರೆ. ಗುರುವಾರವೇ (ನ.11) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಾಗಿ ಈ ಸಿನಿಮಾದ ಪ್ರೀಮಿಯರ್​ ಪ್ರದರ್ಶನ ಏರ್ಪಡಿಸಲಾಗಿತ್ತು. ಚಿತ್ರ ನೋಡಿದ ಬಳಿಕ ಪ್ರೇಮ್​ ಮತ್ತು ತಂಡದ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶರಣ್​, ದಿಯಾ ಖ್ಯಾತಿಯ ಖುಷಿ ರವಿ, ತರುಣ್​ ಸುಧೀರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ವೀಕ್ಷಿಸಿದ್ದಾರೆ.

ಶರಣ್​ ಅವರಿಗೆ ಈ ಚಿತ್ರ ಸಖತ್​ ಇಷ್ಟವಾಗಿದೆ. ‘ಪ್ರೇಮಂ ಎಂಬ ಹೆಸರಿನ ರೀತಿಯೇ ಈ ಚಿತ್ರತಂಡಕ್ಕೆ ಸಿನಿಮಾ ಮೇಲೆ ಇರುವ ಪ್ರೇಮವು ಪ್ರತಿ ಫ್ರೇಮ್​ನಲ್ಲಿ ಕಾಣಿಸುತ್ತದೆ. ನಿರ್ದೇಶಕರ ಕನಸು ತುಂಬ ಕಲರ್​ಫುಲ್​ ಆಗಿ ಮೂಡಿಬಂದಿದೆ. ಡಾ. ರಾಘವೇಂದ್ರ ಅವರು ಮೊದಲ ನಿರ್ದೇಶನದ ಪ್ರಯತ್ನದಲ್ಲೇ ಗಮನ ಸೆಳೆದಿದ್ದಾರೆ. ಪ್ರೇಮ್​ ಅವರನ್ನು ಇನ್ನಷ್ಟು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡದವರು ಮನಪೂರ್ವಕವಾಗಿ ಕೆಲಸ ಮಾಡಿದ್ದಾರೆ’ ಎಂದು ಶರಣ್​ ಹೊಗಳಿದ್ದಾರೆ.

ನಟ ಪ್ರೇಮ್​ ಅವರಿಗೆ ವಯಸ್ಸೇ ಆಗುವುದಿಲ್ಲವೇ ಎಂದು ಅಚ್ಚರಿಯ ಪ್ರಶ್ನೆ ಕೇಳಿದ್ದಾರೆ ನಟಿ ಖುಷಿ ರವಿ. ‘ದಿನದಿನಕ್ಕೂ ಪ್ರೇಮ್​ ಅವರು ಯಂಗ್​ ಆಗಿ ಕಾಣಿಸುತ್ತಾರೆ. ಈ ಸಿನಿಮಾ ಒಂದು ದೃಶ್ಯ ವೈಭವದಂತಿದೆ. ನಿಜವಾದ ಪ್ರೀತಿ ಬಗ್ಗೆ ಒಂದೊಳ್ಳೆಯ ಮೆಸೇಜ್​ ಈ ಸಿನಿಮಾದಲ್ಲಿದೆ. ಎಲ್ಲರೂ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಿ. ಓಟಿಟಿಗೋಸ್ಕರ ಕಾಯಬೇಡಿ’ ಎಂದು ಖುಷಿ ರವಿ ಹೇಳಿದ್ದಾರೆ.

ಖ್ಯಾತ ನಿರ್ದೇಶಕ ತರುಣ್​ ಸುಧೀರ್​ ಅವರು ಸಹ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ‘ಪ್ರೇಮ್​ ಹೀರೋ ಎಂದುಕೊಂಡು ಈ ಸಿನಿಮಾ ನೋಡಲು ಬಂದೆ. ಆದರೆ ಪೂರ್ತಿ ಸಿನಿಮಾ ನೋಡಿದ ಬಳಿಕ ಗೊತ್ತಾಯಿತು ಇದು ಮಲ್ಟಿಸ್ಟಾರರ್​ ಚಿತ್ರ. ನಿರ್ದೇಶಕ ರಾಘವೇಂದ್ರ ಮತ್ತು ಛಾಯಾಗ್ರಾಹಕ ನವೀನ್​ ಅವರನ್ನು ಕೂಡ ಈ ಸಿನಿಮಾದ ಹೀರೋಗಳು ಅಂತ ನಾನು ಹೇಳುತ್ತೇನೆ. ಈ ಮೂವರ ಜುಗಲ್​ಬಂದಿ ಚೆನ್ನಾಗಿ ಮೂಡಿಬಂದಿದೆ. ಒಂದು ಫ್ರೇಮ್​ ಕೂಡ ರಾಜಿ ಆಗಿಲ್ಲ’ ಎಂದು ತರುಣ್​ ಸುಧೀರ್​ ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್