AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?

Salaar First Half Review: ‘ಸಲಾರ್’ ಸಿನಿಮಾ ಇಂದು ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ. 

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
| Updated By: Ganapathi Sharma

Updated on: Dec 22, 2023 | 6:35 AM

‘ಸಲಾರ್’ ಸಿನಿಮಾ (Salaar Movie) ಬಗ್ಗೆ ನಿರೀಕ್ಷೆ ಹುಟ್ಟಲು ಹಲವು ಕಾರಣಗಳು ಇವೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಕೆಜಿಎಫ್’ ಅಂಥ ಸೂಪರ್ ಹಿಟ್ ಚಿತ್ರ ನೀಡಿದ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಭಾಸ್ ಜೊತೆ ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಸೇರಿದಂತೆ ದೊಡ್ಡ ಪಾತ್ರವರ್ಗ ಇದೆ. ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

  1. ಆರಂಭದಲ್ಲಿ ಬಾಲ್ಯದ ಕಥೆಯನ್ನು ತೋರಿಸಲಾಗಿದೆ. ದೇವ ಹಾಗೂ ವರದರಾಜ್ ಸ್ನೇಹ ಅವರ ಗೆಳೆತನ ಹೈಲೈಟ್ ಆಗಿದೆ.
  2. ಪ್ರಭಾಸ್ ಅವರ ಎಂಟ್ರಿ ಮಾಸ್ ಆಗಿಲ್ಲ. ಆದರೆ, ಅಭಿಮಾನಿಗಳು ಯಾವ ರೀತಿಯಲ್ಲಿ ನಿರೀಕ್ಷಿಸಿದ್ದರೋ ಅದೇ ರೀತಿಯಲ್ಲಿ ಪ್ರಭಾಸ್ ಅವರ ಎಂಟ್ರಿ ಇದೆ.
  3. ಟ್ರೇಲರ್ನಲ್ಲಿ ಡಾರ್ಕ್ ಶೇಡ್ ಹೆಚ್ಚಿತ್ತು. ಸಿನಿಮಾದ ಮೊದಲಾರ್ಧ ಅದೇ ರೀತಿಯಲ್ಲಿ ಸಾಗಿದೆ. ಡಾರ್ಕ್ ಶೇಡ್ ಪ್ರೇಕ್ಷಕರನ್ನು ಆವರಿಸಿಕೊಳ್ಳುತ್ತದೆ.
  4. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯವರು ಎ ಪ್ರಮಾಣ ಪತ್ರ ನೀಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದಲ್ಲಿ ಭರ್ಜರಿ ವೈಲೆನ್ಸ್ ತೋರಿಸಲಾಗಿದೆ.
  5. ಪ್ರಶಾಂತ್ ನೀಲ್ ಅವರು ಆ್ಯಕ್ಷನ್ ಇರುವ ಪವರ್ಫುಲ್ ಸಿನಿಮಾ ಮಾಡಿದ್ದಾರೆ. ಮೊದಲಾರ್ಧದುದ್ದಕ್ಕೂ ಆ್ಯಕ್ಷನ್ ಹೈಲೈಟ್ ಆಗಿದೆ.
  6. ಪ್ರಭಾಸ್ ಅವರು ಎರಡು ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‌ ಅವರ ಪಾತ್ರ ಇಷ್ಟವಾಗುತ್ತದೆ.
  7. ರವಿ ಬಸ್ರೂರು ಅವರ ಬಿಜಿಎಂ ಕೇಳುಗರ ಎದೆಯಲ್ಲಿ ನಡುಕ ಹುಟ್ಟಿಸುತ್ತದೆ. ಒಂದು ಹಾಡು ಕೂಡ ಇಷ್ಟ ಆಗುತ್ತದೆ.
  8. ಪೃಥ್ವಿರಾಜ್ ಸುಕುಮಾರನ್ ಒಮ್ಮೆ ಮಾತ್ರ ಕಾಣುತ್ತಾರೆ.‌ ಮೊದಲಾರ್ಧದಲ್ಲಿ ಬಾಲ್ಯದ ಕಥೆ ಹೈಲೈಟ್ ಆಗಿದೆ.
  9. ‘ಉಗ್ರಂ’ ಸಿನಿಮಾದ ರಿಮೇಕ್ ಅಲ್ಲ ಎಂದು ತಂಡ ಹೇಳಿತ್ತು.‌ ಆದರೆ ಅದು ಸುಳ್ಳಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ