AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Premam Poojyam: ‘ಪ್ರೇಮಂ ಪೂಜ್ಯಂ’ ಸಿನಿಮಾ ರಿಲೀಸ್​; ಪ್ರೇಮ್​ ಅಭಿನಯ ಕಂಡು ವಿಮರ್ಶೆ ತಿಳಿಸಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು

Premam Poojyam Review: ‘ಲವ್ಲಿ ಸ್ಟಾರ್​’ ಪ್ರೇಮ್​, ಬೃಂದಾ ಆಚಾರ್ಯ, ಐಂದ್ರಿತಾ ರೇ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ‘ಪ್ರೇಮಂ ಪೂಜ್ಯಂ’ ಚಿತ್ರ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಬಳಿಕ ಶರಣ್​, ಖುಷಿ ರವಿ, ತರುಣ್​​ ಸುಧೀರ್​ ಮುಂತಾದ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Premam Poojyam: ‘ಪ್ರೇಮಂ ಪೂಜ್ಯಂ’ ಸಿನಿಮಾ ರಿಲೀಸ್​; ಪ್ರೇಮ್​ ಅಭಿನಯ ಕಂಡು ವಿಮರ್ಶೆ ತಿಳಿಸಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು
‘ಪ್ರೇಮಂ ಪೂಜ್ಯಂ’ ಚಿತ್ರದಲ್ಲಿ ಪ್ರೇಮ್, ಬೃಂದಾ ಆಚಾರ್ಯ
TV9 Web
| Edited By: |

Updated on: Nov 12, 2021 | 9:55 AM

Share

ನಟ ‘ನೆನಪಿರಲಿ’ ಪ್ರೇಮ್​ (Nenapirali Prem) ಅಭಿನಯದ ‘ಪ್ರೇಮಂ ಪೂಜ್ಯಂ’ (Premam Poojyam) ಸಿನಿಮಾ ಭಾರಿ ನೀರೀಕ್ಷೆ ಮೂಡಿಸಿತ್ತು. ಇಂದು (ನ.12) ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಹಳೇ ಚಾರ್ಮ್​ ಮರಳುತ್ತಿದೆ. ಎರಡನೇ ಲಾಕ್​ಡೌನ್​ ಬಳಿಕ ಮಂಕಾಗಿದ್ದ ಚಿತ್ರರಂಗ ಈಗ ಚೇತರಿಸಿಕೊಳ್ಳುತ್ತಿದೆ. ಹಲವು​ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗುತ್ತಿವೆ. ಆ ಪೈಕಿ ‘ಪ್ರೇಮಂ ಪೂಜ್ಯಂ’ ಚಿತ್ರ ಗಮನ ಸೆಳೆಯುತ್ತಿದೆ. ಬೃಂದಾ ಆಚಾರ್ಯ (Brinda Acharya), ಐಂದ್ರಿತಾ ರೇ (Aindrita Ray), ಸಾಧುಕೋಕಿಲ ಮುಂತಾದವರು ಇದರಲ್ಲಿ ಅಭಿನಯಿಸಿದ್ದಾರೆ. ಗುರುವಾರವೇ (ನ.11) ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಾಗಿ ಈ ಸಿನಿಮಾದ ಪ್ರೀಮಿಯರ್​ ಪ್ರದರ್ಶನ ಏರ್ಪಡಿಸಲಾಗಿತ್ತು. ಚಿತ್ರ ನೋಡಿದ ಬಳಿಕ ಪ್ರೇಮ್​ ಮತ್ತು ತಂಡದ ಪ್ರಯತ್ನಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶರಣ್​, ದಿಯಾ ಖ್ಯಾತಿಯ ಖುಷಿ ರವಿ, ತರುಣ್​ ಸುಧೀರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ವೀಕ್ಷಿಸಿದ್ದಾರೆ.

ಶರಣ್​ ಅವರಿಗೆ ಈ ಚಿತ್ರ ಸಖತ್​ ಇಷ್ಟವಾಗಿದೆ. ‘ಪ್ರೇಮಂ ಎಂಬ ಹೆಸರಿನ ರೀತಿಯೇ ಈ ಚಿತ್ರತಂಡಕ್ಕೆ ಸಿನಿಮಾ ಮೇಲೆ ಇರುವ ಪ್ರೇಮವು ಪ್ರತಿ ಫ್ರೇಮ್​ನಲ್ಲಿ ಕಾಣಿಸುತ್ತದೆ. ನಿರ್ದೇಶಕರ ಕನಸು ತುಂಬ ಕಲರ್​ಫುಲ್​ ಆಗಿ ಮೂಡಿಬಂದಿದೆ. ಡಾ. ರಾಘವೇಂದ್ರ ಅವರು ಮೊದಲ ನಿರ್ದೇಶನದ ಪ್ರಯತ್ನದಲ್ಲೇ ಗಮನ ಸೆಳೆದಿದ್ದಾರೆ. ಪ್ರೇಮ್​ ಅವರನ್ನು ಇನ್ನಷ್ಟು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡದವರು ಮನಪೂರ್ವಕವಾಗಿ ಕೆಲಸ ಮಾಡಿದ್ದಾರೆ’ ಎಂದು ಶರಣ್​ ಹೊಗಳಿದ್ದಾರೆ.

ನಟ ಪ್ರೇಮ್​ ಅವರಿಗೆ ವಯಸ್ಸೇ ಆಗುವುದಿಲ್ಲವೇ ಎಂದು ಅಚ್ಚರಿಯ ಪ್ರಶ್ನೆ ಕೇಳಿದ್ದಾರೆ ನಟಿ ಖುಷಿ ರವಿ. ‘ದಿನದಿನಕ್ಕೂ ಪ್ರೇಮ್​ ಅವರು ಯಂಗ್​ ಆಗಿ ಕಾಣಿಸುತ್ತಾರೆ. ಈ ಸಿನಿಮಾ ಒಂದು ದೃಶ್ಯ ವೈಭವದಂತಿದೆ. ನಿಜವಾದ ಪ್ರೀತಿ ಬಗ್ಗೆ ಒಂದೊಳ್ಳೆಯ ಮೆಸೇಜ್​ ಈ ಸಿನಿಮಾದಲ್ಲಿದೆ. ಎಲ್ಲರೂ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಿ. ಓಟಿಟಿಗೋಸ್ಕರ ಕಾಯಬೇಡಿ’ ಎಂದು ಖುಷಿ ರವಿ ಹೇಳಿದ್ದಾರೆ.

ಖ್ಯಾತ ನಿರ್ದೇಶಕ ತರುಣ್​ ಸುಧೀರ್​ ಅವರು ಸಹ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ‘ಪ್ರೇಮ್​ ಹೀರೋ ಎಂದುಕೊಂಡು ಈ ಸಿನಿಮಾ ನೋಡಲು ಬಂದೆ. ಆದರೆ ಪೂರ್ತಿ ಸಿನಿಮಾ ನೋಡಿದ ಬಳಿಕ ಗೊತ್ತಾಯಿತು ಇದು ಮಲ್ಟಿಸ್ಟಾರರ್​ ಚಿತ್ರ. ನಿರ್ದೇಶಕ ರಾಘವೇಂದ್ರ ಮತ್ತು ಛಾಯಾಗ್ರಾಹಕ ನವೀನ್​ ಅವರನ್ನು ಕೂಡ ಈ ಸಿನಿಮಾದ ಹೀರೋಗಳು ಅಂತ ನಾನು ಹೇಳುತ್ತೇನೆ. ಈ ಮೂವರ ಜುಗಲ್​ಬಂದಿ ಚೆನ್ನಾಗಿ ಮೂಡಿಬಂದಿದೆ. ಒಂದು ಫ್ರೇಮ್​ ಕೂಡ ರಾಜಿ ಆಗಿಲ್ಲ’ ಎಂದು ತರುಣ್​ ಸುಧೀರ್​ ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

‘ನೆನಪಿರಲಿ’ ಪ್ರೇಮ್​ ಮುಂದಿನ ಚಿತ್ರಕ್ಕೆ 400 ಕೋಟಿ ರೂ. ಬಜೆಟ್​; ಹಾಲಿವುಡ್​ ಹಾದಿಯತ್ತ ‘ಲವ್ಲಿ ಸ್ಟಾರ್​’

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್