AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಣ’ ಸಿನಿಮಾ ವಿಮರ್ಶೆ: ಹಳ್ಳಿ ಜಾತ್ರೆಯಲ್ಲಿ ಧರ್ಮ ವರ್ಸಸ್ ಅಧರ್ಮ

‘ರೋಣ’ ಸಿನಿಮಾ ವಿಮರ್ಶೆ: ಹಳ್ಳಿ ಜಾತ್ರೆಯಲ್ಲಿ ಧರ್ಮ ವರ್ಸಸ್ ಅಧರ್ಮ
Raghu Raja Nanda
ರೋಣ
UA
  • Time - 126 Minutes
  • Released - November 7, 2025
  • Language - Kannada
  • Genre - Action, Drama
Cast - ರಘು ರಾಜ ನಂದ, ಶರತ್ ಲೋಹಿತಾಶ್ವ, ಪ್ರಕೃತಿ ಪ್ರಸಾದ್, ಬಾಲ ರಾಜವಾಡಿ, ಸಂಗೀತಾ, ಕೆ.ಎಸ್. ಶ್ರೀಧರ್ ಮುಂತಾದವರು.
Director - ಸತೀಶ್ ಕುಮಾರ್.
3
Critic's Rating
ಮದನ್​ ಕುಮಾರ್​
|

Updated on: Nov 07, 2025 | 8:28 PM

Share

‘ರೋಣ’ ಸಿನಿಮಾದಲ್ಲಿ ಹೊಸ ನಟ ರಘು ರಾಜ ನಂದ (Raghu Raja Nanda) ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ನವೆಂಬರ್ 7ರಂದು ಈ ಸಿನಿಮಾ ಬಿಡುಗಡೆ ಆಗಿದೆ. ಸತೀಶ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಧರ್ಮದ ಹಾದಿಯಲ್ಲಿ ನಡೆಯುವವರಿಗೆ ಅಧರ್ಮದ ಜನರು ಹೇಗೆಲ್ಲ ಕಾಟ ಕೊಡುತ್ತಾರೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಅಂತಿಮವಾಗಿ ಧರ್ಮವೇ ಗೆಲ್ಲುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಆ ಗೆಲುವಿಗಾಗಿ ಎಷ್ಟೆಲ್ಲ ಹೋರಾಟ ನಡೆಯುತ್ತದೆ ಎಂಬುದೇ ‘ರೋಣ’ (Rona Movie) ಸಿನಿಮಾದ ಸಾರಾಂಶ.

ರಾಜಕೀಯದ ಗಾಳಿ ಸೋಕಿದಲ್ಲೆಲ್ಲ ಭ್ರಷ್ಟಾಚಾರ ಇದ್ದೇ ಇರುತ್ತದೆ. ಹಳ್ಳಿ ಪಂಚಾಯಿತಿಯಿಂದ ದಿಲ್ಲಿಯ ಸಂಸತ್ ತನಕವೂ ಅವ್ಯವಹಾರ ಕಾಣಬಹುದು. ‘ರೋಣ’ ಸಿನಿಮಾದ ನಿರ್ದೇಶಕ ಸತೀಶ್ ಅವರು ಹಳ್ಳಿಗಾಡಿನಲ್ಲಿ ನಡೆಯುವ ರಾಜಕೀಯದ ಘಟನೆಗಳನ್ನೇ ಕೇಂದ್ರವಾಗಿಟ್ಟುಕೊಂಡು ಈ ಚಿತ್ರ ಮಾಡಿದ್ದಾರೆ. ಭೂಮಿ ಉಳಿಸಿಕೊಳ್ಳುವ ರೈತರು ಕಷ್ಟಪಡುವ ದೃಶ್ಯದಿಂದ ಸಿನಿಮಾ ಶುರು ಆಗುತ್ತದೆ. ಆರಂಭದಿಂದ ಕೊನೆಯ ತನಕ ಒಳಿತಿಗಾಗಿ ಹೀರೋ ಹೋರಾಡುತ್ತಲೇ ಇರುತ್ತಾನೆ.

ರಾಜಕಾರಣಿ ಅಲ್ಲದೇ ಇದ್ದರೂ ಜನಸೇವೆ ಮಾಡಲು ಸದಾ ಮುಂದಿರುವ ಊರಿನ ಹಿರಿಯನ ಪಾತ್ರದಲ್ಲಿ ಶರತ್ ಲೋಹಿತಾಶ್ವ ಅವರು ನಟಿಸಿದ್ದಾರೆ. ಅವರ ಪುತ್ರನ ಪಾತ್ರದಲ್ಲಿ ರಘು ರಾಜ ನಂದ ಅವರು ಅಭಿನಯಿಸಿದ್ದಾರೆ. ಇವರಿಬ್ಬರ ಜೊತೆಯಲ್ಲಿ ಬಾಲ ರಾಜವಾಡಿ ಅವರು ಕೂಡ ಅನೇಕ ದೃಶ್ಯಗಳಲ್ಲಿ ಸಾಥ್ ನೀಡಿದ್ದಾರೆ. ಹೀರೋ ಆಗಿ ಕಾಣಿಸಿಕೊಂಡ ಮೊದಲ ಸಿನಿಮಾದಲ್ಲೇ ಹಿರಿಯ ನಟರ ಜೊತೆ ತೆರೆಹಂಚಿಕೊಳ್ಳಲು ಸಿಕ್ಕ ಅವಕಾಶವನ್ನು ರಘು ರಾಜ ನಂದ ಅವರು ಸದ್ಬಳಕೆ ಮಾಡಿಕೊಂಡಿದ್ದಾರೆ.

ರಘು ರಾಜ ನಂದ ಅವರಿಗೆ ಜೋಡಿಯಾಗಿ ನಟಿ ಪ್ರಕೃತಿ ಪ್ರಸಾದ್ ಅವರು ಅಭಿನಯಿಸಿದ್ದಾರೆ. ವಿದ್ಯಾವಂತೆಯಾದರೂ ಹಳ್ಳಿಯಲ್ಲಿ ಇದ್ದು ಬಡವರಿಗೆ ಸಹಾಯ ಮಾಡಬೇಕು ಎಂಬ ಮನಸ್ಥಿತಿ ಇರುವ ಯುವತಿಯ ಪಾತ್ರದಲ್ಲಿ ಪ್ರಕೃತಿ ಅವರು ಕಾಣಿಸಿಕೊಂಡಿದ್ದಾರೆ. ರಘು ರಾಜ ನಂದ ಮತ್ತು ಪ್ರಕೃತಿ ಪ್ರಸಾದ್ ಅವರ ಕೆಮಿಸ್ಟ್ರಿ ಚೆನ್ನಾಗಿದೆ. ಹಾಡುಗಳಲ್ಲಿ ಮಿಂಚಿದ್ದು ಮಾತ್ರವಲ್ಲದೇ ಎಮೋಷನಲ್ ದೃಶ್ಯಗಳಲ್ಲೂ ಅವರು ಸೈ ಎನಿಸಿಕೊಂಡಿದ್ದಾರೆ.

ಹೊಸ ನಟನ ಪರಿಚಯಕ್ಕೆ ಬೇಕಾದ ಎಲ್ಲ ಅಂಶಗಳು ‘ರೋಣ’ ಸಿನಿಮಾದಲ್ಲಿ ಇವೆ. ನಟನೆ, ಡ್ಯಾನ್ಸ್, ಫೈಟ್ ಯಾವುದರಲ್ಲೂ ರಘು ರಾಜ ನಂದ ಅವರು ಹಿಂದೆ ಬಿದ್ದಿಲ್ಲ. ಕ್ಲಾಸ್ ಹಾಗೂ ಮಾಸ್ ಶೇಡ್ ಇರುವ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕಥೆಗೆ ಟ್ವಿಸ್ಟ್ ನೀಡುವಂತಹ ಪಾತ್ರದಲ್ಲಿ ಕೆ.ಎಸ್. ಶ್ರೀಧರ್ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: I Am God Review: ರಿಯಲ್ ಸ್ಟಾರ್ ಫ್ಯಾನ್ಸ್ ಇಷ್ಟಪಡುವಂತಿದೆ ಉಪ್ಪಿ ಶಿಷ್ಯನ ‘ಎ’ ಫ್ಲೇವರ್ ಸಿನಿಮಾ

ಈ ಸಿನಿಮಾದ ಬಹುತೇಕ ಕಥೆ ಗ್ರಾಮೀಣ ಪರಿಸರದಲ್ಲಿ ನಡೆಯುತ್ತದೆ. ಹಳ್ಳಿ ಎಂದಮೇಲೆ ಹಬ್ಬ, ಜಾತ್ರೆ ಇರಲೇಬೇಕು. ಕಾಳಿ ದೇವಿಯ ಜಾತ್ರೆಯನ್ನೇ ಹಿನ್ನೆಲೆಯಾಗಿ ಇಟ್ಟುಕೊಂಡು ಒಳಿತು ಮತ್ತು ಕೆಡುಕಿನ ನಡುವಿನ ಯುದ್ಧವನ್ನು ‘ರೋಣ’ ಚಿತ್ರದಲ್ಲಿ ತೋರಿಸಲಾಗಿದೆ. ಆದರೆ ಒಟ್ಟಾರೆ ಸಿನಿಮಾದಲ್ಲಿ ಹೆಚ್ಚೇನೂ ಹೊಸತನ ನಿರೀಕ್ಷಿಸಲು ಆಗದು. ಅದು ಈ ಚಿತ್ರಕ್ಕೆ ಮೈನಸ್ ಆಗಿದೆ. ಸಿದ್ಧಸೂತ್ರದ ಒಂದು ಕಮರ್​ಷಿಯಲ್ ಸಿನಿಮಾ ರೀತಿ ‘ರೋಣ’ ಮೂಡಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ