AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ.

‘ಪ್ರಭಾಸ್ ಮಾಸ್ ಕಂಬ್ಯಾಕ್’; ‘ಸಲಾರ್’ ನೋಡಿ ಟ್ವಿಟರ್​ನಲ್ಲಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Dec 22, 2023 | 11:04 AM

Share

ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಸಿನಿಮಾ ಸುಳ್ಳು ಮಾಡಿಲ್ಲ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಪ್ರಭಾಸ್ ಅವರು ರಕ್ತದಲ್ಲಿ ಮಿಂದೆದ್ದಿದ್ದಾರೆ. ಪಕ್ಕಾ ಆ್ಯಕ್ಷನ್ ಸಿನಿಮಾ ಮೂಲಕ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ.

ಆ್ಯಕ್ಷನ್ ಪ್ರಿಯರಿಗೆ ಪ್ರಶಾಂತ್ ನೀಲ್ ಅವರು ಎಂದಿಗೂ ನಿರಾಸೆ ಮಾಡಿದವರಲ್ಲ. ‘ಸಲಾರ್’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇಡಲಾಗಿದೆ. ಪ್ರಭಾಸ್ ಅವರು ಧೂಳೆಬ್ಬಿಸಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಥಿಯೇಟರ್​ನಲ್ಲಿ ಸಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ. ‘ಸಲಾರ್’ ಸಿನಿಮಾನ ಎರಡು ಬಾರಿ ನೋಡಿದ್ದಾಗಿ ಕೆಲವರು ಹೇಳಿದ್ದಾರೆ. ‘ಬಾಹುಬಲಿ ಈಸ್ ಬ್ಯಾಕ್. ಕನ್​ಫ್ಯೂಷನ್ ಬೇಡ, ಕೇವಲ ಗೂಸ್​ಬಂಪ್ಸ್’ ಎಂದಿದ್ದಾರೆ ಪ್ರಭಾಸ್ ಅಭಿಮಾನಿಗಳು.

ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಇದು ಎಂಬುದನ್ನು ತಂಡ ಈ ಮೊದಲು ಒಪ್ಪಿಕೊಂಡಿರಲಿಲ್ಲ. ಸಿನಿಮಾ ನೋಡಿದವರಿಗೆ ‘ಉಗ್ರಂ’ ಸಿನಿಮಾದ ಲೈನ್ ಕಾಣಿಸಿದೆ. ಇದು ಕೆಲವರಿಗೆ ಬೇಸರ ಮೂಡಿಸಿದೆ. ‘ಹೈ ಬಜೆಟ್ ಉಗ್ರಂ’ ಎಂದು ಅನೇಕರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಸಿಂಹಾಸನಕ್ಕೆ ನಡೆಯುವ ಕಿತ್ತಾಟದಲ್ಲಿ ಆ್ಯಕ್ಷನ್​ ವೈಭವ; ಹಳೆಯ ಕಥೆಗೆ ಹೊಸ ಮಸಾಲ

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಸಿನಿಮಾ ಉದ್ದಕ್ಕೂ ಪ್ರಭಾಸ್ ಅಬ್ಬರಿಸಿದ್ದಾರೆ. ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮೊದಲಾದವರ ಪಾತ್ರ ಹೈಲೈಟ್ ಆಗಿದೆ. ಕಾರ್ತಿಕ್ ಗೌಡ ಅವರ ಛಾಯಾಗ್ರಹಣ ಗಮನ ಸೆಳೆದಿದೆ. ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಬದಲಾವಣೆ ಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ