AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಚಿತ್ರ? ಇಲ್ಲಿದೆ ಮೊದಲಾರ್ಧದ ಹೈಲೈಟ್

‘ಪುಷ್ಪ’ ಸಿನಿಮಾ ಹಿಟ್ ಆದ ಬಳಿಕ ‘ಪುಷ್ಪ 2’ ಸಿನಿಮಾ ರಿಲೀಸ್ ಆಗಿದೆ. ಬಿಗ್ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಸಿನಿಮಾದ ಮೊದಲಾರ್ಧದ ಬಗ್ಗೆ ಈ ಸ್ಟೋರಿಯಲ್ಲಿದೆ ಮಾಹಿತಿ.

ಹೇಗಿದೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಚಿತ್ರ? ಇಲ್ಲಿದೆ ಮೊದಲಾರ್ಧದ ಹೈಲೈಟ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 04, 2024 | 11:52 PM

Share

‘ಪುಷ್ಪ 2’ ಚಿತ್ರಕ್ಕೆ ಭರ್ಜರಿ ಹೈಪ್ ನೀಡಲಾಗಿದೆ. ಅಲ್ಲು ಅರ್ಜುನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರೆ, ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ಮಿಂಚಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ದೊಡ್ಡ ಮೊತ್ತದಲ್ಲಿ ನಿರ್ಮಾಣ ಮಾಡಿದೆ. ಮೊದಲ ಭಾಗ ಹಿಟ್ ಆಗಿರುವುದರಿಂದ ಸಹಜವಾಗಿಯೇ ಎರಡನೇ ಭಾಗದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಮೊದಲಾರ್ಧದಲ್ಲಿ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಅಲ್ಲು ಅರ್ಜುನ್ ಅವರು ‘ಪುಷ್ಪ’ ಚಿತ್ರದಲ್ಲಿ ಮಾಸ್ ಆಗಿ ಕಾಣಿಸಿಕೊಂಡಿದ್ದರು. ಅದು ಎರಡನೇ ಪಾರ್ಟ್‌ನಲ್ಲೂ ಮುಂದುವರಿದಿದೆ. ಅವರು ಮತ್ತಷ್ಟು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ಮಾಸ್ ಆಗಿ ಎಂಟ್ರಿ ಕೊಟ್ಟರೆ ಫ್ಯಾನ್ಸ್ ಖುಷಿಪಡುತ್ತಾರೆ. ಅದೇ ರೀತಿ ಅಲ್ಲು ಅರ್ಜುನ್ ಅವರ ಎಂಟ್ರಿ ಸಖತ್ ಮಾಸ್ ಆಗಿ ಇದೆ. ಮೊದಲಿಗೆ ಬಿಗ್ ಫೈಟ್ ಇದೆ.

ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಪುಷ್ಪರಾಜ್‌ನ ವಿವಾಹ ಆಗಿದ್ದಾಳೆ. ಎರಡನೇ ಪಾರ್ಟ್‌ನ ಮೊದಲಾರ್ಧದಲ್ಲಿ ಅವರಿಗೆ ಹೆಚ್ಚಿನ ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ಶ್ರೀಲೀಲಾ ಡ್ಯಾನ್ಸ್ ಮಾಡಿರೋ ‘ಕಿಸ್ ಕಿಸ್ ಕಿಸಕ್’ ಹಾಡು ಮೊದಲಾರ್ಧದಲ್ಲಿ ಬರೋದಿಲ್ಲ. ಇದಕ್ಕಾಗಿ ದ್ವಿತೀಯಾರ್ಧದ ವರೆಗೆ ಕಾಯಬೇಕು.

ಡಾಲಿ ಧನಂಜಯ್ ಅವರು ಜಾಲಿ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ‘ಪುಷ್ಪ 2’ ಚಿತ್ರದ ಮೊದಲಾರ್ಧದಲ್ಲಿ ಬರಲ್ಲ.

ಮೊದಲಾರ್ಧದಲ್ಲಿ ಭರ್ಜರಿ ಫೈಟ್‌ಗಳನ್ನು ಇಟ್ಟಿದ್ದಾರೆ ಸುಕುಮಾರ್. ಹೊಡಿಬಡಿ ಇಷ್ಟ ಆಗುವವರಿಗೆ ‘ಪುಷ್ಪ 2’ ಚಿತ್ರದ ಮೊದಲಾರ್ಧ ಇಷ್ಟ ಆಗುತ್ತದೆ.

‘ಪುಷ್ಪ’ ಚಿತ್ರದಲ್ಲಿ ಪುಷ್ಪರಾಜ್ ಸಾಮಾನ್ಯ ವ್ಯಕ್ತಿಯಾಗಿರುತ್ತಾನೆ. ನಂತರ ಆತ ದೊಡ್ಡ ಡಾನ್ ಆಗುತ್ತಾನೆ. ಡಾನ್ ಆದ ನಂತರದ ಕಥೆಯೇ ‘ಪುಷ್ಪ 2’ ಚಿತ್ರದ ಮೊದಲಾರ್ಧದಲ್ಲಿ ಇದೆ.

‘ಪುಷ್ಪ’ ಚಿತ್ರದ ಮುಖ್ಯ ವಿಚಾರವೇ ರಕ್ತ ಚಂದನದ ವಿಚಾರ. ಎರಡನೇ ಪಾರ್ಟ್‌ನಲ್ಲು ರಕ್ತ ಚಂದನದ ವಿಚಾರ ಹೈಲೈಟ್ ಆಗಿದೆ.

ಶೇಖಾವತ್ ಹಾಗೂ ಪುಷ್ಪರಾಜ್ ಮಧ್ಯೆ ಇಗೋ ಕಿತ್ತಾಟ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು