AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ

OMG 2 Movie Twitter Review: ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ.

‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Aug 11, 2023 | 12:46 PM

Share

ಅಕ್ಷಯ್ ಕುಮಾರ್, ಪಂಕಜ್ ತ್ರಿಪಾಠಿ (Pankaj Tripathi) ಹಾಗೂ ಯಾಮಿ ಗೌತಮ್ ನಟನೆಯ ‘ಒಎಂಜಿ 2’ ಸಿನಿಮಾ ಇಂದು (ಆಗಸ್ಟ್ 11) ರಿಲೀಸ್ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಈ ಸಿನಿಮಾ ಬಿಡುಗಡೆ ಆಗಿರುವುದರಿಂದ ಬಿಸ್ನೆಸ್ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಸಿನಿಮಾ ನೋಡಿದ ಅನೇಕರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅಕ್ಷಯ್ ಕುಮಾರ್ (Akshay Kumar) ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ಒಎಂಜಿ 2’ ಸಿನಿಮಾ ಲೈಂಗಿಕ ಶಿಕ್ಷಣದ ಬಗ್ಗೆ ಇದೆ. ಈ ಕಾರಣಕ್ಕೆ ಸಿನಿಮಾಗೆ ಸೆನ್ಸಾರ್ ಮಾಡಲು ಸಾಕಷ್ಟು ಸಮಯ ಹಿಡಿದಿತ್ತು. ಅನೇಕ ಮಾರ್ಪಾಡುಗಳನ್ನು ಮಾಡಿದ್ದಲ್ಲದೆ, ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲಾಗಿದೆ. ಈ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಅಟಲ್​ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್​​ ತ್ರಿಪಾಠಿ; ‘ಮೈ ಅಟಲ್​ ಹು’ ಫಸ್ಟ್​ ಲುಕ್​ ರಿಲೀಸ್​

‘ಇದೊಂದು ಪೈಸಾ ವಸೂಲ್ ಸಿನಿಮಾ. ಎಲ್ಲರೂ ನೋಡಲೇಬೇಕಾದ ಚಿತ್ರ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಆದರೆ, ಕೆಲವರಿಗೆ ಈ ಸಿನಿಮಾ ಅಷ್ಟಾಗಿ ಇಷ್ಟವಾಗಿಲ್ಲ. ಈ ಬಗ್ಗೆಯೂ ಬರೆದುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ