AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ

OMG 2 Movie Twitter Review: ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ.

‘ಒಎಂಜಿ 2’ ಚಿತ್ರ ಹೇಗಿದೆ? ಸಿನಿಮಾ ನೋಡಿದ ಟ್ವಿಟರ್ ಮಂದಿ ಹೇಳಿದ್ದು ಹೀಗೆ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Aug 11, 2023 | 12:46 PM

Share

ಅಕ್ಷಯ್ ಕುಮಾರ್, ಪಂಕಜ್ ತ್ರಿಪಾಠಿ (Pankaj Tripathi) ಹಾಗೂ ಯಾಮಿ ಗೌತಮ್ ನಟನೆಯ ‘ಒಎಂಜಿ 2’ ಸಿನಿಮಾ ಇಂದು (ಆಗಸ್ಟ್ 11) ರಿಲೀಸ್ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಈ ಸಿನಿಮಾ ಬಿಡುಗಡೆ ಆಗಿರುವುದರಿಂದ ಬಿಸ್ನೆಸ್ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಸಿನಿಮಾ ನೋಡಿದ ಅನೇಕರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅಕ್ಷಯ್ ಕುಮಾರ್ (Akshay Kumar) ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ಬಹುತೇಕ ಎಲ್ಲಾ ಸಿನಿಮಾಗಳು ಸೋಲು ಕಂಡಿವೆ. ಈಗ ‘ಒಎಂಜಿ 2’ ಚಿತ್ರದಿಂದ ಅವರು ಗೆಲ್ಲುವ ಭರವಸೆಯಲ್ಲಿ ಇದ್ದರು. ಈ ಭರವಸೆ ಈಡೇರುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ಒಎಂಜಿ 2’ ಸಿನಿಮಾ ಲೈಂಗಿಕ ಶಿಕ್ಷಣದ ಬಗ್ಗೆ ಇದೆ. ಈ ಕಾರಣಕ್ಕೆ ಸಿನಿಮಾಗೆ ಸೆನ್ಸಾರ್ ಮಾಡಲು ಸಾಕಷ್ಟು ಸಮಯ ಹಿಡಿದಿತ್ತು. ಅನೇಕ ಮಾರ್ಪಾಡುಗಳನ್ನು ಮಾಡಿದ್ದಲ್ಲದೆ, ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲಾಗಿದೆ. ಈ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಅಟಲ್​ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್​​ ತ್ರಿಪಾಠಿ; ‘ಮೈ ಅಟಲ್​ ಹು’ ಫಸ್ಟ್​ ಲುಕ್​ ರಿಲೀಸ್​

‘ಇದೊಂದು ಪೈಸಾ ವಸೂಲ್ ಸಿನಿಮಾ. ಎಲ್ಲರೂ ನೋಡಲೇಬೇಕಾದ ಚಿತ್ರ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಆದರೆ, ಕೆಲವರಿಗೆ ಈ ಸಿನಿಮಾ ಅಷ್ಟಾಗಿ ಇಷ್ಟವಾಗಿಲ್ಲ. ಈ ಬಗ್ಗೆಯೂ ಬರೆದುಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್