AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?

Salaar First Half Review: ‘ಸಲಾರ್’ ಸಿನಿಮಾ ಇಂದು ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ. 

Salaar Movie: ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ ‘ಸಲಾರ್’ ಚಿತ್ರದ ಮೊದಲಾರ್ಧ?
ಪ್ರಭಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Dec 22, 2023 | 6:35 AM

Share

‘ಸಲಾರ್’ ಸಿನಿಮಾ (Salaar Movie) ಬಗ್ಗೆ ನಿರೀಕ್ಷೆ ಹುಟ್ಟಲು ಹಲವು ಕಾರಣಗಳು ಇವೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಕೆಜಿಎಫ್’ ಅಂಥ ಸೂಪರ್ ಹಿಟ್ ಚಿತ್ರ ನೀಡಿದ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಭಾಸ್ ಜೊತೆ ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಸೇರಿದಂತೆ ದೊಡ್ಡ ಪಾತ್ರವರ್ಗ ಇದೆ. ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಟ್ರೇಲರ್ ಮೂಲಕ ಈ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಈ ನಿರೀಕ್ಷೆಯ ಕಥೆ ಏನಾಯಿತು? ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಯಿತೇ? ಸಿನಿಮಾ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

  1. ಆರಂಭದಲ್ಲಿ ಬಾಲ್ಯದ ಕಥೆಯನ್ನು ತೋರಿಸಲಾಗಿದೆ. ದೇವ ಹಾಗೂ ವರದರಾಜ್ ಸ್ನೇಹ ಅವರ ಗೆಳೆತನ ಹೈಲೈಟ್ ಆಗಿದೆ.
  2. ಪ್ರಭಾಸ್ ಅವರ ಎಂಟ್ರಿ ಮಾಸ್ ಆಗಿಲ್ಲ. ಆದರೆ, ಅಭಿಮಾನಿಗಳು ಯಾವ ರೀತಿಯಲ್ಲಿ ನಿರೀಕ್ಷಿಸಿದ್ದರೋ ಅದೇ ರೀತಿಯಲ್ಲಿ ಪ್ರಭಾಸ್ ಅವರ ಎಂಟ್ರಿ ಇದೆ.
  3. ಟ್ರೇಲರ್ನಲ್ಲಿ ಡಾರ್ಕ್ ಶೇಡ್ ಹೆಚ್ಚಿತ್ತು. ಸಿನಿಮಾದ ಮೊದಲಾರ್ಧ ಅದೇ ರೀತಿಯಲ್ಲಿ ಸಾಗಿದೆ. ಡಾರ್ಕ್ ಶೇಡ್ ಪ್ರೇಕ್ಷಕರನ್ನು ಆವರಿಸಿಕೊಳ್ಳುತ್ತದೆ.
  4. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯವರು ಎ ಪ್ರಮಾಣ ಪತ್ರ ನೀಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದಲ್ಲಿ ಭರ್ಜರಿ ವೈಲೆನ್ಸ್ ತೋರಿಸಲಾಗಿದೆ.
  5. ಪ್ರಶಾಂತ್ ನೀಲ್ ಅವರು ಆ್ಯಕ್ಷನ್ ಇರುವ ಪವರ್ಫುಲ್ ಸಿನಿಮಾ ಮಾಡಿದ್ದಾರೆ. ಮೊದಲಾರ್ಧದುದ್ದಕ್ಕೂ ಆ್ಯಕ್ಷನ್ ಹೈಲೈಟ್ ಆಗಿದೆ.
  6. ಪ್ರಭಾಸ್ ಅವರು ಎರಡು ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‌ ಅವರ ಪಾತ್ರ ಇಷ್ಟವಾಗುತ್ತದೆ.
  7. ರವಿ ಬಸ್ರೂರು ಅವರ ಬಿಜಿಎಂ ಕೇಳುಗರ ಎದೆಯಲ್ಲಿ ನಡುಕ ಹುಟ್ಟಿಸುತ್ತದೆ. ಒಂದು ಹಾಡು ಕೂಡ ಇಷ್ಟ ಆಗುತ್ತದೆ.
  8. ಪೃಥ್ವಿರಾಜ್ ಸುಕುಮಾರನ್ ಒಮ್ಮೆ ಮಾತ್ರ ಕಾಣುತ್ತಾರೆ.‌ ಮೊದಲಾರ್ಧದಲ್ಲಿ ಬಾಲ್ಯದ ಕಥೆ ಹೈಲೈಟ್ ಆಗಿದೆ.
  9. ‘ಉಗ್ರಂ’ ಸಿನಿಮಾದ ರಿಮೇಕ್ ಅಲ್ಲ ಎಂದು ತಂಡ ಹೇಳಿತ್ತು.‌ ಆದರೆ ಅದು ಸುಳ್ಳಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ