AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?

Salaar First Half Review: ‘ಸಲಾರ್’ ಸಿನಿಮಾ ಇಂದು ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ. 

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?
ಪ್ರಭಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Dec 22, 2023 | 6:35 AM

Share

‘ಸಲಾರ್’ ಸಿನಿಮಾ (Salaar Movie) ಬಗ್ಗೆ ನಿರೀಕ್ಷೆ ಹುಟ್ಟಲು ಹಲವು ಕಾರಣಗಳು ಇವೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಕೆಜಿಎಫ್’ ಅಂಥ ಸೂಪರ್ ಹಿಟ್ ಚಿತ್ರ ನೀಡಿದ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಭಾಸ್ ಜೊತೆ ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಸೇರಿದಂತೆ ದೊಡ್ಡ ಪಾತ್ರವರ್ಗ ಇದೆ. ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

  1. ಆರಂಭದಲ್ಲಿ ಬಾಲ್ಯದ ಕಥೆಯನ್ನು ತೋರಿಸಲಾಗಿದೆ. ದೇವ ಹಾಗೂ ವರದರಾಜ್ ಸ್ನೇಹ ಅವರ ಗೆಳೆತನ ಹೈಲೈಟ್ ಆಗಿದೆ.
  2. ಪ್ರಭಾಸ್ ಅವರ ಎಂಟ್ರಿ ಮಾಸ್ ಆಗಿಲ್ಲ. ಆದರೆ, ಅಭಿಮಾನಿಗಳು ಯಾವ ರೀತಿಯಲ್ಲಿ ನಿರೀಕ್ಷಿಸಿದ್ದರೋ ಅದೇ ರೀತಿಯಲ್ಲಿ ಪ್ರಭಾಸ್ ಅವರ ಎಂಟ್ರಿ ಇದೆ.
  3. ಟ್ರೇಲರ್ನಲ್ಲಿ ಡಾರ್ಕ್ ಶೇಡ್ ಹೆಚ್ಚಿತ್ತು. ಸಿನಿಮಾದ ಮೊದಲಾರ್ಧ ಅದೇ ರೀತಿಯಲ್ಲಿ ಸಾಗಿದೆ. ಡಾರ್ಕ್ ಶೇಡ್ ಪ್ರೇಕ್ಷಕರನ್ನು ಆವರಿಸಿಕೊಳ್ಳುತ್ತದೆ.
  4. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯವರು ಎ ಪ್ರಮಾಣ ಪತ್ರ ನೀಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದಲ್ಲಿ ಭರ್ಜರಿ ವೈಲೆನ್ಸ್ ತೋರಿಸಲಾಗಿದೆ.
  5. ಪ್ರಶಾಂತ್ ನೀಲ್ ಅವರು ಆ್ಯಕ್ಷನ್ ಇರುವ ಪವರ್ಫುಲ್ ಸಿನಿಮಾ ಮಾಡಿದ್ದಾರೆ. ಮೊದಲಾರ್ಧದುದ್ದಕ್ಕೂ ಆ್ಯಕ್ಷನ್ ಹೈಲೈಟ್ ಆಗಿದೆ.
  6. ಪ್ರಭಾಸ್ ಅವರು ಎರಡು ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‌ ಅವರ ಪಾತ್ರ ಇಷ್ಟವಾಗುತ್ತದೆ.
  7. ರವಿ ಬಸ್ರೂರು ಅವರ ಬಿಜಿಎಂ ಕೇಳುಗರ ಎದೆಯಲ್ಲಿ ನಡುಕ ಹುಟ್ಟಿಸುತ್ತದೆ. ಒಂದು ಹಾಡು ಕೂಡ ಇಷ್ಟ ಆಗುತ್ತದೆ.
  8. ಪೃಥ್ವಿರಾಜ್ ಸುಕುಮಾರನ್ ಒಮ್ಮೆ ಮಾತ್ರ ಕಾಣುತ್ತಾರೆ.‌ ಮೊದಲಾರ್ಧದಲ್ಲಿ ಬಾಲ್ಯದ ಕಥೆ ಹೈಲೈಟ್ ಆಗಿದೆ.
  9. ‘ಉಗ್ರಂ’ ಸಿನಿಮಾದ ರಿಮೇಕ್ ಅಲ್ಲ ಎಂದು ತಂಡ ಹೇಳಿತ್ತು.‌ ಆದರೆ ಅದು ಸುಳ್ಳಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು