AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Review: ಪ್ರಕರಣ ತನಿಖಾ ಹಂತದಲ್ಲಿದೆ; ಡ್ರಗ್ಸ್ ಮಾಫಿಯಾ ಕುರಿತು ಚಿಕ್ಕದಾದ, ಚೊಕ್ಕದಾದ ಸಿನಿಮಾ

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದಲ್ಲಿ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇದೆ. ಸರಣಿ ಕೊಲೆಗಳ ಕಥೆಯ ಜೊತೆ ಸಮಾಜಕ್ಕೆ ಬೇಕಾದ ಒಂದು ಸಂದೇಶವನ್ನು ಕೂಡ ಈ ಸಿನಿಮಾ ನೀಡುತ್ತದೆ. ಹೊಸಬರು ಮಾಡಿದ ಈ ಪ್ರಯತ್ನ ಚಿಕ್ಕದಾಗಿ, ಚೊಕ್ಕದಾಗಿದೆ. ಈ ಸಿನಿಮಾಗೆ ಸುಂದರ್​ ಎಸ್. ಅವರು ನಿರ್ದೇಶನ ಮಾಡಿದ್ದಾರೆ. ಚಿಂತನ್ ಕಂಬಣ್ಣ ಅವರು ನಿರ್ಮಾಣ ಮಾಡಿದ್ದಾರೆ.

Review: ಪ್ರಕರಣ ತನಿಖಾ ಹಂತದಲ್ಲಿದೆ; ಡ್ರಗ್ಸ್ ಮಾಫಿಯಾ ಕುರಿತು ಚಿಕ್ಕದಾದ, ಚೊಕ್ಕದಾದ ಸಿನಿಮಾ
‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on: Oct 18, 2024 | 10:51 PM

Share

ಸಿನಿಮಾ: ಪ್ರಕರಣ ತನಿಖಾ ಹಂತದಲ್ಲಿದೆ. ನಿರ್ಮಾಣ: ಚಿಂತನ್ ಕಂಬಣ್ಣ. ನಿರ್ದೇಶನ: ಸುಂದರ್ ಎಸ್​. ಪಾತ್ರವರ್ಗ: ಮಾಹಿನ್ ಕುಬೇರ್, ಮುತ್ತುರಾಜ್ ಟಿ, ಪ್ರದೀಪ್ ಕುಮಾರ್, ರಾಜ್ ಗಗನ್, ಶಿವು ಭೈರ, ಚಿಂತನ್ ಕಂಬಣ್ಣ, ಮಧು ಬಿಜೆ, ಗಣೇಶ್ ಆರ್​. ಮುಂತಾದವರು. ಸ್ಟಾರ್​ 3/5

ಕೊಲೆ ರಹಸ್ಯದ ಸಿನಿಮಾಗಳು ಎಂದರೆ ಒಂದು ವರ್ಗದ ಪ್ರೇಕ್ಷಕರಿಗೆ ಸಖತ್ ಇಷ್ಟ. ಕೊಲೆಗಾರ ಯಾರು ಎಂಬುದನ್ನು ಪತ್ತೆಹಚ್ಚುವ ಕಥೆಯನ್ನು ನೋಡುವಾಗ ಏನೋ ಒಂಥರಾ ಥ್ರಿಲ್. ಹಾಗಾಗಿ ಅಂತಹ ಸಿನಿಮಾಗಳು ಆಗಾಗ ನಿರ್ಮಾಣ ಆಗುತ್ತವೆ. ಈ ವಾರ (ಅ.18) ಕನ್ನಡದಲ್ಲಿ ‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಬಿಡುಗಡೆ ಆಗಿದ್ದು, ಇದರಲ್ಲಿ ಕೂಡ ಮರ್ಡರ್​ ಮಿಸ್ಟರಿ ಕಹಾನಿ ಇದೆ. ಸಸ್ಪೆನ್ಸ್ ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾದಲ್ಲಿ ಹೊಸ ಕಲಾವಿದರು ನಟಿಸಿದ್ದಾರೆ. ಸಿನಿಮಾ ಹೇಗಿದೆ ಎಂಬುದರ ವಿಮರ್ಶೆ ಇಲ್ಲದೆ..

‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾದ ಕಥೆ ಆರಂಭ ಆಗುವುದು ಒಂದು ಡ್ರಗ್ಸ್ ಮಾಫಿಯಾದ ಮೂಲಕ. ಕೋಟ್ಯಂತರ ಬೆಲೆಯ ಮಾದಕ ವಸ್ತುವನ್ನು ಕಳ್ಳಸಾಗಣೆ ಮಾಡುವ ಜಾಲದಲ್ಲಿ ಖದೀಮರು ತೊಡಗಿರುತ್ತಾರೆ. ಇನ್ನೇನು ಅವರ ಪ್ಲ್ಯಾನ್ ಯಶಸ್ವಿ ಆಗಬೇಕು ಎಂಬಷ್ಟರಲ್ಲಿ ಒಂದು ಕೊಲೆ ನಡೆಯುತ್ತದೆ. ಸತ್ತವನು ಯಾರು ಎಂಬುದನ್ನು ತಿಳಿಯುತ್ತಿರುವಾಗಲೇ ಹೊಸ ಹೊಸ ಟ್ವಿಸ್ಟ್​ಗಳು ಎದುರಾಗುತ್ತವೆ. ನಂತರ ಒಂದರ ಮೇಲೊಂದು ಕೊಲೆ ನಡೆಯುತ್ತದೆ. ಈ ಸಿನಿಮಾದಲ್ಲಿ ಇರುವುದು ಕೆಲವೇ ಪಾತ್ರಗಳಾದರೂ ಆ ಪೈಕಿ ಹಲವರ ಮೇಲೆ ಅನುಮಾನ ಮೂಡುತ್ತದೆ. ಅಂತಿಮವಾಗಿ ಕೊಲೆಗಳ ರೂವಾರಿ ಯಾರು? ಆತನ ಉದ್ದೇಶ ಏನು ಎಂಬುದು ತಿಳಿಯಲು ಪೂರ್ತಿ ಸಿನಿಮಾ ನೋಡಬೇಕು.

ಈ ಸಿನಿಮಾದ ಪ್ಲಸ್ ಪಾಯಿಂಟ್​ ಏನೆಂದರೆ, ಕಥೆಯನ್ನು ತುಂಬ ಚುರುಕಾಗಿ ಹೇಳಿ ಮುಗಿಸಲಾಗಿದೆ. ಇಡೀ ಸಿನಿಮಾದ ಅವಧಿ 95 ನಿಮಿಷಗಳು ಮಾತ್ರ. ಅಂದರೆ, 1 ಗಂಟೆ 35 ನಿಮಿಷದಲ್ಲಿ ಸಿನಿಮಾ ಪೂರ್ಣಗೊಳ್ಳುತ್ತದೆ. ಯಾವುದೇ ಅನಗತ್ಯ ದೃಶ್ಯಗಳನ್ನು ಸೇರಿಸದೇ, ಮುಖ್ಯವಾದ ವಿಷಯದ ಮೇಲೆಯೇ ಸಿನಿಮಾ ಸಾಗುವಂತೆ ನಿರ್ದೇಶಕರು ಗಮನ ಹರಿಸಿದ್ದಾರೆ. ಬಹುತೇಕ ಹೊಸ ಕಲಾವಿದರೇ ನಟಿಸಿರುವುದರಿಂದ ಯಾವ ಪಾತ್ರದ ಬಗ್ಗೆಯೂ ಪೂರ್ವಾಗ್ರಹ ಇಲ್ಲದೇ ನೋಡಿಸಿಕೊಂಡು ಹೋಗುವ ಗುಣ ಈ ಸಿನಿಮಾಗಿದೆ. ಒಂದು ಸಸ್ಪೆನ್ಸ್​ ಕಥೆಗೆ ಇರಬೇಕಾದ ಮುಖ್ಯ ಆಧಾರವಿದು. ಆ ವಿಚಾರದಲ್ಲಿ ‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಗಮನ ಸೆಳೆಯುತ್ತದೆ.

ಮಾಹಿನ್ ಕುಬೇರ್, ಚಿಂತನ್ ಕಂಬಣ್ಣ, ರಾಜ್ ಗಗನ್, ಮುತ್ತುರಾಜ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಖಡಕ್ ಪೊಲೀಸ್ ಅಧಿಕಾರಿಯಾಗಿ ಮಾಹಿನ್ ಕುಬೇರ್ ಅವರು ನಟಿಸಿದ್ದಾರೆ. ವೈದ್ಯನಾಗಿ ಎರಡು ಶೇಡ್​ ಇರುವ ಪಾತ್ರದಲ್ಲಿ ಚಿಂತನ್ ಕಂಬಣ್ಣ ಅವರು ಕಾಣಿಸಿಕೊಂಡಿದ್ದಾರೆ. ಆಯಾ ಪಾತ್ರಗಳಿಗೆ ಸಮಾನವಾದ ಪ್ರಾಮುಖ್ಯತೆ ನೀಡಲಾಗಿದೆ. ಶಿವೋಂ ಪ್ರಸಾದ್​ ಅವರ ಸಂಗೀತದಿಂದಾಗಿ ಸಿನಿಮಾದ ತೂಕ ಹೆಚ್ಚಿದೆ.

ಇದನ್ನೂ ಓದಿ: Martin Review: ಆರ್ಭಟಕ್ಕೆ, ಅದ್ದೂರಿತನಕ್ಕೆ, ಆ್ಯಕ್ಷನ್​ಗೆ ಆದ್ಯತೆ ನೀಡಿದ ಮಾರ್ಟಿನ್

ಈ ಸಮಾಜದಲ್ಲಿ ಡ್ರಗ್ಸ್​ ದೊಡ್ಡ ಪಿಡುಗಾಗಿದೆ. ಯುವ ಜನತೆಗೆ ಮಾರಕವಾಗಿರುವ ಮಾದಕ ದ್ರವ್ಯದ ಬಗ್ಗೆ ಎಚ್ಚರಿಕೆ ಸಂದೇಶ ನೀಡುವ ಪ್ರಯತ್ನವನ್ನು ‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಮೂಲಕ ಮಾಡಲಾಗಿದೆ. ದುಷ್ಟ ಸಂಹಾರದ ಥೀಮ್​ನಲ್ಲಿ ಸಿನಿಮಾ ಮೂಡಿಬಂದಿದೆ. ಆದರೆ ಕಥೆಯಲ್ಲಿ ಇನ್ನಷ್ಟು ಹೊಸತನ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎನಿಸುತ್ತದೆ. ಕೆಲವು ಟ್ವಿಸ್ಟ್​ಗಳನ್ನು ಪ್ರೇಕ್ಷಕರು ಸುಲಭವಾಗಿ ಊಹಿಸಬಹುದು. ಇಂಥ ಸಣ್ಣ ಪುಟ್ಟ ಮೈನಸ್ ಪಾಯಿಂಟ್​ಗಳ ನಡುವೆಯೂ ಚಿಕ್ಕ-ಚೊಕ್ಕ ಸಿನಿಮಾಗಾಗಿ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ನೋಡಿಸಿಕೊಂಡು ಸಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು